/newsfirstlive-kannada/media/post_attachments/wp-content/uploads/2023/07/Ganesh.jpg)
ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ ‘ಕೃಷ್ಣಂ ಪ್ರಣಯ ಸಖಿ’. ಗಣೇಶ್ ನಾಯಕರಾಗಿ ನಟಿಸುತ್ತಿರುವ 41ನೇ ಚಿತ್ರ ಇದಾಗಿದ್ದು, ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಆ್ಯಕ್ಷನ್ ಕಟ್ ಹೇಳಲಿದ್ದಾರೆ.
ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್ ನಲ್ಲಿ ಚಿತ್ರೀಕರಣ ನಡೆಯಲಿದೆ.
/newsfirstlive-kannada/media/post_attachments/wp-content/uploads/2023/07/Ganesh-1.jpg)
ಜುಲೈ 2, ನಾಯಕ ಗಣೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು. ನಾಳೆ ಗಣೇಶ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
/newsfirstlive-kannada/media/post_attachments/wp-content/uploads/2023/07/Ganesh-2.jpg)
ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು "ಕೃಷ್ಣಂ ಪ್ರಣಯ ಸಖಿ" ಚಿತ್ರದಲ್ಲಿ ನಟಿಸಿದ್ದಾರೆ.
ವಿಶೇಷ ಸೂಚನೆ: ಸಿನಿಮಾ ಲೋಕದ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ಫಿಲ್ಮಿ ಫಸ್ಟ್​' ಪ್ರತಿದಿನ ಸಂಜೆ 5.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us