newsfirstkannada.com

ಬೆಂಗಳೂರಲ್ಲಿ ಧೋ ಎಂದು ಸುರಿಯುತ್ತಿರೋ ಮಳೆ.. ಈ ಏರಿಯಾಗಳಲ್ಲಿ ಭಾರೀ ಟ್ರಾಫಿಕ್​ ಜಾಮ್​​

Share :

Published May 2, 2024 at 7:35pm

    ನಗರದಲ್ಲಿ ಇಂದಿನಿಂದ ಎರಡ್ಮೂರು ದಿನಗಳ ಕಾಲ ಭಾರೀ ಮಳೆ

    ಬೆಂಗಳೂರಿನ ಈ ಪ್ರಮುಖ ರಸ್ತೆಗಳಲ್ಲಿ ಭಾರೀ ಟ್ರಾಫಿಕ್​​ ಜಾಮ್​!

    ವಾಹನ ಸವಾರರು ಈ ರಸ್ತೆಗಳಲ್ಲಿ ಓಡಾಡೋ ಮುನ್ನ ಎಚ್ಚರವಹಿಸಲೇಬೇಕು!

ಬೆಂಗಳೂರು: ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆಯಂತೆ ಇಂದು ರಾತ್ರಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ.

ಇನ್ನು, ಬೆಂಗಳೂರು ಮಳೆ ವಾಹನ ಸವಾರರ ಮೇಲೆ ನೇರ ಪರಿಣಾಮ ಬೀರಿದೆ. ಇದಕ್ಕೆ ಕಾರಣ ಮಳೆಯಿಂದ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿರುವುದು. ಇದರಿಂದ ವಾಹನ ಸವಾರರು ಪರದಾಡುತ್ತಿರುವುದು.

ಹೊಸೂರು, ಮೈಸೂರು ರೋಡ್​​, ಎಲೆಕ್ಟ್ರಾನಿಕ್ ಸಿಟಿ, ಮೆಜೆಸ್ಟಿಕ್​, ಕೆ.ಆರ್​ ಮಾರ್ಕೆಟ್, ರಾಜಾಜಿನಗರ, ಮಲ್ಲೇಶ್ವರಂ, ಕೆ.ಆರ್​ ಪುರಂ, ಹೊಸಕೋಟೆ, ಆರ್​.ಆರ್​ ನಗರ, ಕೆಂಗೇರಿ, ನಾಗರಬಾವಿ, ವಿಜಯನಗರ, ಕುರುಬರಹಳ್ಳಿ, ಯಶವಂತಪುರ ಸೇರಿದಂತೆ ಹಲವು ಭಾಗಗಳಲ್ಲಿ ಭಾರೀ ಟ್ರಾಫಿಕ್​ ಜಾಮ್​ ಆಗಿದೆ. ಹಾಗಾಗಿ ಈ ಏರಿಯಾಗಳಿಗೆ ಹೋಗೋ ಪ್ರಮುಖ ರಸ್ತೆಗಳಲ್ಲಿ ಓಡಾಡೋ ಜನ ಎಚ್ಚರಿಕೆ ವಹಿಸಬೇಕಿದೆ.

ನಗರದಲ್ಲಿ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜತೆಗೆ ಇಡೀ ರಾಜ್ಯದ ಹಲವು ಕಡೆ ಮಳೆ ಸುರಿಯಲಿದೆ.

ಇದನ್ನೂ ಓದಿ: ಫಲಿಸಿತು ಪ್ರಾರ್ಥನೆ.. ಬೆಂಗಳೂರಿಗೆ ತಂಪೆರದ ಮಳೆರಾಯ; ಬಿಸಿಲಿಗೆ ಬೆಂದು ಹೋದ ಸಿಟಿ ಕೂಲ್, ಕೂಲ್‌!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ಧೋ ಎಂದು ಸುರಿಯುತ್ತಿರೋ ಮಳೆ.. ಈ ಏರಿಯಾಗಳಲ್ಲಿ ಭಾರೀ ಟ್ರಾಫಿಕ್​ ಜಾಮ್​​

https://newsfirstlive.com/wp-content/uploads/2024/05/Heavy-Rains.jpg

    ನಗರದಲ್ಲಿ ಇಂದಿನಿಂದ ಎರಡ್ಮೂರು ದಿನಗಳ ಕಾಲ ಭಾರೀ ಮಳೆ

    ಬೆಂಗಳೂರಿನ ಈ ಪ್ರಮುಖ ರಸ್ತೆಗಳಲ್ಲಿ ಭಾರೀ ಟ್ರಾಫಿಕ್​​ ಜಾಮ್​!

    ವಾಹನ ಸವಾರರು ಈ ರಸ್ತೆಗಳಲ್ಲಿ ಓಡಾಡೋ ಮುನ್ನ ಎಚ್ಚರವಹಿಸಲೇಬೇಕು!

ಬೆಂಗಳೂರು: ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆಯಂತೆ ಇಂದು ರಾತ್ರಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ.

ಇನ್ನು, ಬೆಂಗಳೂರು ಮಳೆ ವಾಹನ ಸವಾರರ ಮೇಲೆ ನೇರ ಪರಿಣಾಮ ಬೀರಿದೆ. ಇದಕ್ಕೆ ಕಾರಣ ಮಳೆಯಿಂದ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿರುವುದು. ಇದರಿಂದ ವಾಹನ ಸವಾರರು ಪರದಾಡುತ್ತಿರುವುದು.

ಹೊಸೂರು, ಮೈಸೂರು ರೋಡ್​​, ಎಲೆಕ್ಟ್ರಾನಿಕ್ ಸಿಟಿ, ಮೆಜೆಸ್ಟಿಕ್​, ಕೆ.ಆರ್​ ಮಾರ್ಕೆಟ್, ರಾಜಾಜಿನಗರ, ಮಲ್ಲೇಶ್ವರಂ, ಕೆ.ಆರ್​ ಪುರಂ, ಹೊಸಕೋಟೆ, ಆರ್​.ಆರ್​ ನಗರ, ಕೆಂಗೇರಿ, ನಾಗರಬಾವಿ, ವಿಜಯನಗರ, ಕುರುಬರಹಳ್ಳಿ, ಯಶವಂತಪುರ ಸೇರಿದಂತೆ ಹಲವು ಭಾಗಗಳಲ್ಲಿ ಭಾರೀ ಟ್ರಾಫಿಕ್​ ಜಾಮ್​ ಆಗಿದೆ. ಹಾಗಾಗಿ ಈ ಏರಿಯಾಗಳಿಗೆ ಹೋಗೋ ಪ್ರಮುಖ ರಸ್ತೆಗಳಲ್ಲಿ ಓಡಾಡೋ ಜನ ಎಚ್ಚರಿಕೆ ವಹಿಸಬೇಕಿದೆ.

ನಗರದಲ್ಲಿ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜತೆಗೆ ಇಡೀ ರಾಜ್ಯದ ಹಲವು ಕಡೆ ಮಳೆ ಸುರಿಯಲಿದೆ.

ಇದನ್ನೂ ಓದಿ: ಫಲಿಸಿತು ಪ್ರಾರ್ಥನೆ.. ಬೆಂಗಳೂರಿಗೆ ತಂಪೆರದ ಮಳೆರಾಯ; ಬಿಸಿಲಿಗೆ ಬೆಂದು ಹೋದ ಸಿಟಿ ಕೂಲ್, ಕೂಲ್‌!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More