ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ
ಕರಾವಳಿ ಭಾಗದಲ್ಲಿ ನಿನ್ನೆಯಿಂದ ಮತ್ತೆ ಮಳೆ ಜೋರಾಗಿದೆ
ಮಲೆನಾಡಿನಲ್ಲೂ ಮುಂಗಾರು ಮಳೆ ಆರ್ಭಟ, ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಂದರೆ ಇಂದಿನಿಂದ ಜುಲೈ 17 ವರೆಗೆ ಮುಂಗಾರು ಮತ್ತಷ್ಟು ಚುರುಕು ಆಗಲಿದೆ.
ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ತಜ್ಞರು ಎಚ್ಚರಿಕೆಯನ್ನು ನೀಡಿದ್ದಾರೆ. ನಾಳೆಯಿಂದ ಮತ್ತೆ ಕರಾವಳಿ ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜುಲೈ 14 ರಿಂದ 15ರಂದು ಕರಾವಳಿಗೆ ರೆಡ್ ಅಲರ್ಟ್ ನೀಡಿದೆ. 16 ಮತ್ತು 18ರಂದು ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಿದೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ದಾರುಣ ಘಟನೆ.. ಜಮೀನಿಗೆ ಹೊರಟಿದ್ದ ದಂಪತಿ ರೈಲಿಗೆ ಸಿಲುಕಿ ಸಾವು
ಎಲ್ಲೆಲ್ಲಿ ಮಳೆ ಸಾಧ್ಯತೆ !?
ಉತ್ತರ ಒಳನಾಡು ಪ್ರದೇಶಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು, ಇಂದಿನಿಂದ ಜುಲೈ 17 ವರೆಗೆ ಉತ್ತರ ಭಾಗದ ಜಿಲ್ಲೆಗಳಿಗೂ ಮಳೆ ಎಚ್ಚರಿಕೆ ಕೊಟ್ಟಿದೆ. ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯಪುರ, ಗದಗ, ಧಾರವಾಡದಲ್ಲೂ ಮಳೆ ಬೀಳಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲೂ ಮಳೆ ಬೀಳಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನಿನ್ನೆ ಬೆಂಗಳೂರಲ್ಲಿ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಅಂತೆಯೇ ಜುಲೈ 17 ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಇಂದು ಮೊದಲ 6 ಓವರ್ಗಳೇ ನಿರ್ಣಾಯಕ.. ಡೇಂಜರಸ್ MMMಗಳೇ ಟೀಂ ಇಂಡಿಯಾಗೆ ಥ್ರೆಟ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ
ಕರಾವಳಿ ಭಾಗದಲ್ಲಿ ನಿನ್ನೆಯಿಂದ ಮತ್ತೆ ಮಳೆ ಜೋರಾಗಿದೆ
ಮಲೆನಾಡಿನಲ್ಲೂ ಮುಂಗಾರು ಮಳೆ ಆರ್ಭಟ, ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಂದರೆ ಇಂದಿನಿಂದ ಜುಲೈ 17 ವರೆಗೆ ಮುಂಗಾರು ಮತ್ತಷ್ಟು ಚುರುಕು ಆಗಲಿದೆ.
ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ತಜ್ಞರು ಎಚ್ಚರಿಕೆಯನ್ನು ನೀಡಿದ್ದಾರೆ. ನಾಳೆಯಿಂದ ಮತ್ತೆ ಕರಾವಳಿ ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜುಲೈ 14 ರಿಂದ 15ರಂದು ಕರಾವಳಿಗೆ ರೆಡ್ ಅಲರ್ಟ್ ನೀಡಿದೆ. 16 ಮತ್ತು 18ರಂದು ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಿದೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ದಾರುಣ ಘಟನೆ.. ಜಮೀನಿಗೆ ಹೊರಟಿದ್ದ ದಂಪತಿ ರೈಲಿಗೆ ಸಿಲುಕಿ ಸಾವು
ಎಲ್ಲೆಲ್ಲಿ ಮಳೆ ಸಾಧ್ಯತೆ !?
ಉತ್ತರ ಒಳನಾಡು ಪ್ರದೇಶಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು, ಇಂದಿನಿಂದ ಜುಲೈ 17 ವರೆಗೆ ಉತ್ತರ ಭಾಗದ ಜಿಲ್ಲೆಗಳಿಗೂ ಮಳೆ ಎಚ್ಚರಿಕೆ ಕೊಟ್ಟಿದೆ. ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯಪುರ, ಗದಗ, ಧಾರವಾಡದಲ್ಲೂ ಮಳೆ ಬೀಳಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲೂ ಮಳೆ ಬೀಳಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನಿನ್ನೆ ಬೆಂಗಳೂರಲ್ಲಿ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಅಂತೆಯೇ ಜುಲೈ 17 ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಇಂದು ಮೊದಲ 6 ಓವರ್ಗಳೇ ನಿರ್ಣಾಯಕ.. ಡೇಂಜರಸ್ MMMಗಳೇ ಟೀಂ ಇಂಡಿಯಾಗೆ ಥ್ರೆಟ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ