ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್
ಇಂದು ಚೆನ್ನೈ ಸೂಪರ್ ಕಿಂಗ್ಸ್, ಆರ್ಸಿಬಿ ತಂಡದ ಮಧ್ಯೆ ರೋಚಕ ಪಂದ್ಯ
ಅಂದು ನಿಜವಾಗ್ಲೂ ಮಳೆ ಬರುತ್ತಾ? ಹವಾಮಾನ ಇಲಾಖೆ ಹೇಳೋದೇನು?
ಇಂಡಿಯನ್ ಪ್ರೀಮಿಯರ್ ಲೀಗ್ ಇನ್ನೇನು ಮುಕ್ತಾಯದ ಹಂತಕ್ಕೆ ಬಂದಿದೆ. ಕೆಕೆಆರ್, ರಾಜಸ್ತಾನ್ ರಾಯಲ್ಸ್, ಸನ್ರೈಸರ್ಸ್ ಹೈದರಾಬಾದ್ ಈಗಾಗಲೇ ಪ್ಲೇ ಆಫ್ಗೆ ಹೋಗಿವೆ. ಉಳಿದ 1 ಸ್ಥಾನಕ್ಕಾಗಿ ಸಿಎಸ್ಕೆ, ಆರ್ಸಿಬಿ ತಂಡಗಳ ಮಧ್ಯೆ ಭಾರೀ ಪೈಪೋಟಿ ನಡೆಯುತ್ತಿದೆ. ಇಂದು ನಡೆಯೋ ಪಂದ್ಯದಲ್ಲಿ ಹೇಗಾದ್ರೂ ಮಾಡಿ ಗೆದ್ದು ಪ್ಲೇ ಆಫ್ ಪ್ರವೇಶ ಮಾಡಲೇಬೇಕು ಎಂದು ಚೆನ್ನೈ, ಆರ್ಸಿಬಿ ತಂಡಗಳು ಎದುರು ನೋಡುತ್ತಿವೆ.
ಯಾವುದೇ ಕಾರಣಕ್ಕೂ ಪಂದ್ಯ ರದ್ದಾಗಬಾರದು. ಒಂದು ವೇಳೆ ಮ್ಯಾಚ್ ಕ್ಯಾನ್ಸಲ್ ಆದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಟ್ಯಂತರ ಅಭಿಮಾನಿಗಳ ಕನಸು ನುಚ್ಚು ನೂರಾಗಲಿದೆ. ಫೀನಿಕ್ಸ್ನಂತೆ ಎದ್ದು ಬಂದು ಕೊನೆ ಕ್ಷಣದಲ್ಲಿ ಹೋರಾಟ ನಿಲ್ಲಿಸಲು ಸಾಧ್ಯವಿಲ್ಲ ಎಂದು ಫ್ಯಾನ್ಸ್ ಮಾತಾಡೋಕೆ ಕಾರಣ ಮಳೆ. ಅದರಲ್ಲೂ ಬೆಂಗಳೂರಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ಮಾಹಿತಿ.
ಇಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ವಿರುದ್ಧ ನಡೆಯಲಿರೋ ಕೊನೆ ಲೀಗ್ ಪಂದ್ಯ ಆರ್ಸಿಬಿ ಪ್ಲೇಆಫ್ ಸ್ಥಾನ ನಿರ್ಧರಿಸಲಿದೆ. ಏನೇ ಆದರೂ ಪಂದ್ಯ ನಡೆಯಲೇಬೇಕು ಎಂಬುದು ಫ್ಯಾನ್ಸ್ ಆಸೆ. ರಾಜ್ಯ ಹವಾಮಾನ ಇಲಾಖೆ ಪ್ರಕಾರ ಮೇ 17-21 ರವರೆಗೂ ಅಂದರೆ ಮುಂದಿನ 5 ದಿನಗಳ ಕಾಲ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಂದ್ಯ ನಡೆಯುವಾಗ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಮಳೆ ಬಂದರೆ ಬರಬಹುದು, ಇಲ್ಲದೆ ಹೋಗಬಹುದು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: RCB ಬಳಿಯಿದೆ ದೊಡ್ಡ ಬ್ರಹ್ಮಾಸ್ತ್ರ; ಇಂದು ಚೆನ್ನೈ ವಿರುದ್ಧ ಗೆದ್ದು ಪ್ಲೇ ಆಫ್ಗೆ ಹೋಗೋದು ಗ್ಯಾರಂಟಿ!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್
ಇಂದು ಚೆನ್ನೈ ಸೂಪರ್ ಕಿಂಗ್ಸ್, ಆರ್ಸಿಬಿ ತಂಡದ ಮಧ್ಯೆ ರೋಚಕ ಪಂದ್ಯ
ಅಂದು ನಿಜವಾಗ್ಲೂ ಮಳೆ ಬರುತ್ತಾ? ಹವಾಮಾನ ಇಲಾಖೆ ಹೇಳೋದೇನು?
ಇಂಡಿಯನ್ ಪ್ರೀಮಿಯರ್ ಲೀಗ್ ಇನ್ನೇನು ಮುಕ್ತಾಯದ ಹಂತಕ್ಕೆ ಬಂದಿದೆ. ಕೆಕೆಆರ್, ರಾಜಸ್ತಾನ್ ರಾಯಲ್ಸ್, ಸನ್ರೈಸರ್ಸ್ ಹೈದರಾಬಾದ್ ಈಗಾಗಲೇ ಪ್ಲೇ ಆಫ್ಗೆ ಹೋಗಿವೆ. ಉಳಿದ 1 ಸ್ಥಾನಕ್ಕಾಗಿ ಸಿಎಸ್ಕೆ, ಆರ್ಸಿಬಿ ತಂಡಗಳ ಮಧ್ಯೆ ಭಾರೀ ಪೈಪೋಟಿ ನಡೆಯುತ್ತಿದೆ. ಇಂದು ನಡೆಯೋ ಪಂದ್ಯದಲ್ಲಿ ಹೇಗಾದ್ರೂ ಮಾಡಿ ಗೆದ್ದು ಪ್ಲೇ ಆಫ್ ಪ್ರವೇಶ ಮಾಡಲೇಬೇಕು ಎಂದು ಚೆನ್ನೈ, ಆರ್ಸಿಬಿ ತಂಡಗಳು ಎದುರು ನೋಡುತ್ತಿವೆ.
ಯಾವುದೇ ಕಾರಣಕ್ಕೂ ಪಂದ್ಯ ರದ್ದಾಗಬಾರದು. ಒಂದು ವೇಳೆ ಮ್ಯಾಚ್ ಕ್ಯಾನ್ಸಲ್ ಆದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಟ್ಯಂತರ ಅಭಿಮಾನಿಗಳ ಕನಸು ನುಚ್ಚು ನೂರಾಗಲಿದೆ. ಫೀನಿಕ್ಸ್ನಂತೆ ಎದ್ದು ಬಂದು ಕೊನೆ ಕ್ಷಣದಲ್ಲಿ ಹೋರಾಟ ನಿಲ್ಲಿಸಲು ಸಾಧ್ಯವಿಲ್ಲ ಎಂದು ಫ್ಯಾನ್ಸ್ ಮಾತಾಡೋಕೆ ಕಾರಣ ಮಳೆ. ಅದರಲ್ಲೂ ಬೆಂಗಳೂರಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ಮಾಹಿತಿ.
ಇಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ವಿರುದ್ಧ ನಡೆಯಲಿರೋ ಕೊನೆ ಲೀಗ್ ಪಂದ್ಯ ಆರ್ಸಿಬಿ ಪ್ಲೇಆಫ್ ಸ್ಥಾನ ನಿರ್ಧರಿಸಲಿದೆ. ಏನೇ ಆದರೂ ಪಂದ್ಯ ನಡೆಯಲೇಬೇಕು ಎಂಬುದು ಫ್ಯಾನ್ಸ್ ಆಸೆ. ರಾಜ್ಯ ಹವಾಮಾನ ಇಲಾಖೆ ಪ್ರಕಾರ ಮೇ 17-21 ರವರೆಗೂ ಅಂದರೆ ಮುಂದಿನ 5 ದಿನಗಳ ಕಾಲ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಂದ್ಯ ನಡೆಯುವಾಗ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಮಳೆ ಬಂದರೆ ಬರಬಹುದು, ಇಲ್ಲದೆ ಹೋಗಬಹುದು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: RCB ಬಳಿಯಿದೆ ದೊಡ್ಡ ಬ್ರಹ್ಮಾಸ್ತ್ರ; ಇಂದು ಚೆನ್ನೈ ವಿರುದ್ಧ ಗೆದ್ದು ಪ್ಲೇ ಆಫ್ಗೆ ಹೋಗೋದು ಗ್ಯಾರಂಟಿ!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್