newsfirstkannada.com

ಹಾಸನಾಂಬೆ ದರ್ಶನಕ್ಕೆ ನಿಂತಿದ್ದ ಭಕ್ತರಿಗೆ ಕರೆಂಟ್ ಶಾಕ್.. ಈ ಬಗ್ಗೆ ಗುಂಡೂರಾವ್​ ಹೇಳಿದ್ದೇನು..?

Share :

10-11-2023

    ದೇವಿಯನ್ನು ಕಣ್ತುಂಬಿಕೊಳ್ಳಲು ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಶಾಕ್

    ದೇವಾಲಯದ ವೈರ್​ ತುಂಡಾಗಿದ್ದರಿಂದ ಕರೆಂಟೆ ಶಾಕ್ ತಗುಲಿದೆಯಾ?

    ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ಮಾಹಿತಿ ಪಡೆದ ಸಚಿವ

ಹಾಸನ: ಶಕ್ತಿ ದೇವತೆ ಹಾಸನಾಂಬೆ ದೇವಾಲಯದಲ್ಲಿ ಕರೆಂಟ್ ಶಾಕ್​ನಿಂದ ಸರತಿ ಸಾಲಿನಲ್ಲಿ ಧಿಡೀರ್ ನೂಕು ನುಗ್ಗಲಾಗಿದ್ದು ಮಹಿಳೆಯರು, ಮಕ್ಕಳು ಓಡಲೆತ್ತಿಸಿದಾಗ ಕಾಲು ತುಳಿತ ಉಂಟಾಗಿ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಗಾಯಗಳನ್ನು ಜಿಲ್ಲೆಯ ಹಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶಾಸಕ ಸ್ವರೂಪ್ ಪ್ರಕಾಶ್, ಕೆ.ಎಂ ಶಿವಲಿಂಗೇಗೌಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಹಾಸನಾಂಭೆ ಸನ್ನಿಧಿಯಲ್ಲಿ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಕರೆಂಟ್​ ಶಾಕ್ ತಗುಲಿದ್ದು ಒಂದು ಕಡೆಯಾದ್ರೆ, ಮತ್ತೊಂದು ಕಡೆ ಕಾಲ್ತುಳಿತ ಉಂಟಾಗಿದೆ. ಇದರಿಂದ ಸಾಕಷ್ಟು ಜನರಿಗೆ ಸಣ್ಣ-ಪುಟ್ಟ ಗಾಯಗಳು ಆಗಿವೆ. ಗಾಯಾಳುಗಳನ್ನು ಜಿಲ್ಲೆಯ ಹಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೇವಾಲಯದಲ್ಲಿ ಕರೆಂಟ್ ಶಾಕ್​ನ ಮಾಹಿತಿ ತಿಳಿಯುದ್ದಂತೆ ಆರೋಗ್ಯ ಸಚಿವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ವೈದ್ಯರಿಂದ ಗಾಯಾಳುಗಳ ಮಾಹಿತಿಯನ್ನು ಪಡೆದಿದ್ದು, ಈ ವೇಳೆ ಗಾಯಾಳುಗಳನ್ನು ಮಾತನಾಡಿಸಿದ್ದಾರೆ.

ಇನ್ನು ದೇವಾಲಯಕ್ಕೆ ಲೈಟಿಂಗ್​ ವ್ಯವಸ್ಥೆ ಮಾಡಲಾಗಿತ್ತು. ಈ ಲೈಟಿಂಗ್​ ವ್ಯವಸ್ಥೆಯ ವೈರ್​ವೊಂದು ತುಂಡಾದ ಕಾರಣ ವಿದ್ಯುತ್ ಪ್ರವಾಹಿಸಿದೆ ಎಂದು ಹೇಳಲಾಗುತ್ತಿದೆ. ಮಳೆ ಬೀಳುತ್ತಿದ್ದರೂ ಯಾವುದೇ ಮುನ್ನೆಚ್ಚರಿಕೆ ವಹಿಸಿಲ್ಲ. ಆಡಳಿತ ಮಂಡಳಿಯ ನಿರ್ಲಕ್ಷ್ಯತನದಿಂದ ಈ ಅನಾಹುತ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ ನಿಖರ ಕಾರಣ ಯಾವುದು ಎಂದು ಇನ್ನು ಖಚಿತವಾಗಿ ತಿಳಿದು ಬಂದಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನಾಂಬೆ ದರ್ಶನಕ್ಕೆ ನಿಂತಿದ್ದ ಭಕ್ತರಿಗೆ ಕರೆಂಟ್ ಶಾಕ್.. ಈ ಬಗ್ಗೆ ಗುಂಡೂರಾವ್​ ಹೇಳಿದ್ದೇನು..?

https://newsfirstlive.com/wp-content/uploads/2023/11/DINESH_GUNDURAO.jpg

    ದೇವಿಯನ್ನು ಕಣ್ತುಂಬಿಕೊಳ್ಳಲು ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಶಾಕ್

    ದೇವಾಲಯದ ವೈರ್​ ತುಂಡಾಗಿದ್ದರಿಂದ ಕರೆಂಟೆ ಶಾಕ್ ತಗುಲಿದೆಯಾ?

    ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ಮಾಹಿತಿ ಪಡೆದ ಸಚಿವ

ಹಾಸನ: ಶಕ್ತಿ ದೇವತೆ ಹಾಸನಾಂಬೆ ದೇವಾಲಯದಲ್ಲಿ ಕರೆಂಟ್ ಶಾಕ್​ನಿಂದ ಸರತಿ ಸಾಲಿನಲ್ಲಿ ಧಿಡೀರ್ ನೂಕು ನುಗ್ಗಲಾಗಿದ್ದು ಮಹಿಳೆಯರು, ಮಕ್ಕಳು ಓಡಲೆತ್ತಿಸಿದಾಗ ಕಾಲು ತುಳಿತ ಉಂಟಾಗಿ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಗಾಯಗಳನ್ನು ಜಿಲ್ಲೆಯ ಹಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶಾಸಕ ಸ್ವರೂಪ್ ಪ್ರಕಾಶ್, ಕೆ.ಎಂ ಶಿವಲಿಂಗೇಗೌಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಹಾಸನಾಂಭೆ ಸನ್ನಿಧಿಯಲ್ಲಿ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಕರೆಂಟ್​ ಶಾಕ್ ತಗುಲಿದ್ದು ಒಂದು ಕಡೆಯಾದ್ರೆ, ಮತ್ತೊಂದು ಕಡೆ ಕಾಲ್ತುಳಿತ ಉಂಟಾಗಿದೆ. ಇದರಿಂದ ಸಾಕಷ್ಟು ಜನರಿಗೆ ಸಣ್ಣ-ಪುಟ್ಟ ಗಾಯಗಳು ಆಗಿವೆ. ಗಾಯಾಳುಗಳನ್ನು ಜಿಲ್ಲೆಯ ಹಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೇವಾಲಯದಲ್ಲಿ ಕರೆಂಟ್ ಶಾಕ್​ನ ಮಾಹಿತಿ ತಿಳಿಯುದ್ದಂತೆ ಆರೋಗ್ಯ ಸಚಿವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ವೈದ್ಯರಿಂದ ಗಾಯಾಳುಗಳ ಮಾಹಿತಿಯನ್ನು ಪಡೆದಿದ್ದು, ಈ ವೇಳೆ ಗಾಯಾಳುಗಳನ್ನು ಮಾತನಾಡಿಸಿದ್ದಾರೆ.

ಇನ್ನು ದೇವಾಲಯಕ್ಕೆ ಲೈಟಿಂಗ್​ ವ್ಯವಸ್ಥೆ ಮಾಡಲಾಗಿತ್ತು. ಈ ಲೈಟಿಂಗ್​ ವ್ಯವಸ್ಥೆಯ ವೈರ್​ವೊಂದು ತುಂಡಾದ ಕಾರಣ ವಿದ್ಯುತ್ ಪ್ರವಾಹಿಸಿದೆ ಎಂದು ಹೇಳಲಾಗುತ್ತಿದೆ. ಮಳೆ ಬೀಳುತ್ತಿದ್ದರೂ ಯಾವುದೇ ಮುನ್ನೆಚ್ಚರಿಕೆ ವಹಿಸಿಲ್ಲ. ಆಡಳಿತ ಮಂಡಳಿಯ ನಿರ್ಲಕ್ಷ್ಯತನದಿಂದ ಈ ಅನಾಹುತ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ ನಿಖರ ಕಾರಣ ಯಾವುದು ಎಂದು ಇನ್ನು ಖಚಿತವಾಗಿ ತಿಳಿದು ಬಂದಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More