/newsfirstlive-kannada/media/post_attachments/wp-content/uploads/2024/12/gouthami.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11, 13ನೇ ವಾರಕ್ಕೆ ಕಾಲಿಟ್ಟಿದೆ. ಸದ್ಯ ಬಿಗ್ಬಾಸ್ ಮನೆಯಲ್ಲಿ ಒಟ್ಟು 10 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ವಾರ ಕಳೆದಂತೆ ಬಿಗ್ಬಾಸ್ ಮನೆಯಿಂದ ಒಬ್ಬೊಬ್ಬರಾಗಿ ಆಚೆ ಹೋಗಲಿದ್ದಾರೆ. ಆದರೆ ಇದರ ಮಧ್ಯೆ ಮತ್ತೆ ಮಂಜಣ್ಣ ಹಾಗೂ ಗೌತಮಿ ಸ್ನೇಹದ ಮಧ್ಯೆ ಬಿರುಕು ಮೂಡಿದೆ.
ಹೌದು, ಬಿಗ್ಬಾಸ್ ಶುರುವಾದಾಗಿನಿಂದ ಈ ಇಬ್ಬರು ಇಲ್ಲಿಯವರೆಗೂ ಜೋಡಿಯಾಗೇ ಇದ್ದರು. ಆದರೆ ಏಕಾಏಕಿ ಈ ಇಬ್ಬರ ಮಧ್ಯೆ ಬಿರುಕು ಮೂಡಿದೆ. ಬಿಗ್ಬಾಸ್ ಮನೆಯಲ್ಲಿ ಮಂಜು ಹಾಗೂ ಗೌತಮಿ ಜಾಧವ್ ಗೆಳತನದ ಎಂತದ್ದು ಎಂದು ಎಲ್ಲರಿಗೂ ಗೊತ್ತೇ ಇದೆ. ಗೆಳತಿ ಗೆಳತಿ ಎನ್ನುತ್ತಲೇ ಗೌತಮಿಗೆ ಸಪೋರ್ಟ್ ಮಾಡಿಕೊಂಡು ಬರುತ್ತಿದ್ದ ಮಂಜು ಸದ್ಯ ಶಾಕ್ನಲ್ಲಿದ್ದಾರೆ. ಪ್ರತಿಯೊಂದು ವಿಚಾರಲ್ಲೂ ಗೆಳತಿ ಬಗ್ಗೆ ವಹಿಸಿಕೊಂಡು ಮಾತಾಡುತ್ತಿದ್ದ ಮಂಜು ಸದ್ಯ ಗೌತಮಿ ಖಡಕ್ ಮಾತಿಗೆ ಕಕ್ಕಾಬಿಕ್ಕಿಯಾಗಿದ್ದಾರೆ.
ಇದನ್ನೂ ಓದಿ:ಅಮೆರಿಕಾಗೆ ಹೊರಟ ಶಿವಣ್ಣ.. ಹರಕೆ ಹೊತ್ತು ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು; ಹೇಳಿದ್ದೇನು?
ಪ್ರತಿ ವಿಚಾರಕ್ಕೂ ಮಂಜಣ್ಣ ಮೇಲೆ ಗೌತಮಿ ಕೋಪಗೊಳ್ಳುತ್ತಿದ್ದಾರೆ. ಕ್ಯಾಪ್ಟನ್ ಪಟ್ಟ ಸಿಗುತ್ತಿದ್ದಂತೆ ಗೌತಮಿ ಬದಲಾಗಿ ಬಿಟ್ರಾ ಎಂಬ ಅನುಮಾನ ವಿಕ್ಷಕಗೆ ಮೂಡಿತ್ತು. ಆದರೆ ಈಗ ಮತ್ತೆ ಗೌತಮಿ ನೀವು ನನ್ನ ಜೊತೆಗೆ ಇರಬೇಡಿ. ನೀವು ಇದ್ದರೆ ನಮಗೆ ಕಿರಿಕಿರಿ ಆಗುತ್ತೆ ಅಂತ ಹೇಳಿದ್ದಾರೆ. ಈ ಮಾತನ್ನು ಕೇಳಿಸಿಕೊಂಡ ಮಂಜಣ್ಣ ಅಲ್ಲಿಂದ ಎದ್ದು ಹೇಗಿದ್ದಾರೆ. ಇದಾದ ಬಳಿಕ ಮತ್ತೆ ಗೌತಮಿ ಬಳಿ ಬಂದು ಗೆಳತಿ ಅಂತ ಮಾತಾಡಿದ್ದಾರೆ. ಸದ್ಯ ಮುಂದಿನ ದಿನಗಳಲ್ಲಿ ಗೌತಮಿ ಆಟ ಚೇಂಚ್ ಆಗುತ್ತಾ ಅಥವಾ ಮತ್ತೆ ಗೆಳೆಯ ಅಂತ ಮಂಜು ಅವರ ಹಿಂದೆ ಹೋಗುತ್ತಾರಾ ಅಂತ ಆಟದ ಮೂಲಕ ತಿಳಿದುಕೊಳ್ಳಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ