ಬಿಸಿಲಿನಿಂದ ಧಗಧಗ ಅಂತಿದ್ದ ಬೆಂಗಳೂರು ಈಗ ಕೂಲ್ ಕೂಲ್.. ಕೊನೆಗೂ ತಂಪೆರೆದ ಮಳೆರಾಯ

author-image
Veena Gangani
Updated On
ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ.. ಎಲ್ಲೆಲ್ಲಿ, ಎಷ್ಟು ದಿನ ಭರ್ಜರಿ ಮಳೆ..?
Advertisment
  • ಬಿರುಗಾಳಿ ಸಹಿತ ಬೆಂಗಳೂರಿನಲ್ಲಿ ಭಾರೀ ಮಳೆ
  • ಬೇಸಿಗೆಯಲ್ಲಿ ಮಳೆಗಾಲದಂತೆ ಸುರಿದ ವರುಣ
  • ಬಿಸಿಲಿನ ತಾಪಕ್ಕೆ ಬೇಸತ್ತ ಜನರ ಮುಖದಲ್ಲಿ ನಗು

ಬಿಸಿ ಬಿಸಿ ಗಾಳಿ, ಶಕೆಯಿಂದ ಕಂಗೆಟ್ಟಿದ್ದ ಸಿಲಿಕಾನ್​ ಸಿಲಿ ಮಂದಿಗೆ ಮಳೆರಾಯ ತಂಪೆರದಿದ್ದಾನೆ. ಈ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಇದನ್ನೂ ಓದಿ:ಕೋಲ್ಕತ್ತ ಹೋಟೆಲ್​​ನಲ್ಲಿ ಭೀಕರ ಬೆಂಕಿ ಅವಘಡ.. 14 ಮಂದಿ ಸಜೀವ ದಹನ

ಹೀಗಾಗಿ ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಸಹ ಘೋಷಿಸಿತ್ತು. ಇದೀಗ ಸಿಲಿಕಾನ್​ ಸಿಟಿಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ವಸಂತನಗರ, ವಿಜಯನಗರ, ರಾಜಭವನ, ವಿಧಾನಸೌಧ ಸೇರಿದಂತೆ ಹಲವಾರು ಕಡೆಗಳಲ್ಲಿ ಮಳೆಯಾಗಿದೆ.

ಇನ್ನೂ, ದಿಢೀರ್ ಮಳೆಯಿಂದ ರಸ್ತೆಯಲ್ಲಿ ವಾಹನ ಸವಾರರ ಪರದಾಟವಂತ ಸ್ಥಿತಿ ನಿರ್ಮಾಣಗೊಂಡಿತ್ತು. ಅಲ್ಲದೇ ಮಳೆ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್​ ಕೂಡ ಉಂಟಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment