newsfirstkannada.com

‘ಮೈಸೂರು ಪೇಟ ತೊಡಿಸಿ, ಶಾಲು ಹಾಕಿ ಕರೆದೊಯ್ಯಲಿ’ ಆಪರೇಷನ್ ಹಸ್ತದ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

Share :

18-08-2023

    ನಮ್ಮವರು ಬರುವವರಿದ್ದರೇ ಕರೆದುಕೊಂಡು ಹೋಗಲಿ

    ನಾವು ಯಾರನ್ನು ಹಿಡ್ಕೊಂಡಿಲ್ಲ, ಕರೆದುಕೊಂಡು ಹೋಗ್ಲಿ

    ಬೆಂಗಳೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್

ರಾಜ್ಯ ರಾಜಕಾರಣದಲ್ಲಿ ಜೆಡಿಎಸ್​ ಮತ್ತು ಬಿಜೆಪಿಯಿಂದ ಹಲವು ಪ್ರಮುಖ ನಾಯಕರು ಕಾಂಗ್ರೆಸ್​ ಸೇರಲು ತಯಾರಿ ನಡೆಸುತ್ತಿದ್ದಾರೆ ಎಂಬ ಚರ್ಚೆ ಜೋರಾಗಿದೆ. ಮೈಸೂರು ಭಾಗದ ಜೆಡಿಎಸ್​​ ನಾಯಕರನ್ನು ಸೆಳೆಯಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿಯನ್ನು ಕಟ್ಟಿ ಹಾಕಲು ಡಿಕೆ ಶಿವಕುಮಾರ್ ಪ್ಲಾನ್ ಮಾಡಿದ್ದಾರೆ. ಜೆಡಿಎಸ್​ನ 10ಕ್ಕೂ ಹೆಚ್ಚು ಶಾಸಕರನ್ನು ಕಾಂಗ್ರೆಸ್​ಗೆ ಬರಮಾಡಿಕೊಂಡು ಕುಮಾರಸ್ವಾಮಿ ಶಕ್ತಿಯನ್ನು ಕುಂದಿಸಲು ತಂತ್ರ ರೂಪಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ದಳಕ್ಕೆ DK ಗಾಳ..!! ಕುಮಾರಸ್ವಾಮಿಗೆ ದೊಡ್ಡ ಮಟ್ಟದಲ್ಲಿ ಪೆಟ್ಟು ಕೊಡಲು ಡಿ.ಕೆ.ಶಿವಕುಮಾರ್ ಮಾಸ್ಟರ್ ಪ್ಲಾನ್..!

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿರುವ ಕುಮಾರಸ್ವಾಮಿ, ಮೈಸೂರು ಪೇಟ ತೊಡಿಸಿ, ಶಾಲು ಹಾಕಿ ಕರೆದೊಯ್ಯಲಿ. ನಮ್ಮವರು ಬರುವವರಿದ್ದರೇ ಕರೆದುಕೊಂಡು ಹೋಗಲಿ. ನಾವು ಯಾರನ್ನು ಹಿಡ್ಕೊಂಡಿಲ್ಲ, ಕರೆದುಕೊಂಡು ಹೋಗ್ಲಿ. ಮೈಸೂರು ಪೇಟ ತೊಡಿಸಿ, ಶಾಲು ಹಾಕಿ ಕರೆದೊಯ್ಯಲಿ ಎಂದು ವ್ಯಂಗ್ಯವಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಮೈಸೂರು ಪೇಟ ತೊಡಿಸಿ, ಶಾಲು ಹಾಕಿ ಕರೆದೊಯ್ಯಲಿ’ ಆಪರೇಷನ್ ಹಸ್ತದ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

https://newsfirstlive.com/wp-content/uploads/2023/08/HDK-1-1.jpg

    ನಮ್ಮವರು ಬರುವವರಿದ್ದರೇ ಕರೆದುಕೊಂಡು ಹೋಗಲಿ

    ನಾವು ಯಾರನ್ನು ಹಿಡ್ಕೊಂಡಿಲ್ಲ, ಕರೆದುಕೊಂಡು ಹೋಗ್ಲಿ

    ಬೆಂಗಳೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್

ರಾಜ್ಯ ರಾಜಕಾರಣದಲ್ಲಿ ಜೆಡಿಎಸ್​ ಮತ್ತು ಬಿಜೆಪಿಯಿಂದ ಹಲವು ಪ್ರಮುಖ ನಾಯಕರು ಕಾಂಗ್ರೆಸ್​ ಸೇರಲು ತಯಾರಿ ನಡೆಸುತ್ತಿದ್ದಾರೆ ಎಂಬ ಚರ್ಚೆ ಜೋರಾಗಿದೆ. ಮೈಸೂರು ಭಾಗದ ಜೆಡಿಎಸ್​​ ನಾಯಕರನ್ನು ಸೆಳೆಯಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿಯನ್ನು ಕಟ್ಟಿ ಹಾಕಲು ಡಿಕೆ ಶಿವಕುಮಾರ್ ಪ್ಲಾನ್ ಮಾಡಿದ್ದಾರೆ. ಜೆಡಿಎಸ್​ನ 10ಕ್ಕೂ ಹೆಚ್ಚು ಶಾಸಕರನ್ನು ಕಾಂಗ್ರೆಸ್​ಗೆ ಬರಮಾಡಿಕೊಂಡು ಕುಮಾರಸ್ವಾಮಿ ಶಕ್ತಿಯನ್ನು ಕುಂದಿಸಲು ತಂತ್ರ ರೂಪಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ದಳಕ್ಕೆ DK ಗಾಳ..!! ಕುಮಾರಸ್ವಾಮಿಗೆ ದೊಡ್ಡ ಮಟ್ಟದಲ್ಲಿ ಪೆಟ್ಟು ಕೊಡಲು ಡಿ.ಕೆ.ಶಿವಕುಮಾರ್ ಮಾಸ್ಟರ್ ಪ್ಲಾನ್..!

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿರುವ ಕುಮಾರಸ್ವಾಮಿ, ಮೈಸೂರು ಪೇಟ ತೊಡಿಸಿ, ಶಾಲು ಹಾಕಿ ಕರೆದೊಯ್ಯಲಿ. ನಮ್ಮವರು ಬರುವವರಿದ್ದರೇ ಕರೆದುಕೊಂಡು ಹೋಗಲಿ. ನಾವು ಯಾರನ್ನು ಹಿಡ್ಕೊಂಡಿಲ್ಲ, ಕರೆದುಕೊಂಡು ಹೋಗ್ಲಿ. ಮೈಸೂರು ಪೇಟ ತೊಡಿಸಿ, ಶಾಲು ಹಾಕಿ ಕರೆದೊಯ್ಯಲಿ ಎಂದು ವ್ಯಂಗ್ಯವಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More