/newsfirstlive-kannada/media/post_attachments/wp-content/uploads/2024/10/Govinda.jpg)
ಬಾಲಿವುಡ್ ನಟ ಗೋವಿಂದ ಕಾಲಿಗೆ ಗುಂಡು ತಗುಲಿದೆ. ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ.
ನಸೀಮ್​, ರಾಜಾ ಬಾಬು, ಪಾಟ್ನರ್​ ಸಿನಿಮಾ ಖ್ಯಾತಿಯ ನಟ ಗೋವಿಂದ ಅವರು ಬೆಳಗ್ಗೆ ಕೋಲ್ಕತ್ತಾಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ತಮ್ಮ ಪರವಾನಗಿ ಹೊಂದಿರುವ ರಿವಾಲ್ವರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಅದು ಮಿಸ್ ಫೈರ್ ಆಗಿದೆ ಎಂದು ಹೇಳಲಾಗುತ್ತಿದೆ.
ಇದೀಗ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟನ ಸ್ಥಿತಿ ಸ್ಥಿರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.
ಗೋವಿಂದ ಅವರು ನಟ ಮಾತ್ರವಲ್ಲ ಶಿವಸೇನೆ ನಾಯಕರಾಗಿಯು ಗುರುತಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಅವರು ತಮ್ಮ ಪರವಾನಗಿ ಪಡೆದ ರಿವಾಲ್ವರ್ ಅನ್ನು ಇಟ್ಟುಕೊಂಡಿದ್ದರು, ಆಗ ಅವರ ಕೈಯಿಂದ ರಿವಾಲ್ವರ್ ಜಾರಿಬಿದ್ದಿದೆ ಎನ್ನಲಾಗುತ್ತಿದೆ. ಜಾರಿ ಬಿದ್ದ ರಿವಾಲ್ವರ್​ನಿಂದ ಗುಂಡು ಹಾರಿ ಕಾಲಿಗೆ ತಗುಲಿದೆ. ವೈದ್ಯರು ಗುಂಡನ್ನು ಹೊರತೆಗೆದಿದ್ದಾರೆ ಎನ್ನಲಾಗುತ್ತಿದೆ.
ಗೋವಿಂದ ಅವರಿಗೆ ಗುಂಡು ತಗುಲಿದ ವಿಚಾರ ತಿಳಿದು ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಆದೆ ನಟನ ಅವರ ಸ್ಥಿತಿ ಉತ್ತಮವಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us