/newsfirstlive-kannada/media/post_attachments/wp-content/uploads/2024/06/DARSHAN-JAIL-2.jpg)
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಪೊಲೀಸ್ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಜೊತೆಗೆ ರೇಣುಕಾಸ್ವಾಮಿಗೆ ಹಿಂಸೆ ನೀಡಿರುವ ಫೋಟೋಗಳನ್ನ ಪೊಲೀಸರು ರಿಟ್ರೀವ್ ಮಾಡಿಕೊಂಡಿದ್ದು, ಅವುಗಳಲ್ಲಿ ಕೆಲವು ವೈರಲ್ ಆಗುತ್ತಿವೆ. ಹೀಗಾಗಿ ದರ್ಶನ್ ಅಂಡ್ ಗ್ಯಾಂಗ್ ಪ್ರಕರಣದಲ್ಲಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ದಟ್ಟವಾಗ್ತಿದೆ.
ಈ ನಡುವೆ ದರ್ಶನ್​​ಗಾಗಿ ಅವರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ದರ್ಶನ ಬಿಡುಗಡೆಗಾಗಿ ಫೋಟೋ ಹಿಡಿದು ದೈವದ ಮೊರೆ ಹೋದ ಅಭಿಮಾನಿಗಳಿಗೆ ಸಮಾಧಾನಕರ ಸುದ್ದಿ ಸಿಕ್ಕಿದೆ. ಬಳ್ಳಾರಿಯ ಬಲಕಲ್ ಅನ್ನೋ ಗ್ರಾಮದಲ್ಲಿರುವ ಬೀರಲಿಂಗೇಶ್ವರ ದೈವದ ಬಳಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಮೃಗೀಯ ರೀತಿಯಲ್ಲಿ ವರ್ತನೆ; ರೇಣುಕಾಸ್ವಾಮಿ ಕೈಮುಗಿದು ಪದೇ ಪದೆ ಬೇಡಿಕೊಂಡರೂ ಬಿಡಲಿಲ್ಲವಂತೆ ದರ್ಶನ್
ಆ ವೇಳೆ ಬೀರಲಿಂಗೇಶ್ವರ ದೈವದ ಬಳಿ ದರ್ಶನ ಬಿಡುಗಡೆ ದಿನಾಂಕವನ್ನು ಅಭಿಮಾನಿಗಳು ಕೇಳಿದ್ದಾರೆ. ಇದೀಗ ದರ್ಶನ್ ಭಾವಚಿತ್ರ ಮೇಲೆ ತಲೆಯಿಟ್ಟು ದೈವ್ ನುಡಿದ ಮಾತು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಮೂರು ತಿಂಗಳ ಬಳಿಕ ದರ್ಶನ್ ಹೊರ ಬರ್ತಾನೆ ಎಂದು ದೈವ ನುಡಿದಿದೆ. ದರ್ಶನ್ ಬಿಡುಗಡೆ ಬಗ್ಗೆ ದೈವ ಹೇಳಿದ ಮಾತುಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ