ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹೆಚ್.ಡಿ.ದೇವೇಗೌಡ
ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್ಡಿಡಿ
ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಮಾಜಿ ಪ್ರಧಾನಿಗೆ ವಿಶ್ರಾಂತಿ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸಂಸತ್ ಅಧಿವೇಶನಕ್ಕೆ ಹೋಗಿ ಬಂದ ಬಳಿಕ ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರೋ ಹೆಚ್.ಡಿ ದೇವೇಗೌಡರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನು ಓದಿ: ದೇವೇಗೌಡರಿಗೆ ಉಸಿರಾಟದ ಸಮಸ್ಯೆ; ಮಣಿಪಾಲ್ ಆಸ್ಪತ್ರೆ ವೈದ್ಯರು ಹೇಳಿದ್ದೇನು..?
ಸದ್ಯ ಹೆಚ್.ಡಿ ದೇವೇಗೌಡರನ್ನು ಇಂದು ಮಧ್ಯಾಹ್ನ 3:30ಕ್ಕೆ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಕಳೆದು ಮೂರು ದಿನಗಳಿಂದ ಹಿರಿಯ ವೈದ್ಯ ಡಾ. ಸತ್ಯನಾರಾಯಣ ಮೈಸೂರು ನೇತೃತ್ವದಲ್ಲಿ ಹೆಚ್.ಡಿ ದೇವೇಗೌಡರು ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಪದ್ಮನಾಭನಗರದ ನಿವಾಸಕ್ಕೆ ಹೆಚ್.ಡಿ ದೇವೇಗೌಡರನ್ನು ಕಳುಹಿಸಲಾಗಿದೆ.
ದೆಹಲಿಗೆ ಪ್ರಯಾಣಿಸಿದ ಬಳಿಕ ವಿಪರೀತ ಚಳಿಯ ಕಾರಣ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆದಿದ್ದರು. ಕಳೆದ 3 ದಿನಗಳಿಂದ ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಗೌಡರಿಗೆ ಅತಿಯಾದ ಕೆಮ್ಮಿನಿಂದ ಶ್ವಾಸಕೋಶದಲ್ಲಿ ಇನ್ಫೆಂಕ್ಷನ್ ಆಗಿತ್ತು. ಉಸಿರಾಟದ ಸಮಸ್ಯೆ ಇರುವ ಕಾರಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.. ಸದ್ಯ ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು ಅವರನ್ನು ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹೆಚ್.ಡಿ.ದೇವೇಗೌಡ
ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್ಡಿಡಿ
ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಮಾಜಿ ಪ್ರಧಾನಿಗೆ ವಿಶ್ರಾಂತಿ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸಂಸತ್ ಅಧಿವೇಶನಕ್ಕೆ ಹೋಗಿ ಬಂದ ಬಳಿಕ ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರೋ ಹೆಚ್.ಡಿ ದೇವೇಗೌಡರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನು ಓದಿ: ದೇವೇಗೌಡರಿಗೆ ಉಸಿರಾಟದ ಸಮಸ್ಯೆ; ಮಣಿಪಾಲ್ ಆಸ್ಪತ್ರೆ ವೈದ್ಯರು ಹೇಳಿದ್ದೇನು..?
ಸದ್ಯ ಹೆಚ್.ಡಿ ದೇವೇಗೌಡರನ್ನು ಇಂದು ಮಧ್ಯಾಹ್ನ 3:30ಕ್ಕೆ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಕಳೆದು ಮೂರು ದಿನಗಳಿಂದ ಹಿರಿಯ ವೈದ್ಯ ಡಾ. ಸತ್ಯನಾರಾಯಣ ಮೈಸೂರು ನೇತೃತ್ವದಲ್ಲಿ ಹೆಚ್.ಡಿ ದೇವೇಗೌಡರು ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಪದ್ಮನಾಭನಗರದ ನಿವಾಸಕ್ಕೆ ಹೆಚ್.ಡಿ ದೇವೇಗೌಡರನ್ನು ಕಳುಹಿಸಲಾಗಿದೆ.
ದೆಹಲಿಗೆ ಪ್ರಯಾಣಿಸಿದ ಬಳಿಕ ವಿಪರೀತ ಚಳಿಯ ಕಾರಣ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆದಿದ್ದರು. ಕಳೆದ 3 ದಿನಗಳಿಂದ ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಗೌಡರಿಗೆ ಅತಿಯಾದ ಕೆಮ್ಮಿನಿಂದ ಶ್ವಾಸಕೋಶದಲ್ಲಿ ಇನ್ಫೆಂಕ್ಷನ್ ಆಗಿತ್ತು. ಉಸಿರಾಟದ ಸಮಸ್ಯೆ ಇರುವ ಕಾರಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.. ಸದ್ಯ ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು ಅವರನ್ನು ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ