ಹಾಸನ ಅಶ್ಲೀಲ ವಿಡಿಯೋ ಕೇಸ್ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ
ಪ್ರಕ್ವಲ್ ರೇವಣ್ಣ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಪ್ರಧಾನಿ
ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು
ಹಾಸನ ಅಶ್ಲೀಲ ವಿಡಿಯೋಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಮಾತನಾಡಿದ್ದಾರೆ. ಖಾಸಗಿ ಚಾನೆಲ್ಗೆ ನೀಡಿರೋ ಸಂದರ್ಶನದಲ್ಲಿ ಮೋದಿ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಇದು ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದಾಗ ರೇಕಾರ್ಡ್ ಮಾಡಿರುವ ವಿಡಿಯೋ ಎಂದು ಹೇಳಿದ್ದಾರೆ.
‘ಕಾನೂನು ಸುವ್ಯವಸ್ಥೆ ರಾಜ್ಯಗಳ ವಿಷಯವಾಗಿದೆ. ಪಶ್ಚಿಮ ಬಂಗಾಳ , ಆಂಧ್ರಪ್ರದೇಶ, ಗುಜರಾತ್, ತೆಲಂಗಾಣದಲ್ಲೇ ಆಗಲಿ ಕಾನೂನು ಸುವ್ಯವಸ್ಥೆ ರಾಜ್ಯಗಳ ವಿಷಯವಾಗಿದೆ. ಕರ್ನಾಟಕದಲ್ಲೂ ಕಾನೂನು ಸುವ್ಯವಸ್ಥೆ ರಾಜ್ಯಗಳ ವಿಷಯವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಳಿಕ ಮಾತು ಮುಂದುವರಿಸಿದ ಅವರು, ‘ಕರ್ನಾಟಕ ರಾಜ್ಯ ಸರ್ಕಾರವೇ ಕ್ರಮ ಕಠಿಣ ಕ್ರಮ ಕೈಗೊಳ್ಳಬೇಕು. ಈ 2,979 ಸಾವಿರ ವಿಡಿಯೋಗಳನ್ನು ಒಂದೇ ದಿನ ಮಾಡಿಲ್ಲ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದಾಗ ರೇಕಾರ್ಡ್ ಮಾಡಿರುವ ವಿಡಿಯೋ ಇದು. ಆರೋಪಿಯ ಮೇಲೆ ರಾಜ್ಯ ಸರ್ಕಾರ ನಿಗಾ ವಹಿಸಬೇಕಿತ್ತು ಎಂದು ಹೇಳಿದ್ದಾರೆ.
ಇದನ್ನೂ ಓದಿ: VIDEO: ನಿನ್ನೆ ಡ್ರೆಸ್ಸಿಂಗ್ ರೂಂಗೆ ಹೋಗಿ ಅತ್ತು ಬಿಟ್ಟ ರೋಹಿತ್ ಶರ್ಮಾ..ಅಷ್ಟಕ್ಕೂ ಕಾರಣ?
ವಿದೇಶಕ್ಕೆ ಹೋಗಲು ಬಿಟ್ಟಿರುವುದು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಗಮನಕ್ಕೆ ವಿಷಯ ತಂದಿಲ್ಲ. ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳ ಚುನಾವಣೆ ಮುಗಿದ ಮೇಲೆ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳ ಚುನಾವಣೆ ಮುಗಿದ ಮೇಲೆ ವಿಡಿಯೋ ಬಿಡುಗಡೆ ರಾಜಕೀಯ ಗೇಮ್. ಇದು ಅನುಮಾನಕ್ಕೆ ಕಾರಣವಾಗಿದೆ. ಈ ರೀತಿಯ ರಾಜಕೀಯ ಗೇಮ್ ದೇಶದಲ್ಲಿ ನಿಲ್ಲಬೇಕು. ಪ್ರಜ್ವಲ್ ರೇವಣ್ಣರಂತಹ ಅತ್ಯಾಚಾರಿ ವ್ಯಕ್ತಿಗಳ ಬಗ್ಗೆ ಶೂನ್ಯ ಸಹಿಷ್ಣುತೆ ಹೊಂದಿರಬೇಕು. ಕಠಿಣಾತಿ ಕಠಿಣ ಶಿಕ್ಷೆ ಆಗಲೇಬೇಕು. ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ವಾಪಸ್ಸು ಕರೆ ತರಬೇಕು ಎಂದು ಮೋದಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹಾಸನ ಅಶ್ಲೀಲ ವಿಡಿಯೋ ಕೇಸ್ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ
ಪ್ರಕ್ವಲ್ ರೇವಣ್ಣ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಪ್ರಧಾನಿ
ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು
ಹಾಸನ ಅಶ್ಲೀಲ ವಿಡಿಯೋಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಮಾತನಾಡಿದ್ದಾರೆ. ಖಾಸಗಿ ಚಾನೆಲ್ಗೆ ನೀಡಿರೋ ಸಂದರ್ಶನದಲ್ಲಿ ಮೋದಿ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಇದು ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದಾಗ ರೇಕಾರ್ಡ್ ಮಾಡಿರುವ ವಿಡಿಯೋ ಎಂದು ಹೇಳಿದ್ದಾರೆ.
‘ಕಾನೂನು ಸುವ್ಯವಸ್ಥೆ ರಾಜ್ಯಗಳ ವಿಷಯವಾಗಿದೆ. ಪಶ್ಚಿಮ ಬಂಗಾಳ , ಆಂಧ್ರಪ್ರದೇಶ, ಗುಜರಾತ್, ತೆಲಂಗಾಣದಲ್ಲೇ ಆಗಲಿ ಕಾನೂನು ಸುವ್ಯವಸ್ಥೆ ರಾಜ್ಯಗಳ ವಿಷಯವಾಗಿದೆ. ಕರ್ನಾಟಕದಲ್ಲೂ ಕಾನೂನು ಸುವ್ಯವಸ್ಥೆ ರಾಜ್ಯಗಳ ವಿಷಯವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಳಿಕ ಮಾತು ಮುಂದುವರಿಸಿದ ಅವರು, ‘ಕರ್ನಾಟಕ ರಾಜ್ಯ ಸರ್ಕಾರವೇ ಕ್ರಮ ಕಠಿಣ ಕ್ರಮ ಕೈಗೊಳ್ಳಬೇಕು. ಈ 2,979 ಸಾವಿರ ವಿಡಿಯೋಗಳನ್ನು ಒಂದೇ ದಿನ ಮಾಡಿಲ್ಲ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದಾಗ ರೇಕಾರ್ಡ್ ಮಾಡಿರುವ ವಿಡಿಯೋ ಇದು. ಆರೋಪಿಯ ಮೇಲೆ ರಾಜ್ಯ ಸರ್ಕಾರ ನಿಗಾ ವಹಿಸಬೇಕಿತ್ತು ಎಂದು ಹೇಳಿದ್ದಾರೆ.
ಇದನ್ನೂ ಓದಿ: VIDEO: ನಿನ್ನೆ ಡ್ರೆಸ್ಸಿಂಗ್ ರೂಂಗೆ ಹೋಗಿ ಅತ್ತು ಬಿಟ್ಟ ರೋಹಿತ್ ಶರ್ಮಾ..ಅಷ್ಟಕ್ಕೂ ಕಾರಣ?
ವಿದೇಶಕ್ಕೆ ಹೋಗಲು ಬಿಟ್ಟಿರುವುದು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಗಮನಕ್ಕೆ ವಿಷಯ ತಂದಿಲ್ಲ. ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳ ಚುನಾವಣೆ ಮುಗಿದ ಮೇಲೆ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳ ಚುನಾವಣೆ ಮುಗಿದ ಮೇಲೆ ವಿಡಿಯೋ ಬಿಡುಗಡೆ ರಾಜಕೀಯ ಗೇಮ್. ಇದು ಅನುಮಾನಕ್ಕೆ ಕಾರಣವಾಗಿದೆ. ಈ ರೀತಿಯ ರಾಜಕೀಯ ಗೇಮ್ ದೇಶದಲ್ಲಿ ನಿಲ್ಲಬೇಕು. ಪ್ರಜ್ವಲ್ ರೇವಣ್ಣರಂತಹ ಅತ್ಯಾಚಾರಿ ವ್ಯಕ್ತಿಗಳ ಬಗ್ಗೆ ಶೂನ್ಯ ಸಹಿಷ್ಣುತೆ ಹೊಂದಿರಬೇಕು. ಕಠಿಣಾತಿ ಕಠಿಣ ಶಿಕ್ಷೆ ಆಗಲೇಬೇಕು. ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ವಾಪಸ್ಸು ಕರೆ ತರಬೇಕು ಎಂದು ಮೋದಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ