ಇಂದು ತನಿಖೆಗೆ ಹಾಜರಾಗಲು ನೋಟಿಸ್ ನೀಡಿದ್ದ ಎಸ್ಐಟಿ ಅಧಿಕಾರಿಗಳು
ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ ರೇವಣ್ಣ ವಿರುದ್ದ ದಾಖಲಾಗಿದ್ದ FIR
ರಾಜ್ಯಾದ್ಯಂತ ಹಲ್ಚಲ್ ಎಬ್ಬಿಸಿರುವ ಹಾಸನ ಅಶ್ಲೀಲ ವಿಡಿಯೋ ಕೇಸ್
ಹಾಸನ ಅಶ್ಲೀಲ ವಿಡಿಯೋ ಹಾಗೂ ಪೆನ್ ಡ್ರೈವ್ ಕೇಸ್ ಹೆಚ್.ಡಿ ರೇವಣ್ಣ ಅವರ ಫ್ಯಾಮಿಲಿಗೆ ಸಂಕಷ್ಟ ತಂದಿದೆ. ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಹೆಚ್.ಡಿ ರೇವಣ್ಣ ಅವರು ಇಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಕೇಸ್ ಸಂಬಂಧ ಹೆಚ್.ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣಗೆ ನಿನ್ನೆಯಷ್ಟೇ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ರಿಲೀಸ್ ಮಾಡಿದ ಕಾರ್ತಿಕ್ ಮಲೇಷ್ಯಾಗೆ ಹೋದ್ರಾ? HDK ಬಿಚ್ಚಿಟ್ಟ ಸ್ಫೋಟಕ ಮಾಹಿತಿ
ಅಶ್ಲೀಲ ವಿಡಿಯೋ ಕೇಸ್ನಲ್ಲಿ ಸಂಸದ ಪ್ರಜ್ವಲ್ ಮತ್ತು ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗ್ತಿದ್ದಂತೆ ತನಿಖೆ ಚುರುಕುಗೊಂಡಿದೆ. ಸದ್ಯ ಪ್ರಕರಣವನ್ನ ಕೈಗೆತ್ತಿಕೊಂಡಿರೋ ಎಸ್ಐಟಿ ತಂಡ ಕೇಸ್ ಬೇಧಿಸಲು ತನಿಖೆಯ ವೇಗವನ್ನ ಹೆಚ್ಚಿಸಿದೆ. ಆದರೆ ಈ ಮಧ್ಯೆ ಹಾಸನ ಆಶ್ಲೀಲ ವಿಡಿಯೋ ಕೇಸ್ನಲ್ಲಿ ಮೊದಲ ಆರೋಪಿಯಾಗಿರೋ ಹೆಚ್.ಡಿ.ರೇವಣ್ಣ ಅವರು ಇಂದು ಎಸ್ಐಟಿ ಮುಂದೆ ಹಾಜರಾಗಲು ನೋಟಿಸ್ ನೀಡಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಹೆಚ್.ಡಿ ರೇವಣ್ಣ ಅವರು ತಮ್ಮ ಕುಟುಂಬಕ್ಕೆ ಎದುರಾದ ಸಂಕಷ್ಟದಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದರು. ಬನಶಂಕರಿಯ ಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದ ರೇವಣ್ಣ ದಂಪತಿ ಸಮೇತ ಹೊಳೇನರಸೀಪುರದ ಮನೆಯಲ್ಲಿ ಹೋಮ ಹವನ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಬೆನ್ನಲ್ಲೇ ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ಇಂದು ಹೆಚ್.ಡಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದು ತನಿಖೆಗೆ ಹಾಜರಾಗಲು ನೋಟಿಸ್ ನೀಡಿದ್ದ ಎಸ್ಐಟಿ ಅಧಿಕಾರಿಗಳು
ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ ರೇವಣ್ಣ ವಿರುದ್ದ ದಾಖಲಾಗಿದ್ದ FIR
ರಾಜ್ಯಾದ್ಯಂತ ಹಲ್ಚಲ್ ಎಬ್ಬಿಸಿರುವ ಹಾಸನ ಅಶ್ಲೀಲ ವಿಡಿಯೋ ಕೇಸ್
ಹಾಸನ ಅಶ್ಲೀಲ ವಿಡಿಯೋ ಹಾಗೂ ಪೆನ್ ಡ್ರೈವ್ ಕೇಸ್ ಹೆಚ್.ಡಿ ರೇವಣ್ಣ ಅವರ ಫ್ಯಾಮಿಲಿಗೆ ಸಂಕಷ್ಟ ತಂದಿದೆ. ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಹೆಚ್.ಡಿ ರೇವಣ್ಣ ಅವರು ಇಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಕೇಸ್ ಸಂಬಂಧ ಹೆಚ್.ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣಗೆ ನಿನ್ನೆಯಷ್ಟೇ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ರಿಲೀಸ್ ಮಾಡಿದ ಕಾರ್ತಿಕ್ ಮಲೇಷ್ಯಾಗೆ ಹೋದ್ರಾ? HDK ಬಿಚ್ಚಿಟ್ಟ ಸ್ಫೋಟಕ ಮಾಹಿತಿ
ಅಶ್ಲೀಲ ವಿಡಿಯೋ ಕೇಸ್ನಲ್ಲಿ ಸಂಸದ ಪ್ರಜ್ವಲ್ ಮತ್ತು ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗ್ತಿದ್ದಂತೆ ತನಿಖೆ ಚುರುಕುಗೊಂಡಿದೆ. ಸದ್ಯ ಪ್ರಕರಣವನ್ನ ಕೈಗೆತ್ತಿಕೊಂಡಿರೋ ಎಸ್ಐಟಿ ತಂಡ ಕೇಸ್ ಬೇಧಿಸಲು ತನಿಖೆಯ ವೇಗವನ್ನ ಹೆಚ್ಚಿಸಿದೆ. ಆದರೆ ಈ ಮಧ್ಯೆ ಹಾಸನ ಆಶ್ಲೀಲ ವಿಡಿಯೋ ಕೇಸ್ನಲ್ಲಿ ಮೊದಲ ಆರೋಪಿಯಾಗಿರೋ ಹೆಚ್.ಡಿ.ರೇವಣ್ಣ ಅವರು ಇಂದು ಎಸ್ಐಟಿ ಮುಂದೆ ಹಾಜರಾಗಲು ನೋಟಿಸ್ ನೀಡಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಹೆಚ್.ಡಿ ರೇವಣ್ಣ ಅವರು ತಮ್ಮ ಕುಟುಂಬಕ್ಕೆ ಎದುರಾದ ಸಂಕಷ್ಟದಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದರು. ಬನಶಂಕರಿಯ ಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದ ರೇವಣ್ಣ ದಂಪತಿ ಸಮೇತ ಹೊಳೇನರಸೀಪುರದ ಮನೆಯಲ್ಲಿ ಹೋಮ ಹವನ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಬೆನ್ನಲ್ಲೇ ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ಇಂದು ಹೆಚ್.ಡಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ