ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ
ಮೃತದೇಹವನ್ನು ಠಾಣೆ ಮುಂದೆ ಇಟ್ಟು ಸಂಬಂಧಿಕರು ಪ್ರತಿಭಟನೆ
ಮಗಳ ಸಾವಿಗೆ ನ್ಯಾಯ ನೀಡುವಂತೆ ಆಗ್ರಹಿಸಿ ಪ್ರೊಟೆಸ್ಟ್
ಕೊಪ್ಪಳ: ಫೋನಿನಲ್ಲಿ ಯುವಕನ ಕಿರುಕುಳ ತಾಳಲಾರದೇ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದ ಉಚ್ಚಲಕುಂಟ ಗ್ರಾಮದಲ್ಲಿ ನಡೆದಿದೆ. ಆರೋಪಿ ಬಂಧನಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಬಾಲಕಿಯ ಶವವಿಟ್ಟು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಪುರುಷೋತ್ತಮ ಎನ್ನುವ ಯುವಕ ಪೂಜಾಳ ಮನೆಯ ಮೊಬೈಲ್ಗೆ ಕರೆ ಮಾಡುತ್ತಿದ್ದ. ಬೇರೊಂದು ನಂಬರ್ ಮೂಲಕ ಹಲವು ಬಾರಿ ಕಾನ್ಫರೆನ್ಸ್ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದ. ಯುವಕನ ಕಿರುಕುಳ ತಾಳಲಾರದೇ ಎಪ್ರಿಲ್ 7 ರಂದು ಪೂಜಾ ವಿಷ ಸೇವಿಸಿದ್ದಳು ಎಂದು ಪೋಷಕರು ಆರೋಪಿಸಿದ್ದಾರೆ.
ಇದನ್ನೂ ಓದಿ:ಮೇಲ್ಸೇತುವೆಯಿಂದ ಬಸ್ ಪಲ್ಟಿ, ಐವರು ಸಾವು.. 38 ಪ್ರಯಾಣಿಕರು ಗಂಭೀರ
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಪೂಜಾ ಸಾವನ್ನಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಆರೋಪಿ ಪುರಷೋತ್ತಮನ ಬಂಧನಕ್ಕೆ ಆಗ್ರಹಿಸಿರುವ ಉಚ್ಚಲಕುಂಟ ಗ್ರಾಮಸ್ಥರು ಬೇವೂರು ಪೊಲೀಸ್ ಠಾಣೆ ಎದುರು ಪೂಜಾ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ
ಮೃತದೇಹವನ್ನು ಠಾಣೆ ಮುಂದೆ ಇಟ್ಟು ಸಂಬಂಧಿಕರು ಪ್ರತಿಭಟನೆ
ಮಗಳ ಸಾವಿಗೆ ನ್ಯಾಯ ನೀಡುವಂತೆ ಆಗ್ರಹಿಸಿ ಪ್ರೊಟೆಸ್ಟ್
ಕೊಪ್ಪಳ: ಫೋನಿನಲ್ಲಿ ಯುವಕನ ಕಿರುಕುಳ ತಾಳಲಾರದೇ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದ ಉಚ್ಚಲಕುಂಟ ಗ್ರಾಮದಲ್ಲಿ ನಡೆದಿದೆ. ಆರೋಪಿ ಬಂಧನಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಬಾಲಕಿಯ ಶವವಿಟ್ಟು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಪುರುಷೋತ್ತಮ ಎನ್ನುವ ಯುವಕ ಪೂಜಾಳ ಮನೆಯ ಮೊಬೈಲ್ಗೆ ಕರೆ ಮಾಡುತ್ತಿದ್ದ. ಬೇರೊಂದು ನಂಬರ್ ಮೂಲಕ ಹಲವು ಬಾರಿ ಕಾನ್ಫರೆನ್ಸ್ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದ. ಯುವಕನ ಕಿರುಕುಳ ತಾಳಲಾರದೇ ಎಪ್ರಿಲ್ 7 ರಂದು ಪೂಜಾ ವಿಷ ಸೇವಿಸಿದ್ದಳು ಎಂದು ಪೋಷಕರು ಆರೋಪಿಸಿದ್ದಾರೆ.
ಇದನ್ನೂ ಓದಿ:ಮೇಲ್ಸೇತುವೆಯಿಂದ ಬಸ್ ಪಲ್ಟಿ, ಐವರು ಸಾವು.. 38 ಪ್ರಯಾಣಿಕರು ಗಂಭೀರ
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಪೂಜಾ ಸಾವನ್ನಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಆರೋಪಿ ಪುರಷೋತ್ತಮನ ಬಂಧನಕ್ಕೆ ಆಗ್ರಹಿಸಿರುವ ಉಚ್ಚಲಕುಂಟ ಗ್ರಾಮಸ್ಥರು ಬೇವೂರು ಪೊಲೀಸ್ ಠಾಣೆ ಎದುರು ಪೂಜಾ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ