ಪ್ರಧಾನಿ ಮೋದಿಯನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಹಿರಿಯ ನಾಯಕರು
ಮೈಸೂರಿನಲ್ಲಿ ನಡೆದ ಸಮಾವೇಶಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿ
ವೇದಿಕೆ ಮೇಲೆ ಕುಳಿತಿದ್ದ ಸುಮಲತಾ ಅವರನ್ನೇ ಮರೆತು ಹೋದ ಕುಮಾರಸ್ವಾಮಿ
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯ ನಿಮಿತ್ತ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾತುರದಿಂದ ಕಾಯುತ್ತಿದ್ದರು.
ಇದನ್ನೂ ಓದಿ: ಇಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ; ಯಾವ ಯಾವ ಕ್ಷೇತ್ರದಲ್ಲಿ ಮತಬೇಟೆ?
ಇದೇ ವೇಳೆ ಸಮಾವೇಶ ವೇದಿಕೆ ಮೇಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಇದ್ದರು. ಇನ್ನೊಂದು ಕಡೆ ಮಂಡ್ಯ ಹಾಲಿ ಸಂಸದೆ ಸುಮಲತಾ ಅಂಬರೀಶ್, ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಕುಳಿತುಕೊಂಡಿದ್ದರು. ಈ ವೇಳೆ ವೇದಿಕೆ ಮೇಲೆ ಹೆಚ್.ಡಿ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಮಾತಾಡಿಸಲು ಬಂದಿದ್ದರು.
ಆ ನಂತರ ಎಲ್ಲರನ್ನೂ ಮಾತಾಡಿಸಿದ ಬಳಿಕ ಸುಮಲತಾ ಅಂಬರೀಶ್ ಹಾಗೂ ಪ್ರತಾಪ್ ಸಿಂಹರನ್ನು ಗಮನಿಸದೆ ಹಾಗೇ ಹೋಗಿದ್ದರು. ಇದನ್ನು ಗಮನಿಸಿದ ಸುಮಲತಾ ಅಂಬರೀಶ್ ಬೇಸರದಿಂದ ಎದ್ದು ಕುಳಿತುಕೊಂಡರು. ಬಳಿಕ ಮತ್ತೆ ಬಂದು ಸುಮಲತಾ ಅಂಬರೀಶ್ ಹಾಗೂ ಪ್ರತಾಪ್ ಸಿಂಹರನ್ನು ಮಾತಾಡಿಸಿದ್ದಾರೆ. ಈ ವೇಳೆ ಪ್ರತಾಪ್ ಸಿಂಹ ಹೆಚ್. ಡಿ. ಕುಮಾರಸ್ವಾಮಿ ಕಾಲಿಗೆ ಬಿದ್ದು ಆರ್ಶೀವಾದ ಪಡೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪ್ರಧಾನಿ ಮೋದಿಯನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಹಿರಿಯ ನಾಯಕರು
ಮೈಸೂರಿನಲ್ಲಿ ನಡೆದ ಸಮಾವೇಶಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿ
ವೇದಿಕೆ ಮೇಲೆ ಕುಳಿತಿದ್ದ ಸುಮಲತಾ ಅವರನ್ನೇ ಮರೆತು ಹೋದ ಕುಮಾರಸ್ವಾಮಿ
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯ ನಿಮಿತ್ತ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾತುರದಿಂದ ಕಾಯುತ್ತಿದ್ದರು.
ಇದನ್ನೂ ಓದಿ: ಇಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ; ಯಾವ ಯಾವ ಕ್ಷೇತ್ರದಲ್ಲಿ ಮತಬೇಟೆ?
ಇದೇ ವೇಳೆ ಸಮಾವೇಶ ವೇದಿಕೆ ಮೇಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಇದ್ದರು. ಇನ್ನೊಂದು ಕಡೆ ಮಂಡ್ಯ ಹಾಲಿ ಸಂಸದೆ ಸುಮಲತಾ ಅಂಬರೀಶ್, ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಕುಳಿತುಕೊಂಡಿದ್ದರು. ಈ ವೇಳೆ ವೇದಿಕೆ ಮೇಲೆ ಹೆಚ್.ಡಿ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಮಾತಾಡಿಸಲು ಬಂದಿದ್ದರು.
ಆ ನಂತರ ಎಲ್ಲರನ್ನೂ ಮಾತಾಡಿಸಿದ ಬಳಿಕ ಸುಮಲತಾ ಅಂಬರೀಶ್ ಹಾಗೂ ಪ್ರತಾಪ್ ಸಿಂಹರನ್ನು ಗಮನಿಸದೆ ಹಾಗೇ ಹೋಗಿದ್ದರು. ಇದನ್ನು ಗಮನಿಸಿದ ಸುಮಲತಾ ಅಂಬರೀಶ್ ಬೇಸರದಿಂದ ಎದ್ದು ಕುಳಿತುಕೊಂಡರು. ಬಳಿಕ ಮತ್ತೆ ಬಂದು ಸುಮಲತಾ ಅಂಬರೀಶ್ ಹಾಗೂ ಪ್ರತಾಪ್ ಸಿಂಹರನ್ನು ಮಾತಾಡಿಸಿದ್ದಾರೆ. ಈ ವೇಳೆ ಪ್ರತಾಪ್ ಸಿಂಹ ಹೆಚ್. ಡಿ. ಕುಮಾರಸ್ವಾಮಿ ಕಾಲಿಗೆ ಬಿದ್ದು ಆರ್ಶೀವಾದ ಪಡೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ