ವಿಪಕ್ಷ ನಾಯಕ ಯತ್ನಾಳ್ ಅಂತಾ ಬಹುತೇಕ ತೀರ್ಮಾನ ಆಗಿದೆ
ಬಿಜೆಪಿ ರಾಜ್ಯಾಧ್ಯಕ್ಷ ಸಿ.ಟಿ ರವಿ ಅವರೇ ಆಗುತ್ತಾರೆ ಎಂದ HDD
ವಿರೋಧ ಪಕ್ಷದ ನಾಯಕನಿಲ್ಲದೆ ಸದನದಲ್ಲಿ ಹೋರಾಡಿದ ಬಿಜೆಪಿ
ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೆ ಸದನದಲ್ಲಿ ಹೋರಾಡಿದ ಬಿಜೆಪಿ ಪಕ್ಷ ಇನ್ನೂ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗ್ತಾರೆ ಅನ್ನೋ ಪ್ರಶ್ನೆಗೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಹೀಗಿರುವಾಗ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಹತ್ವದ ಸುಳಿವು ಬಿಟ್ಟು ಕೊಟ್ಟಿದ್ದಾರೆ.
ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಟಿ ರವಿ, ವಿರೋಧ ಪಕ್ಷದ ನಾಯಕ ಯತ್ನಾಳ್ ಅಂತಾ ಬಹುತೇಕ ತೀರ್ಮಾನ ಆಗಿದೆ ಎಂದು ಹೆಚ್.ಡಿ ದೇವೇಗೌಡರು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಜಿ ಪ್ರಧಾನಿ, ಸದನದಲ್ಲಿ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದರು. ರಾಜ್ಯ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯತ್ನಾಳ್ ಅಂತಾ ಬಹುತೇಕ ತೀರ್ಮಾನ ಆಗಿದೆ. ಹೀಗಾಗಿ ಬಿಜೆಪಿ ಜೊತೆ ನಮ್ಮ ಜಂಟಿ ಹೋರಾಟ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಅಧಿಕೃತ ವಿರೋಧ ಪಕ್ಷ ಬಿಜೆಪಿಯೇ ಆಗಿದೆ. ನಮ್ಮದು ಅನಧಿಕೃತ ವಿಪಕ್ಷ. ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಹೋಗಿಲ್ಲ. ವಿರೋಧಿ ವಿಚಾರ ಬಂದಾಗ ಹೋರಾಟ ನಡೆಯುತ್ತೆ. ಕಾಂಗ್ರೆಸ್ ಇದ್ದಾಗಲೂ ನಡೆದಿದೆ, ಬಿಜೆಪಿ ಇದ್ದಾಗಲೂ ನಡೆಯುತ್ತಿದೆ. ಕಾಂಗ್ರೆಸ್ ವಿಪಕ್ಷ ಇದ್ದಾಗಲೂ ಒಟ್ಟಿಗೆ ವಿರೋಧ ಮಾಡಿದ್ದೇವೆ. ಇದರಲ್ಲಿ ಹೊಂದಾಣಿಕೆ ಅನ್ನೋ ವಿಚಾರ ಬಳಸೋದು ಬೇಡ ಎಂದು ಹೆಚ್.ಡಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಿಪಕ್ಷ ನಾಯಕ ಯತ್ನಾಳ್ ಅಂತಾ ಬಹುತೇಕ ತೀರ್ಮಾನ ಆಗಿದೆ
ಬಿಜೆಪಿ ರಾಜ್ಯಾಧ್ಯಕ್ಷ ಸಿ.ಟಿ ರವಿ ಅವರೇ ಆಗುತ್ತಾರೆ ಎಂದ HDD
ವಿರೋಧ ಪಕ್ಷದ ನಾಯಕನಿಲ್ಲದೆ ಸದನದಲ್ಲಿ ಹೋರಾಡಿದ ಬಿಜೆಪಿ
ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೆ ಸದನದಲ್ಲಿ ಹೋರಾಡಿದ ಬಿಜೆಪಿ ಪಕ್ಷ ಇನ್ನೂ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗ್ತಾರೆ ಅನ್ನೋ ಪ್ರಶ್ನೆಗೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಹೀಗಿರುವಾಗ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಹತ್ವದ ಸುಳಿವು ಬಿಟ್ಟು ಕೊಟ್ಟಿದ್ದಾರೆ.
ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಟಿ ರವಿ, ವಿರೋಧ ಪಕ್ಷದ ನಾಯಕ ಯತ್ನಾಳ್ ಅಂತಾ ಬಹುತೇಕ ತೀರ್ಮಾನ ಆಗಿದೆ ಎಂದು ಹೆಚ್.ಡಿ ದೇವೇಗೌಡರು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಜಿ ಪ್ರಧಾನಿ, ಸದನದಲ್ಲಿ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದರು. ರಾಜ್ಯ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯತ್ನಾಳ್ ಅಂತಾ ಬಹುತೇಕ ತೀರ್ಮಾನ ಆಗಿದೆ. ಹೀಗಾಗಿ ಬಿಜೆಪಿ ಜೊತೆ ನಮ್ಮ ಜಂಟಿ ಹೋರಾಟ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಅಧಿಕೃತ ವಿರೋಧ ಪಕ್ಷ ಬಿಜೆಪಿಯೇ ಆಗಿದೆ. ನಮ್ಮದು ಅನಧಿಕೃತ ವಿಪಕ್ಷ. ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಹೋಗಿಲ್ಲ. ವಿರೋಧಿ ವಿಚಾರ ಬಂದಾಗ ಹೋರಾಟ ನಡೆಯುತ್ತೆ. ಕಾಂಗ್ರೆಸ್ ಇದ್ದಾಗಲೂ ನಡೆದಿದೆ, ಬಿಜೆಪಿ ಇದ್ದಾಗಲೂ ನಡೆಯುತ್ತಿದೆ. ಕಾಂಗ್ರೆಸ್ ವಿಪಕ್ಷ ಇದ್ದಾಗಲೂ ಒಟ್ಟಿಗೆ ವಿರೋಧ ಮಾಡಿದ್ದೇವೆ. ಇದರಲ್ಲಿ ಹೊಂದಾಣಿಕೆ ಅನ್ನೋ ವಿಚಾರ ಬಳಸೋದು ಬೇಡ ಎಂದು ಹೆಚ್.ಡಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ