newsfirstkannada.com

ಹೆಚ್​​​.ಡಿ ರೇವಣ್ಣ ಅರೆಸ್ಟ್​ ಬೆನ್ನಲ್ಲೇ ಆಪ್ತರ ಜೊತೆ ಕುಮಾರಸ್ವಾಮಿ ರಹಸ್ಯ ಮಾತುಕತೆ

Share :

Published May 4, 2024 at 9:19pm

Update May 4, 2024 at 9:20pm

    ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

    ಮಹಿಳೆ ಕಿಡ್ನ್ಯಾಪ್ ಕೇಸ್​ನಲ್ಲಿ ಹೆಚ್.ಡಿ ರೇವಣ್ಣರನ್ನು ವಶಕ್ಕೆ ಪಡೆದುಕೊಂಡ ಎಸ್​ಐಟಿ

    ನಿಖಿಲ್ ಕುಮಾರಸ್ವಾಮಿ, ಜಿಟಿಡಿ, ಪುಟ್ಟರಾಜ ಸೇರಿ ಹಲವರ ಜತೆ ರಹಸ್ಯ ಮಾತುಕತೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್​ನಲ್ಲಿ ಹೆಚ್.ಡಿ ರೇವಣ್ಣರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದಾದ ಬೆನ್ನಲ್ಲೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಖಾಸಗಿ ಹೋಟೆಲ್​ನಲ್ಲಿ ಬೀಡು ಬಿಟ್ಟಿದ್ದಾರೆ.

ಇದನ್ನೂ ಓದಿ: ದಯಮಾಡಿ ಕೈ ಜೋಡಿಸಿ ಮನವಿ ಮಾಡ್ತೀನಿ.. ದೇವೇಗೌಡರು, ಅಜ್ಜಿ ಬಹಳ ನೊಂದಿದ್ದಾರೆ; ನಿಖಿಲ್ ಕುಮಾರಸ್ವಾಮಿ

ಹೌದು, ಯಾವಾಗ ಮಾಜಿ ಸಚಿವ ಹೆಚ್​.ಡಿ ರೇವಣ್ಣರನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಏಕಾಏಕಿ ಹೆಚ್ ಡಿ ಕುಮಾರಸ್ವಾಮಿ ಅವರು ಆಪ್ತರ ಜೊತೆಗೆ ರಹಸ್ಯ ಮಾತುಕತೆಯಲ್ಲಿ ತೊಡಗಿಕೊಂಡಿದ್ದಾರೆ. ಮಧ್ಯಾಹ್ನ ಒಂದು ಗಂಟೆಯಿಂದ ಹೆಚ್​.ಡಿ ಕುಮಾರಸ್ವಾಮಿ ಅವರು ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ, ಜಿಟಿಡಿ, ಪುಟ್ಟರಾಜ ಸೇರಿದಂತೆ ಕೆಲ ಆಪ್ತರ ಜೊತೆ ಮುಂದಿನ ನಡೆಗಳ ಬಗ್ಗೆ ರಹಸ್ಯ ಮಾತುಕತೆಯಲ್ಲಿ ತೊಡಗಿಕೊಂಡಿದ್ದಾರೆ.

ಸದ್ಯ ಕೆ.ಆರ್. ನಗರದಿಂದ ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತೆ ಮಹಿಳೆಯನ್ನ ಬೆಂಗಳೂರಿನ ಬಸವನಗುಡಿಯ ಮಹಿಳಾ ಪೊಲೀಸ್ ಠಾಣೆಗೆ ‌ಕರೆದೊಯ್ಯಲಾಗಿದೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥೆ ಹೇಳಿಕೆಯನ್ನು ಎಸ್​ಐಟಿ ತನಿಖಾ ತಂಡ ದಾಖಲಿಸುತ್ತಿದ್ದಾರೆ. ಹೀಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅರೆಸ್ಟ್ ಆದ ಹಿನ್ನೆಲೆಯಲ್ಲಿ ಸಿಐಡಿ ಕಚೇರಿ ಮುಂಭಾಗದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೆಚ್​​​.ಡಿ ರೇವಣ್ಣ ಅರೆಸ್ಟ್​ ಬೆನ್ನಲ್ಲೇ ಆಪ್ತರ ಜೊತೆ ಕುಮಾರಸ್ವಾಮಿ ರಹಸ್ಯ ಮಾತುಕತೆ

https://newsfirstlive.com/wp-content/uploads/2024/05/revanna6.jpg

    ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

    ಮಹಿಳೆ ಕಿಡ್ನ್ಯಾಪ್ ಕೇಸ್​ನಲ್ಲಿ ಹೆಚ್.ಡಿ ರೇವಣ್ಣರನ್ನು ವಶಕ್ಕೆ ಪಡೆದುಕೊಂಡ ಎಸ್​ಐಟಿ

    ನಿಖಿಲ್ ಕುಮಾರಸ್ವಾಮಿ, ಜಿಟಿಡಿ, ಪುಟ್ಟರಾಜ ಸೇರಿ ಹಲವರ ಜತೆ ರಹಸ್ಯ ಮಾತುಕತೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್​ನಲ್ಲಿ ಹೆಚ್.ಡಿ ರೇವಣ್ಣರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದಾದ ಬೆನ್ನಲ್ಲೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಖಾಸಗಿ ಹೋಟೆಲ್​ನಲ್ಲಿ ಬೀಡು ಬಿಟ್ಟಿದ್ದಾರೆ.

ಇದನ್ನೂ ಓದಿ: ದಯಮಾಡಿ ಕೈ ಜೋಡಿಸಿ ಮನವಿ ಮಾಡ್ತೀನಿ.. ದೇವೇಗೌಡರು, ಅಜ್ಜಿ ಬಹಳ ನೊಂದಿದ್ದಾರೆ; ನಿಖಿಲ್ ಕುಮಾರಸ್ವಾಮಿ

ಹೌದು, ಯಾವಾಗ ಮಾಜಿ ಸಚಿವ ಹೆಚ್​.ಡಿ ರೇವಣ್ಣರನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಏಕಾಏಕಿ ಹೆಚ್ ಡಿ ಕುಮಾರಸ್ವಾಮಿ ಅವರು ಆಪ್ತರ ಜೊತೆಗೆ ರಹಸ್ಯ ಮಾತುಕತೆಯಲ್ಲಿ ತೊಡಗಿಕೊಂಡಿದ್ದಾರೆ. ಮಧ್ಯಾಹ್ನ ಒಂದು ಗಂಟೆಯಿಂದ ಹೆಚ್​.ಡಿ ಕುಮಾರಸ್ವಾಮಿ ಅವರು ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ, ಜಿಟಿಡಿ, ಪುಟ್ಟರಾಜ ಸೇರಿದಂತೆ ಕೆಲ ಆಪ್ತರ ಜೊತೆ ಮುಂದಿನ ನಡೆಗಳ ಬಗ್ಗೆ ರಹಸ್ಯ ಮಾತುಕತೆಯಲ್ಲಿ ತೊಡಗಿಕೊಂಡಿದ್ದಾರೆ.

ಸದ್ಯ ಕೆ.ಆರ್. ನಗರದಿಂದ ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತೆ ಮಹಿಳೆಯನ್ನ ಬೆಂಗಳೂರಿನ ಬಸವನಗುಡಿಯ ಮಹಿಳಾ ಪೊಲೀಸ್ ಠಾಣೆಗೆ ‌ಕರೆದೊಯ್ಯಲಾಗಿದೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥೆ ಹೇಳಿಕೆಯನ್ನು ಎಸ್​ಐಟಿ ತನಿಖಾ ತಂಡ ದಾಖಲಿಸುತ್ತಿದ್ದಾರೆ. ಹೀಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅರೆಸ್ಟ್ ಆದ ಹಿನ್ನೆಲೆಯಲ್ಲಿ ಸಿಐಡಿ ಕಚೇರಿ ಮುಂಭಾಗದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More