/newsfirstlive-kannada/media/post_attachments/wp-content/uploads/2025/01/Hanumatha4.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಫಿನಾಲೆಗೆ ಹತ್ತಿರವಾಗುತ್ತಿದೆ. 95ನೇ ದಿನಕ್ಕೆ ಕಾಲಿಟ್ಟಿರೋ ಬಿಗ್ಬಾಸ್ ಸ್ಪರ್ಧಿಗಳು ಕುಟುಂಬಸ್ಥರನ್ನು ಮಿಸ್ ಮಾಡಿಕೊಳ್ಳುತ್ತಿದ್ದರು. ಅದರಂತೆ ಬಿಗ್ಬಾಸ್ ಸ್ಪರ್ಧಿಗಳಿಗೆ ಹೊಸ ವರ್ಷದ ದಿನವೇ ಸರ್ಪ್ರೈಸ್ ಕೊಟ್ಟಿದ್ದರು.
ಇದನ್ನೂ ಓದಿ:ತಿಮ್ಮಪ್ಪನ ಸನ್ನಿಧಿಯಲ್ಲಿ ಬಂಗಾರದ ಮನುಷ್ಯರು.. ವರ್ಷದ ಮೊದಲ ದಿನ ಭಕ್ತರಿಗೆ ಸರ್ಪ್ರೈಸ್..! Photos
ಮಂಗಳವಾರದ ಸಂಚಿಕೆಯಲ್ಲಿ ಬಿಗ್ಬಾಸ್ ಮನೆಗೆ ಭವ್ಯಾ ಗೌಡ, ತ್ರಿವಿಕ್ರಮ್ ಹಾಗೂ ರಜತ್ ಕಿಶನ್ ಫ್ಯಾಮಿಲಿಯವರು ಬಂದಿದ್ದರು. ನಿನ್ನೆ ಬಿಗ್ಬಾಸ್ ಮನೆಗೆ ಮೋಕ್ಷಿತಾ ಪೈ, ಉಗ್ರಂ ಮಂಜು ಹಾಗೂ ಗೌತಮಿ ಕುಟುಂಬಸ್ಥರು ಎಂಟ್ರಿ ಕೊಟ್ಟಿದ್ದರು. ಇಂದಿನ ಸಂಚಿಕೆಯಲ್ಲಿ ಬಿಗ್ ಮನೆಗೆ ಧನರಾಜ್ ಆಚಾರ್ಯ, ಹನುಮಂತ ಹಾಗೂ ಚೈತ್ರಾ ಕುಂದಾಪುರ ಫ್ಯಾಮಿಲಿಯವರು ಎಂಟ್ರಿ ಕೊಟ್ಟಿದ್ದಾರೆ.
ಕಲರ್ಸ್ ಕನ್ನಡ ರಿಲೀಸ್ ಮಾಡಿದ್ದ ಪ್ರೋಮೋದಲ್ಲಿ ಬಿಗ್ಬಾಸ್ ಮನೆಗೆ ಧನರಾಜ್ ಅವರ ಇಡೀ ಕುಟುಂಬಸ್ಥರು ಎಂಟ್ರಿ ಕೊಟ್ಟಿದ್ದರು. ಅವರನ್ನೇಲ್ಲಾ ಕಂಡ ಧನರಾಜ್ ಫುಲ್ ಖುಷ್ ಆಗಿದ್ದರು. ಮನೆಗೆ ಎಂಟ್ರಿ ಆಗ್ತಿದ್ದಂತೆಯೇ ಕುಟುಂಬದ ಸದಸ್ಯರೆಲ್ಲರೂ ಹುಲಿ ಕುಣಿತದ ಸ್ಟೆಪ್ಸ್ ಹಾಕಿದ್ದಾರೆ. ಇದೀಗ ರಿಲೀಸ್ ಆದ ಮತ್ತೊಂದು ಪ್ರೋಮೋದಲ್ಲಿ ಹನುಮಂತ ಹಾಗೂ ಚೈತ್ರಾ ಕುಂದಾಪುರ ಕುಟುಂಬ ಎಂಟ್ರಿ ಕೊಟ್ಟಿದೆ.
View this post on Instagram
ಬಿಗ್ಬಾಸ್ ಮನೆಗೆ ಮಗನಿಗಾಗಿ ಬುತ್ತಿ ತೆಗೆದುಕೊಂಡು ಬಂದಿದ್ದಾರೆ ಹನುಮಂತನ ತಂದೆ ತಾಯಿ. ಮನೆಯ ಒಳಗೆ ಬರುತ್ತಿದ್ದಂತೆ ಮಗನನ್ನೂ ನೋಡಿ ಪೋಷಕರು ಭಾವುಕರಾಗಿದ್ದಾರೆ. ಅಪ್ಪಿಕೊಂಡು ಹನುಮಂತನಿಗೆ ಮುತ್ತು ಕೊಟ್ಟಿದ್ದಾರೆ. ಇದಾದ ಬಳಿಕ ತಾವು ತಂದಿದ್ದ ಊಟದ ಬುತ್ತಿಯನ್ನು ತೆಗೆದು ಎಲ್ಲರ ಜೊತೆಗೆ ಕುಳಿತುಕೊಂಡು ಉತ್ತರ ಕರ್ನಾಟಕದ ಫೇಮಸ್ ರೊಟ್ಟಿ, ಮೂರು ತರಹದ ಪಲ್ಯವನ್ನು ತಿಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ