newsfirstkannada.com

ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಮಳೆಯ ಅಬ್ಬರ.. ಬಿರುಗಾಳಿ ಸಹಿತ ಭಾರೀ ವರ್ಷಧಾರೆ; ಎಲ್ಲೆಲ್ಲಿ ಟ್ರಾಫಿಕ್ ಜಾಮ್‌?

Share :

Published May 8, 2024 at 5:42pm

Update May 8, 2024 at 6:19pm

    ಇಷ್ಟು ದಿನ ಬಿರು ಬಿಸಿಲಿನ ಬೇಗೆಗೆ ಕಂಗಾಲಾಗಿದ್ದ ಜನರಿಗೆ ತಂಪೆರೆದ ಮಳೆರಾಯ

    ಕೆ.ಆರ್ ಸರ್ಕಲ್, ಜೆ.ಸಿ ರಸ್ತೆ, .ಆರ್​. ಮಾರ್ಕೆಟ್ ಸೇರಿದಂತೆ ಹಲವೆಡೆ ಭಾರೀ ಮಳೆ

    ಸಂಜೆಯಾಗುತ್ತಲೇ ಸಿಲಿಕಾನ್​ ಸಿಟಿ ಮಂದಿಗೆ ಕೂಲ್​ ಕೂಲ್​ ಮಾಡಿದ ವರುಣ

ಬೆಂಗಳೂರು: ಬಿರು ಬಿಸಿಲಿನಿಂದ ಕಂಗಾಲಾಗಿದ್ದ ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ಸಂಜೆಯಾಗುತ್ತಲೇ ಮಳೆರಾಯನ ಎಂಟ್ರಿಯಿಂದ ಬೆಂಗಳೂರು ಫುಲ್​ ಕುಲ್​ ಕುಲ್​​ ಆಗಿದೆ. ಕೆ.ಆರ್ ಸರ್ಕಲ್, ಜೆಸಿ ರಸ್ತೆ, ಮೈಸೂರ್ ಬ್ಯಾಂಕ್ ಸರ್ಕಲ್, ಕೆ.ಆರ್​.ಮಾರ್ಕೆಟ್, ಯಲಹಂಕ, ನೆಲಮಂಗಲ ಸೇರಿದಂತೆ ಹಲವೆಡೆ ಬಿರು ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಭರ್ಜರಿ ಮಳೆಯಿಂದ ಕೆ.ಆರ್ ಸರ್ಕಲ್, ಜೆಸಿ ರಸ್ತೆ, ಮೈಸೂರ್ ಬ್ಯಾಂಕ್ ಸರ್ಕಲ್, ಕೆ.ಆರ್​.ಮಾರ್ಕೆಟ್ ಸುತ್ತಾಮುತ್ತ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

 

ಇದನ್ನೂ ಓದಿ: ವಾರ್ಡ್..​ ವಾರ್ಡ್​ಗೆ ಸ್ಕೂಟಿಯಲ್ಲಿ ಹೋಗಿ ಚಿಕಿತ್ಸೆ ಕೊಡ್ತಾರೆ ಈ ನರ್ಸ್​; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!!

ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದ್ದು, ಸತತ ಏಳು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇನ್ನು, ಮೇ 13 ಹಾಗೂ 14ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಬುಧವಾರದಿಂದಲೇ ಮಳೆ ಆರಂಭಗೊಳ್ಳಲಿದ್ದು, ನಂತರದ ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಮಳೆಯ ಅಬ್ಬರ.. ಬಿರುಗಾಳಿ ಸಹಿತ ಭಾರೀ ವರ್ಷಧಾರೆ; ಎಲ್ಲೆಲ್ಲಿ ಟ್ರಾಫಿಕ್ ಜಾಮ್‌?

https://newsfirstlive.com/wp-content/uploads/2024/05/Rain.jpg

    ಇಷ್ಟು ದಿನ ಬಿರು ಬಿಸಿಲಿನ ಬೇಗೆಗೆ ಕಂಗಾಲಾಗಿದ್ದ ಜನರಿಗೆ ತಂಪೆರೆದ ಮಳೆರಾಯ

    ಕೆ.ಆರ್ ಸರ್ಕಲ್, ಜೆ.ಸಿ ರಸ್ತೆ, .ಆರ್​. ಮಾರ್ಕೆಟ್ ಸೇರಿದಂತೆ ಹಲವೆಡೆ ಭಾರೀ ಮಳೆ

    ಸಂಜೆಯಾಗುತ್ತಲೇ ಸಿಲಿಕಾನ್​ ಸಿಟಿ ಮಂದಿಗೆ ಕೂಲ್​ ಕೂಲ್​ ಮಾಡಿದ ವರುಣ

ಬೆಂಗಳೂರು: ಬಿರು ಬಿಸಿಲಿನಿಂದ ಕಂಗಾಲಾಗಿದ್ದ ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ಸಂಜೆಯಾಗುತ್ತಲೇ ಮಳೆರಾಯನ ಎಂಟ್ರಿಯಿಂದ ಬೆಂಗಳೂರು ಫುಲ್​ ಕುಲ್​ ಕುಲ್​​ ಆಗಿದೆ. ಕೆ.ಆರ್ ಸರ್ಕಲ್, ಜೆಸಿ ರಸ್ತೆ, ಮೈಸೂರ್ ಬ್ಯಾಂಕ್ ಸರ್ಕಲ್, ಕೆ.ಆರ್​.ಮಾರ್ಕೆಟ್, ಯಲಹಂಕ, ನೆಲಮಂಗಲ ಸೇರಿದಂತೆ ಹಲವೆಡೆ ಬಿರು ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಭರ್ಜರಿ ಮಳೆಯಿಂದ ಕೆ.ಆರ್ ಸರ್ಕಲ್, ಜೆಸಿ ರಸ್ತೆ, ಮೈಸೂರ್ ಬ್ಯಾಂಕ್ ಸರ್ಕಲ್, ಕೆ.ಆರ್​.ಮಾರ್ಕೆಟ್ ಸುತ್ತಾಮುತ್ತ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

 

ಇದನ್ನೂ ಓದಿ: ವಾರ್ಡ್..​ ವಾರ್ಡ್​ಗೆ ಸ್ಕೂಟಿಯಲ್ಲಿ ಹೋಗಿ ಚಿಕಿತ್ಸೆ ಕೊಡ್ತಾರೆ ಈ ನರ್ಸ್​; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!!

ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದ್ದು, ಸತತ ಏಳು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇನ್ನು, ಮೇ 13 ಹಾಗೂ 14ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಬುಧವಾರದಿಂದಲೇ ಮಳೆ ಆರಂಭಗೊಳ್ಳಲಿದ್ದು, ನಂತರದ ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More