ತಾರಕಕ್ಕೇರಿದ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ
ಮಂಡ್ಯದಿಂದ ಹೆಚ್ಡಿಕೆ ನಿಲ್ಲಲೇಬೇಕು ಎಂದು ಒತ್ತಾಯ
ಈ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ಹೇಳಿದ್ದೇನು ಗೊತ್ತಾ?
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯ ಮಾಡಿದ ಸಕ್ಕರೆನಾಡಿನ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು; ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು.
ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಜಮಾಯಿಸಿದ ಮಂಡ್ಯ ಜಿಲ್ಲೆಯ ಕಾರ್ಯಕರ್ತರು, ಮುಖಂಡರು ಕುಮಾರಸ್ವಾಮಿ ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಬೇಕು ಎಂದು ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ತಂದೆಯವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಈಗಷ್ಟೇ ಮನೆಗೆ ಬಂದಿದ್ದಾರೆ. ಅವರಿಗೆ ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿಕೊಂಡರು. ನಿಖಿಲ್ ಅವರ ಮಾತಿನ ನಡುವೆಯೇ ಕುಮಾರಸ್ವಾಮಿ ಅವರೇ ನಮ್ಮ ಅಭ್ಯರ್ಥಿ ಎಂದು ಘೋಷಣೆಗಳನ್ನು ಕೂಗತೊಡಗಿದ ಕಾರ್ಯಕರ್ತರನ್ನು ಕೊನೆಗೆ ಕುಮಾರಸ್ವಾಮಿ ಅವರೇ ಸಮಾಧಾನಪಡಿಸಬೇಕಾಯಿತು.
ನನಗೆ ಮಂಡ್ಯದಲ್ಲಿ ವಿಶೇಷ ಪ್ರೀತಿ ಸಿಕ್ಕಿದೆ ಎಂದ ಹೆಚ್ಡಿಕೆ
ಹೆಚ್ಚು ಆಯಾಸ ಮಾಡಿಕೊಳ್ಳಬಾರದು, ಹೆಚ್ಚು ಮಾತನಾಡಲೂಬಾರದು ಎಂದು ವೈದ್ಯರು ನೀಡಿರುವ ಸಲಹೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು ಅವರು, ಮಂಡ್ಯದಲ್ಲಿ ನಮಗೆ ವಿಶೇಷ ಪ್ರೀತಿ ವಿಶ್ವಾಸ ಸಿಕ್ಕಿದೆ. ಅದು ನನ್ನ ಭಾಗ್ಯ. ನಾನು ಈ ಭೂಮಿಯಲ್ಲಿ ಇರುವವರೆಗೂ ಈ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ನನಗೆ ಈವರೆಗೆ ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನನ್ನ ಆರೋಗ್ಯವನ್ನು ನೋಡಿಕೊಂಡು ಪಕ್ಷದ ಕೆಲಸ, ಜನರ ಸೇವೆ ಮಾಡಬೇಕಿದೆ ಎಂದರು ಅವರು.
ಇದನ್ನೂ ಓದಿ: ಹೃದಯ ಶಸ್ತ್ರ ಚಿಕಿತ್ಸೆಯಿಂದ ಪುನರ್ಜನ್ಮ.. ಮಂಡ್ಯ ಚುನಾವಣೆಯ ಸ್ಪರ್ಧೆ ಬಗ್ಗೆ ಹೆಚ್ಡಿಕೆ ಹೇಳಿದ್ದೇನು?
ನಮ್ಮ ಪಕ್ಷದಲ್ಲಿ ದೊಡ್ಡ ನಾಯಕರು ಯಾರು ಇಲ್ಲ. ನಮ್ಮ ಪಕ್ಷದಲ್ಲಿ ಬೆಳೆದವರು ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿ ಹೋಗಿದ್ದಾರೆ. ನಿಮ್ಮ ಆಸೆಗೆ ನಿರಾಸೆ ಮಾಡಲ್ಲ ಎಂದು ಮಂಡ್ಯದ ಸಭೆಯಲ್ಲೇ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ನುಡಿದರು. ನಾನು ಹುಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ ಜಿಲ್ಲೆ, ಜೀವಕ್ಕೆ ಜೀವವಾಗಿ ನನ್ನನ್ನು ಪೊರೆದು ಸಲಹುತ್ತಿರುವ ಜಿಲ್ಲೆ ಮಂಡ್ಯ. ಈ ನೆಲವನ್ನು, ಈ ಜನರ ಪ್ರೀತಿ ವಿಶ್ವಾಸವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ನಾಳೆ (ಸೋಮವಾರ) ಚನ್ನಪಟ್ಟಣ ಕ್ಷೇತ್ರದ ಮುಖಂಡರನ್ನು ಕರೆಸಿ ಮಾತನಾಡುತ್ತೇನೆ. ನಾಳೆಯ ದಿನ ಯಾವುದೇ ಕಾರಣಕ್ಕೂ ನಿಮಗೆ ನಿರಾಶೆ ಮಾಡಲ್ಲ ಎಂದು ಮಂಡ್ಯ ಜಿಲ್ಲೆಯ ಕಾರ್ಯಕರ್ತರಿಗೆ ಕುಮಾರಸ್ವಾಮಿ ಅವರು ಭರವಸೆ ನೀಡಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ತಾರಕಕ್ಕೇರಿದ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ
ಮಂಡ್ಯದಿಂದ ಹೆಚ್ಡಿಕೆ ನಿಲ್ಲಲೇಬೇಕು ಎಂದು ಒತ್ತಾಯ
ಈ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ಹೇಳಿದ್ದೇನು ಗೊತ್ತಾ?
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯ ಮಾಡಿದ ಸಕ್ಕರೆನಾಡಿನ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು; ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು.
ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಜಮಾಯಿಸಿದ ಮಂಡ್ಯ ಜಿಲ್ಲೆಯ ಕಾರ್ಯಕರ್ತರು, ಮುಖಂಡರು ಕುಮಾರಸ್ವಾಮಿ ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಬೇಕು ಎಂದು ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ತಂದೆಯವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಈಗಷ್ಟೇ ಮನೆಗೆ ಬಂದಿದ್ದಾರೆ. ಅವರಿಗೆ ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿಕೊಂಡರು. ನಿಖಿಲ್ ಅವರ ಮಾತಿನ ನಡುವೆಯೇ ಕುಮಾರಸ್ವಾಮಿ ಅವರೇ ನಮ್ಮ ಅಭ್ಯರ್ಥಿ ಎಂದು ಘೋಷಣೆಗಳನ್ನು ಕೂಗತೊಡಗಿದ ಕಾರ್ಯಕರ್ತರನ್ನು ಕೊನೆಗೆ ಕುಮಾರಸ್ವಾಮಿ ಅವರೇ ಸಮಾಧಾನಪಡಿಸಬೇಕಾಯಿತು.
ನನಗೆ ಮಂಡ್ಯದಲ್ಲಿ ವಿಶೇಷ ಪ್ರೀತಿ ಸಿಕ್ಕಿದೆ ಎಂದ ಹೆಚ್ಡಿಕೆ
ಹೆಚ್ಚು ಆಯಾಸ ಮಾಡಿಕೊಳ್ಳಬಾರದು, ಹೆಚ್ಚು ಮಾತನಾಡಲೂಬಾರದು ಎಂದು ವೈದ್ಯರು ನೀಡಿರುವ ಸಲಹೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು ಅವರು, ಮಂಡ್ಯದಲ್ಲಿ ನಮಗೆ ವಿಶೇಷ ಪ್ರೀತಿ ವಿಶ್ವಾಸ ಸಿಕ್ಕಿದೆ. ಅದು ನನ್ನ ಭಾಗ್ಯ. ನಾನು ಈ ಭೂಮಿಯಲ್ಲಿ ಇರುವವರೆಗೂ ಈ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ನನಗೆ ಈವರೆಗೆ ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನನ್ನ ಆರೋಗ್ಯವನ್ನು ನೋಡಿಕೊಂಡು ಪಕ್ಷದ ಕೆಲಸ, ಜನರ ಸೇವೆ ಮಾಡಬೇಕಿದೆ ಎಂದರು ಅವರು.
ಇದನ್ನೂ ಓದಿ: ಹೃದಯ ಶಸ್ತ್ರ ಚಿಕಿತ್ಸೆಯಿಂದ ಪುನರ್ಜನ್ಮ.. ಮಂಡ್ಯ ಚುನಾವಣೆಯ ಸ್ಪರ್ಧೆ ಬಗ್ಗೆ ಹೆಚ್ಡಿಕೆ ಹೇಳಿದ್ದೇನು?
ನಮ್ಮ ಪಕ್ಷದಲ್ಲಿ ದೊಡ್ಡ ನಾಯಕರು ಯಾರು ಇಲ್ಲ. ನಮ್ಮ ಪಕ್ಷದಲ್ಲಿ ಬೆಳೆದವರು ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿ ಹೋಗಿದ್ದಾರೆ. ನಿಮ್ಮ ಆಸೆಗೆ ನಿರಾಸೆ ಮಾಡಲ್ಲ ಎಂದು ಮಂಡ್ಯದ ಸಭೆಯಲ್ಲೇ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ನುಡಿದರು. ನಾನು ಹುಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ ಜಿಲ್ಲೆ, ಜೀವಕ್ಕೆ ಜೀವವಾಗಿ ನನ್ನನ್ನು ಪೊರೆದು ಸಲಹುತ್ತಿರುವ ಜಿಲ್ಲೆ ಮಂಡ್ಯ. ಈ ನೆಲವನ್ನು, ಈ ಜನರ ಪ್ರೀತಿ ವಿಶ್ವಾಸವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ನಾಳೆ (ಸೋಮವಾರ) ಚನ್ನಪಟ್ಟಣ ಕ್ಷೇತ್ರದ ಮುಖಂಡರನ್ನು ಕರೆಸಿ ಮಾತನಾಡುತ್ತೇನೆ. ನಾಳೆಯ ದಿನ ಯಾವುದೇ ಕಾರಣಕ್ಕೂ ನಿಮಗೆ ನಿರಾಶೆ ಮಾಡಲ್ಲ ಎಂದು ಮಂಡ್ಯ ಜಿಲ್ಲೆಯ ಕಾರ್ಯಕರ್ತರಿಗೆ ಕುಮಾರಸ್ವಾಮಿ ಅವರು ಭರವಸೆ ನೀಡಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ