newsfirstkannada.com

ಪೆನ್ ಡ್ರೈವ್ ಹಂಚಿಕೆ ವಿಚಾರವಾಗಿ ಹೆಚ್​ಡಿಕೆ ಗರಂ.. ಇದರ ಹಿಂದೆ ಮಹಾನ್ ನಾಯಕನ ಕೈವಾಡ ಎಂದ ಕುಮಾರಸ್ವಾಮಿ

Share :

Published April 30, 2024 at 12:13pm

Update April 30, 2024 at 12:15pm

    ಪೆನ್ ಡ್ರೈವ್ ಹಂಚಿಕೆ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ

    2012 ರಲ್ಲಿ ನಡೆದ ಪ್ರಕರಣಕ್ಕೆ ಜೀವ ಕೊಟ್ಟವರು ಮಹಾನ್ ನಾಯಕ

    ಯಾರು ಈ ಮಹಾನ್​​ ನಾಯಕ? H D ಕುಮಾರಸ್ವಾಮಿ ಯಾರ ಬಗ್ಗೆ ಹೇಳಿದ್ದು?

ಹುಬ್ಬಳ್ಳಿ: ಹಾಸನ ಅಶ್ಲೀಲ ವಿಡಿಯೋ ಮತ್ತು ಪೆನ್ ಡ್ರೈವ್ ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿಯವರು ಹರಿಹಾಯ್ದಿದ್ದಾರೆ. ಇದರ ಹಿಂದೆ ಮಹಾನ್ ನಾಯಕರ ಕೈವಾಡವಿದೆ ಎಂದಿದ್ದಾರೆ.

ನಮ್ಮ ಬಳಿಯೂ ಕೆಲ ವೀಡಿಯೋ ಇವೆ

ಹುಬ್ಬಳ್ಳಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, 2012 ರಲ್ಲಿ ನಡೆದ ಪ್ರಕರಣಕ್ಕೆ ಜೀವ ಕೊಟ್ಟವರು ಮಹಾನ್ ನಾಯಕ. ನಮ್ಮ ಬಳಿಯೂ ಕೆಲ ವೀಡಿಯೋ ಇವೆ. ಎಲ್ಲ ಆಯಾಮಗಳಲ್ಲಿ ತನಿಖೆಯಾಗಬೇಕು. ಮಹಿಳೆಯರ ಬಗ್ಗೆ ಮಾತಾಡೋ ಮಹಾನ್ ನಾಯಕನಿಂದ ಮಾನ ಹರಾಜು ಆಗಿದೆ ಎಂದು ಹೇಳಿದ್ದಾರೆ.

ನಾವು ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ

ಜೆಡಿಎಸ್ ಶಾಸಕರ ಅಸಮಾಧಾನ ವಿಚಾರವಾಗಿ ಮಾತನಾಡಿದ ಹೆಚ್​ಡಿಕೆ ಪಕ್ಷದ ಇಮೇಜ್‌ಗೆ ಧಕ್ಕೆಯಾಗಬಾರದೆಂಬ ಕಾಳಜಿ ಇದೆ. ಅದೇ ಕಾಳಜಿ ನಮ್ಮದೂ ಇದೆ. ಇಲ್ಲಿ ಯಾರನ್ನೂ ಕ್ಷಮಿಸೋ ಪ್ರಶ್ನೆಯೇ ಇಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ನಾವು ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ. ಸರಕಾರ ತನ್ನದೇ ಆದ ತನಿಖೆ ಮಾಡಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿನ್ನೆ ದೇವೇಗೌಡರ ನಿವಾಸದಲ್ಲೇ ವಾಸ್ತವ್ಯ.. ಇಂದು ಬೆಳಗ್ಗೆ ದೇವಸ್ಥಾನ ಸುತ್ತಿದ ರೇವಣ್ಣ

ನಾನು ಇದನ್ನು ಇಷ್ಟಕ್ಕೇ ಬಿಡೋದಿಲ್ಲ

ಕೋರ್ ಕಮಿಟಿ ಸಭೆಗೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯ ಹೆಚ್​ಡಿಕೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಏನು ಹೇಳಿದ್ದಾರೆ?. ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ರಾಜಿ ಇಲ್ಲ ಅಂದಿದ್ದಾರೆ. ಹೊರತು ಪ್ರಜ್ವಲ್ ಪ್ರಕರಣ ಪ್ರಸ್ತಾಪಿಸಿಲ್ಲ. ಕಾಂಗ್ರೆಸ್ ಪುಢಾರಿಗಳು ನಮ್ಮ ಮನೆ ಮುಂದೇಕೆ ಪ್ರತಿಭಟನೆ ಮಾಡಬೇಕು?. ಮಹಾನ್ ನಾಯಕರ ಮನೆ ಮುಂದೆ ಪ್ರತಿಭಟಿಸಲಿ. ನಾನು ಇದನ್ನು ಇಷ್ಟಕ್ಕೇ ಬಿಡೋದಿಲ್ಲ ಎಂದು ಹೆಚ್​ಡಿಕೆ ಗರಂ ಆಗಿ ಮಾತನಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪೆನ್ ಡ್ರೈವ್ ಹಂಚಿಕೆ ವಿಚಾರವಾಗಿ ಹೆಚ್​ಡಿಕೆ ಗರಂ.. ಇದರ ಹಿಂದೆ ಮಹಾನ್ ನಾಯಕನ ಕೈವಾಡ ಎಂದ ಕುಮಾರಸ್ವಾಮಿ

https://newsfirstlive.com/wp-content/uploads/2024/04/HDK-2.jpg

    ಪೆನ್ ಡ್ರೈವ್ ಹಂಚಿಕೆ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ

    2012 ರಲ್ಲಿ ನಡೆದ ಪ್ರಕರಣಕ್ಕೆ ಜೀವ ಕೊಟ್ಟವರು ಮಹಾನ್ ನಾಯಕ

    ಯಾರು ಈ ಮಹಾನ್​​ ನಾಯಕ? H D ಕುಮಾರಸ್ವಾಮಿ ಯಾರ ಬಗ್ಗೆ ಹೇಳಿದ್ದು?

ಹುಬ್ಬಳ್ಳಿ: ಹಾಸನ ಅಶ್ಲೀಲ ವಿಡಿಯೋ ಮತ್ತು ಪೆನ್ ಡ್ರೈವ್ ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿಯವರು ಹರಿಹಾಯ್ದಿದ್ದಾರೆ. ಇದರ ಹಿಂದೆ ಮಹಾನ್ ನಾಯಕರ ಕೈವಾಡವಿದೆ ಎಂದಿದ್ದಾರೆ.

ನಮ್ಮ ಬಳಿಯೂ ಕೆಲ ವೀಡಿಯೋ ಇವೆ

ಹುಬ್ಬಳ್ಳಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, 2012 ರಲ್ಲಿ ನಡೆದ ಪ್ರಕರಣಕ್ಕೆ ಜೀವ ಕೊಟ್ಟವರು ಮಹಾನ್ ನಾಯಕ. ನಮ್ಮ ಬಳಿಯೂ ಕೆಲ ವೀಡಿಯೋ ಇವೆ. ಎಲ್ಲ ಆಯಾಮಗಳಲ್ಲಿ ತನಿಖೆಯಾಗಬೇಕು. ಮಹಿಳೆಯರ ಬಗ್ಗೆ ಮಾತಾಡೋ ಮಹಾನ್ ನಾಯಕನಿಂದ ಮಾನ ಹರಾಜು ಆಗಿದೆ ಎಂದು ಹೇಳಿದ್ದಾರೆ.

ನಾವು ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ

ಜೆಡಿಎಸ್ ಶಾಸಕರ ಅಸಮಾಧಾನ ವಿಚಾರವಾಗಿ ಮಾತನಾಡಿದ ಹೆಚ್​ಡಿಕೆ ಪಕ್ಷದ ಇಮೇಜ್‌ಗೆ ಧಕ್ಕೆಯಾಗಬಾರದೆಂಬ ಕಾಳಜಿ ಇದೆ. ಅದೇ ಕಾಳಜಿ ನಮ್ಮದೂ ಇದೆ. ಇಲ್ಲಿ ಯಾರನ್ನೂ ಕ್ಷಮಿಸೋ ಪ್ರಶ್ನೆಯೇ ಇಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ನಾವು ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ. ಸರಕಾರ ತನ್ನದೇ ಆದ ತನಿಖೆ ಮಾಡಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿನ್ನೆ ದೇವೇಗೌಡರ ನಿವಾಸದಲ್ಲೇ ವಾಸ್ತವ್ಯ.. ಇಂದು ಬೆಳಗ್ಗೆ ದೇವಸ್ಥಾನ ಸುತ್ತಿದ ರೇವಣ್ಣ

ನಾನು ಇದನ್ನು ಇಷ್ಟಕ್ಕೇ ಬಿಡೋದಿಲ್ಲ

ಕೋರ್ ಕಮಿಟಿ ಸಭೆಗೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯ ಹೆಚ್​ಡಿಕೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಏನು ಹೇಳಿದ್ದಾರೆ?. ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ರಾಜಿ ಇಲ್ಲ ಅಂದಿದ್ದಾರೆ. ಹೊರತು ಪ್ರಜ್ವಲ್ ಪ್ರಕರಣ ಪ್ರಸ್ತಾಪಿಸಿಲ್ಲ. ಕಾಂಗ್ರೆಸ್ ಪುಢಾರಿಗಳು ನಮ್ಮ ಮನೆ ಮುಂದೇಕೆ ಪ್ರತಿಭಟನೆ ಮಾಡಬೇಕು?. ಮಹಾನ್ ನಾಯಕರ ಮನೆ ಮುಂದೆ ಪ್ರತಿಭಟಿಸಲಿ. ನಾನು ಇದನ್ನು ಇಷ್ಟಕ್ಕೇ ಬಿಡೋದಿಲ್ಲ ಎಂದು ಹೆಚ್​ಡಿಕೆ ಗರಂ ಆಗಿ ಮಾತನಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More