ಹವಾಮಾನ ಇಲಾಖೆ ಮುನ್ಸೂಚನೆ ಬಳಿಕ ಬೆಂಗಳೂರಿನಲ್ಲಿ ಭಾರೀ ಮಳೆ
ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಜಾಸ್ತಿ ಆಗುತ್ತಿತ್ತು ಬಿಸಿಲಿನ ಉಷ್ಣಾಂಶ
ಮೆಜೆಸ್ಟಿಕ್, ರಾಜಾಜಿನಗರ, ವಿಜಯನಗರ ಸೇರಿದಂತೆ ಹಲವೆಡೆ ಭಾರೀ ಮಳೆ
ಬೆಂಗಳೂರು: ಇಷ್ಟು ದಿನ ಬಿರು ಬಿಸಿಲಿನಿಂದ ಹೈರಾಣಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಬಿಸಿಲಿನ ದಗೆಯಿಂದ ಬೇಸರಗೊಂಡಿದ್ದ ಜನರು ಸದ್ಯ ಮಳೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಗುಡುಗು ಸಿಡಿಲು ಸಹಿತ ರಾಜಧಾನಿಯಲ್ಲಿ ಮಳೆಯಾಗುತ್ತಿದೆ.
ಇದನ್ನೂ ಓದಿ: ಫಲಿಸಿತು ಪ್ರಾರ್ಥನೆ.. ಬೆಂಗಳೂರಿಗೆ ತಂಪೆರದ ಮಳೆರಾಯ; ಬಿಸಿಲಿಗೆ ಬೆಂದು ಹೋದ ಸಿಟಿ ಕೂಲ್, ಕೂಲ್!
ಮೆಜೆಸ್ಟಿಕ್, ರಾಜಾಜಿನಗರ, ವಿಜಯನಗರ, ರೇಸ್ ಕೋರ್ಸ್, ಟೌನ್ ಹಾಲ್, ಬಸವನಗುಡಿ, ಜಯನಗರ, ರಾಜಾಜಿನಗರ ಸೇರಿದಂತೆ ಸುತ್ತಮುತ್ತ ಭಾರೀ ತುಂತುರು ಮಳೆಯಾಗುತ್ತಿದೆ. ಇಂದು ಸಂಜೆ ಬೆಂಗಳೂರಿನ ಹಲವೆಡೆ ಮೋಡ ಕವಿದ ವಾತಾವರಣ ಇತ್ತು. ಹೀಗಾಗಿ ಸಿಲಿಕಾನ್ ಸಿಟಿ ಜನ ಮಳೆ ಬರುತ್ತದೆ ಎಂದು ನಿರೀಕ್ಷಿಸುತ್ತಿದ್ದರು.
ಇದೀಗ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟ ಬಳಿಕ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಇದಲ್ಲದೇ ರಾತ್ರಿ ವೇಳೆಗೆ ಜೋರು ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಇಷ್ಟು ದಿನ ಬಿಸಿಲಿನ ತಾಪದಿಂದ ಬಸವಳಿದ ಬೆಂಗಳೂರಿನ ಜನ ವರುಣನ ಆಗಮನದಿಂದ ಫುಲ್ ಖುಷ್ ಆಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹವಾಮಾನ ಇಲಾಖೆ ಮುನ್ಸೂಚನೆ ಬಳಿಕ ಬೆಂಗಳೂರಿನಲ್ಲಿ ಭಾರೀ ಮಳೆ
ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಜಾಸ್ತಿ ಆಗುತ್ತಿತ್ತು ಬಿಸಿಲಿನ ಉಷ್ಣಾಂಶ
ಮೆಜೆಸ್ಟಿಕ್, ರಾಜಾಜಿನಗರ, ವಿಜಯನಗರ ಸೇರಿದಂತೆ ಹಲವೆಡೆ ಭಾರೀ ಮಳೆ
ಬೆಂಗಳೂರು: ಇಷ್ಟು ದಿನ ಬಿರು ಬಿಸಿಲಿನಿಂದ ಹೈರಾಣಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಬಿಸಿಲಿನ ದಗೆಯಿಂದ ಬೇಸರಗೊಂಡಿದ್ದ ಜನರು ಸದ್ಯ ಮಳೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಗುಡುಗು ಸಿಡಿಲು ಸಹಿತ ರಾಜಧಾನಿಯಲ್ಲಿ ಮಳೆಯಾಗುತ್ತಿದೆ.
ಇದನ್ನೂ ಓದಿ: ಫಲಿಸಿತು ಪ್ರಾರ್ಥನೆ.. ಬೆಂಗಳೂರಿಗೆ ತಂಪೆರದ ಮಳೆರಾಯ; ಬಿಸಿಲಿಗೆ ಬೆಂದು ಹೋದ ಸಿಟಿ ಕೂಲ್, ಕೂಲ್!
ಮೆಜೆಸ್ಟಿಕ್, ರಾಜಾಜಿನಗರ, ವಿಜಯನಗರ, ರೇಸ್ ಕೋರ್ಸ್, ಟೌನ್ ಹಾಲ್, ಬಸವನಗುಡಿ, ಜಯನಗರ, ರಾಜಾಜಿನಗರ ಸೇರಿದಂತೆ ಸುತ್ತಮುತ್ತ ಭಾರೀ ತುಂತುರು ಮಳೆಯಾಗುತ್ತಿದೆ. ಇಂದು ಸಂಜೆ ಬೆಂಗಳೂರಿನ ಹಲವೆಡೆ ಮೋಡ ಕವಿದ ವಾತಾವರಣ ಇತ್ತು. ಹೀಗಾಗಿ ಸಿಲಿಕಾನ್ ಸಿಟಿ ಜನ ಮಳೆ ಬರುತ್ತದೆ ಎಂದು ನಿರೀಕ್ಷಿಸುತ್ತಿದ್ದರು.
ಇದೀಗ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟ ಬಳಿಕ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಇದಲ್ಲದೇ ರಾತ್ರಿ ವೇಳೆಗೆ ಜೋರು ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಇಷ್ಟು ದಿನ ಬಿಸಿಲಿನ ತಾಪದಿಂದ ಬಸವಳಿದ ಬೆಂಗಳೂರಿನ ಜನ ವರುಣನ ಆಗಮನದಿಂದ ಫುಲ್ ಖುಷ್ ಆಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ