ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾಗೆ ಸೋಲು
ಬ್ಯಾಟಿಂಗ್ನಲ್ಲಿ ಕೆಎಲ್ ರಾಹುಲ್, ರಿಷಭ್ ಪಂತ್ ಸಂಪೂರ್ಣ ವೈಫಲ್ಯ!
ರೋಹಿತ್ ಶರ್ಮಾ, ಹೆಡ್ ಕೋಚ್ ಗೌತಮ್ ಗಂಭೀರ್ಗೆ ದೊಡ್ಡ ಚಿಂತೆ
ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 0-2 ಅಂತರದಲ್ಲಿ ಸೋಲು ಅನುಭವಿಸಿದೆ. ಈ ಸೋಲಿನಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಮುನ್ನ ಭಾರತ ತಂಡಕ್ಕೆ ಭಾರೀ ಹಿನ್ನಡೆ ಆಗಿದೆ. ಮುಂದೆ 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಅದಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡ ಆಡುವುದು ಕೇವಲ ಏಕದಿನ ಪಂದ್ಯಗಳು ಮಾತ್ರ.
ಭಾರತ ತಂಡವು 2025ರ ಜನವರಿಯಲ್ಲಿ ಇಂಗ್ಲೆಂಡ್ ಏಕದಿನ ಸರಣಿ ಆಡಲಿದೆ. ಹಾಗಾಗಿ ಇದಾದ ಬೆನ್ನಲ್ಲೇ ನಡೆಯಲಿರೋ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ಟೀಮ್ ಇಂಡಿಯಾ ತಯಾರು ಮಾಡಬೇಕಿದೆ. ಸ್ಟಾರ್ ಆಟಗಾರರೇ ಬ್ಯಾಟಿಂಗ್ನಲ್ಲಿ ವೈಫಲ್ಯರಾಗಿದ್ದು, ಬಲಿಷ್ಠ ತಂಡ ಕಟ್ಟುವುದು ಹೇಗೆ? ಅನ್ನೋ ಚಿಂತೆ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಹೆಡ್ ಕೋಚ್ ಗೌತಮ್ ಗಂಭೀರ್ ಅವರಿಗೆ ಕಾಡುತ್ತಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆದಾರರು ಕಸರತ್ತು ನಡೆಸುತ್ತಿದ್ದಾರೆ. ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮತ್ತು ಜಸ್ಪ್ರೀತ್ ಬುಮ್ರಾ ಅವರ ಸ್ಥಾನಗಳು ಪಕ್ಕಾ ಆಗಿವೆ. ಉಳಿದ ಆಟಗಾರರಿಗಾಗಿ ಇನ್ನೂ ಸ್ಪರ್ಧೆ ಮುಂದುವರಿದಿದೆ. ವೈಸ್ ಕ್ಯಾಪ್ಟನ್ ಆಗಿರೋ ಶುಭ್ಮನ್ ಗಿಲ್ ಕೂಡ ಆಡುವುದು ಪಕ್ಕಾ.
ಕೆ.ಎಲ್ ರಾಹುಲ್ಗೆ ಕೊಕ್..!
ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ವಿಕೆಟ್ ಕೀಪರ್ಗಳಾಗಿ ಕೆಎಲ್ ರಾಹುಲ್ ಮತ್ತು ರಿಷಭ್ ಪಂತ್ ಆಡಿದ್ದರು. ಕೆಎಲ್ ರಾಹುಲ್ ಮೊದಲ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸಿದ್ದು, ಮೂರನೇ ಪಂದ್ಯದಲ್ಲಿ ಅವರ ಬದಲಿಗೆ ರಿಷಭ್ ಪಂತ್ ಅವರನ್ನು ಆಡಿಸಲಾಯಿತು. ಸರಣಿಯಲ್ಲೂ ಕೆಎಲ್ ರಾಹುಲ್ ನಿರೀಕ್ಷಿತ ಪ್ರದರ್ಶನ ತೋರಲು ವಿಫಲರಾಗಿದ್ದರು. ಹಾಗಾಗಿ ಹೆಡ್ ಕೋಚ್ ಗೌತಮ್ ಗಂಭೀರ್ ಅವರು ಸಂಜು ಸ್ಯಾಮ್ಸನ್ ಅವರನ್ನು ಏಕದಿನ ಸರಣಿಗೆ ಆಯ್ಕೆ ಮಾಡಲು ಮುಂದಾಗಿದ್ದಾರೆ.
ಇದನ್ನೂ ಓದಿ: ಏಕದಿನ ಸರಣಿಗೆ ಆಯ್ಕೆ ಮಾಡದೆ ಭಾರೀ ಮೋಸ; ಕೊನೆಗೂ ಮೌನಮುರಿದ ಸಂಜು ಸ್ಯಾಮ್ಸನ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾಗೆ ಸೋಲು
ಬ್ಯಾಟಿಂಗ್ನಲ್ಲಿ ಕೆಎಲ್ ರಾಹುಲ್, ರಿಷಭ್ ಪಂತ್ ಸಂಪೂರ್ಣ ವೈಫಲ್ಯ!
ರೋಹಿತ್ ಶರ್ಮಾ, ಹೆಡ್ ಕೋಚ್ ಗೌತಮ್ ಗಂಭೀರ್ಗೆ ದೊಡ್ಡ ಚಿಂತೆ
ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 0-2 ಅಂತರದಲ್ಲಿ ಸೋಲು ಅನುಭವಿಸಿದೆ. ಈ ಸೋಲಿನಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಮುನ್ನ ಭಾರತ ತಂಡಕ್ಕೆ ಭಾರೀ ಹಿನ್ನಡೆ ಆಗಿದೆ. ಮುಂದೆ 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಅದಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡ ಆಡುವುದು ಕೇವಲ ಏಕದಿನ ಪಂದ್ಯಗಳು ಮಾತ್ರ.
ಭಾರತ ತಂಡವು 2025ರ ಜನವರಿಯಲ್ಲಿ ಇಂಗ್ಲೆಂಡ್ ಏಕದಿನ ಸರಣಿ ಆಡಲಿದೆ. ಹಾಗಾಗಿ ಇದಾದ ಬೆನ್ನಲ್ಲೇ ನಡೆಯಲಿರೋ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ಟೀಮ್ ಇಂಡಿಯಾ ತಯಾರು ಮಾಡಬೇಕಿದೆ. ಸ್ಟಾರ್ ಆಟಗಾರರೇ ಬ್ಯಾಟಿಂಗ್ನಲ್ಲಿ ವೈಫಲ್ಯರಾಗಿದ್ದು, ಬಲಿಷ್ಠ ತಂಡ ಕಟ್ಟುವುದು ಹೇಗೆ? ಅನ್ನೋ ಚಿಂತೆ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಹೆಡ್ ಕೋಚ್ ಗೌತಮ್ ಗಂಭೀರ್ ಅವರಿಗೆ ಕಾಡುತ್ತಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆದಾರರು ಕಸರತ್ತು ನಡೆಸುತ್ತಿದ್ದಾರೆ. ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮತ್ತು ಜಸ್ಪ್ರೀತ್ ಬುಮ್ರಾ ಅವರ ಸ್ಥಾನಗಳು ಪಕ್ಕಾ ಆಗಿವೆ. ಉಳಿದ ಆಟಗಾರರಿಗಾಗಿ ಇನ್ನೂ ಸ್ಪರ್ಧೆ ಮುಂದುವರಿದಿದೆ. ವೈಸ್ ಕ್ಯಾಪ್ಟನ್ ಆಗಿರೋ ಶುಭ್ಮನ್ ಗಿಲ್ ಕೂಡ ಆಡುವುದು ಪಕ್ಕಾ.
ಕೆ.ಎಲ್ ರಾಹುಲ್ಗೆ ಕೊಕ್..!
ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ವಿಕೆಟ್ ಕೀಪರ್ಗಳಾಗಿ ಕೆಎಲ್ ರಾಹುಲ್ ಮತ್ತು ರಿಷಭ್ ಪಂತ್ ಆಡಿದ್ದರು. ಕೆಎಲ್ ರಾಹುಲ್ ಮೊದಲ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸಿದ್ದು, ಮೂರನೇ ಪಂದ್ಯದಲ್ಲಿ ಅವರ ಬದಲಿಗೆ ರಿಷಭ್ ಪಂತ್ ಅವರನ್ನು ಆಡಿಸಲಾಯಿತು. ಸರಣಿಯಲ್ಲೂ ಕೆಎಲ್ ರಾಹುಲ್ ನಿರೀಕ್ಷಿತ ಪ್ರದರ್ಶನ ತೋರಲು ವಿಫಲರಾಗಿದ್ದರು. ಹಾಗಾಗಿ ಹೆಡ್ ಕೋಚ್ ಗೌತಮ್ ಗಂಭೀರ್ ಅವರು ಸಂಜು ಸ್ಯಾಮ್ಸನ್ ಅವರನ್ನು ಏಕದಿನ ಸರಣಿಗೆ ಆಯ್ಕೆ ಮಾಡಲು ಮುಂದಾಗಿದ್ದಾರೆ.
ಇದನ್ನೂ ಓದಿ: ಏಕದಿನ ಸರಣಿಗೆ ಆಯ್ಕೆ ಮಾಡದೆ ಭಾರೀ ಮೋಸ; ಕೊನೆಗೂ ಮೌನಮುರಿದ ಸಂಜು ಸ್ಯಾಮ್ಸನ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ