ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕಾಂಗ್ರೆಸ್ ಸರ್ಕಾರ
ಕಾಂಗ್ರೆಸ್ ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಕಿಡಿ
ಸಿಎಂ ಸಿದ್ದರಾಮಯ್ಯಗೆ ಕೊನೇ ವಾರ್ನಿಂಗ್ ಕೊಟ್ಟ ಹೆಚ್ಡಿಕೆ
ಮಂಡ್ಯ: ರೈತರ ಭಾರೀ ಆಕ್ರೋಶದ ಮಧ್ಯೆಯೂ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್ ಆದೇಶಕ್ಕೆ ಮಣಿದು ತಮಿಳುನಾಡಿಗೆ ನೀರು ಬಿಟ್ಟಿತ್ತು. ಕರ್ನಾಟಕದಲ್ಲೇ ನೀರಿನ ಕೊರತೆಯಿದ್ದರೂ ತಮಿಳುನಾಡಿಗೆ ಬಿಟ್ಟಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ರೈತರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ರು. ಈ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ವಾರ್ನಿಂಗ್ ಕೊಟ್ಟಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಹೆಚ್.ಡಿ ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಕಾವೇರಿ ವಿಚಾರದಲ್ಲಿ ಸರ್ಕಾರ ಹುಡುಗಾಟಿಕೆ ಮಾಡಬಾರದು. ಕಾವೇರಿ ನೀರು ನಿರ್ವಹಣಾ ಮಂಡಳಿ ಬಿಡಿ ಎಂದ ಕೂಡಲೇ ಸುಮ್ಮನೇ ಕೂರಬಾರದು. ನೀರು ಬಿಡಲ್ಲ ಎಂದು ಸರ್ಕಾರ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಸುಪ್ರೀಂಕೋರ್ಟ್ಗೆ ಹೋಗಬೇಕಿತ್ತು ಎಂದ ಹೆಚ್ಡಿಕೆ
ತಮಿಳುನಾಡು ಸರ್ಕಾರ ಕಾವೇರಿ ನೀರು ರಿಲೀಸ್ ಮಾಡಿ ಎಂದು ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ಗೆ ಹೋಗಿದೆ. ಇದರ ವಿರುದ್ಧ ರಾಜ್ಯ ಸರ್ಕಾರವೂ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಬೇಕಿತ್ತು. ನೀರು ಬಿಡುವ ಬದಲಿಗೆ ಪ್ರತಿಭಟನೆ ಮಾಡಬೇಕಿತ್ತು ಎಂದು ಹೇಳಿದರು.
ಜನಪರ ಕೆಲಸ ಮಾಡಿದ್ರೆ ನಾವು ಬೆಂಬಲ ನೀಡುತ್ತೇವೆ. ಮೊದಲೇ ಸರ್ವಪಕ್ಷಗಳ ಸಭೆ ಕರೆದು ಕಾವೇರಿ ನೀರು ಬಿಡುಗಡೆ ಸಂಬಂಧ ಮಾತಾಡಬೇಕಿತ್ತು. ಮೊದಲು ಕೋರ್ಟ್ ಮೆಟ್ಟಿಲೇರಿ ಸುಪ್ರೀಂಕೋರ್ಟ್ ನಿರ್ಧಾರ ಬದ್ಧವಾಗಿರಬೇಕಿತ್ತು ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕಾಂಗ್ರೆಸ್ ಸರ್ಕಾರ
ಕಾಂಗ್ರೆಸ್ ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಕಿಡಿ
ಸಿಎಂ ಸಿದ್ದರಾಮಯ್ಯಗೆ ಕೊನೇ ವಾರ್ನಿಂಗ್ ಕೊಟ್ಟ ಹೆಚ್ಡಿಕೆ
ಮಂಡ್ಯ: ರೈತರ ಭಾರೀ ಆಕ್ರೋಶದ ಮಧ್ಯೆಯೂ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್ ಆದೇಶಕ್ಕೆ ಮಣಿದು ತಮಿಳುನಾಡಿಗೆ ನೀರು ಬಿಟ್ಟಿತ್ತು. ಕರ್ನಾಟಕದಲ್ಲೇ ನೀರಿನ ಕೊರತೆಯಿದ್ದರೂ ತಮಿಳುನಾಡಿಗೆ ಬಿಟ್ಟಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ರೈತರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ರು. ಈ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ವಾರ್ನಿಂಗ್ ಕೊಟ್ಟಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಹೆಚ್.ಡಿ ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಕಾವೇರಿ ವಿಚಾರದಲ್ಲಿ ಸರ್ಕಾರ ಹುಡುಗಾಟಿಕೆ ಮಾಡಬಾರದು. ಕಾವೇರಿ ನೀರು ನಿರ್ವಹಣಾ ಮಂಡಳಿ ಬಿಡಿ ಎಂದ ಕೂಡಲೇ ಸುಮ್ಮನೇ ಕೂರಬಾರದು. ನೀರು ಬಿಡಲ್ಲ ಎಂದು ಸರ್ಕಾರ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಸುಪ್ರೀಂಕೋರ್ಟ್ಗೆ ಹೋಗಬೇಕಿತ್ತು ಎಂದ ಹೆಚ್ಡಿಕೆ
ತಮಿಳುನಾಡು ಸರ್ಕಾರ ಕಾವೇರಿ ನೀರು ರಿಲೀಸ್ ಮಾಡಿ ಎಂದು ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ಗೆ ಹೋಗಿದೆ. ಇದರ ವಿರುದ್ಧ ರಾಜ್ಯ ಸರ್ಕಾರವೂ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಬೇಕಿತ್ತು. ನೀರು ಬಿಡುವ ಬದಲಿಗೆ ಪ್ರತಿಭಟನೆ ಮಾಡಬೇಕಿತ್ತು ಎಂದು ಹೇಳಿದರು.
ಜನಪರ ಕೆಲಸ ಮಾಡಿದ್ರೆ ನಾವು ಬೆಂಬಲ ನೀಡುತ್ತೇವೆ. ಮೊದಲೇ ಸರ್ವಪಕ್ಷಗಳ ಸಭೆ ಕರೆದು ಕಾವೇರಿ ನೀರು ಬಿಡುಗಡೆ ಸಂಬಂಧ ಮಾತಾಡಬೇಕಿತ್ತು. ಮೊದಲು ಕೋರ್ಟ್ ಮೆಟ್ಟಿಲೇರಿ ಸುಪ್ರೀಂಕೋರ್ಟ್ ನಿರ್ಧಾರ ಬದ್ಧವಾಗಿರಬೇಕಿತ್ತು ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ