ಮೊನ್ನೆ ಸುರಿದ ಭಾರೀ ಮಳೆಗೆ ಹೈರಾಣಾದ ಸಿಲಿಕಾನ್ ಸಿಟಿ ಜನರು
ಈಗಾಗಲೇ ಕೆಲವು ಕಡೆ ಮಳೆಯಿಂದ ತೊಂದರೆ ಅನುಭವಿಸಿರುವ ಜನ
ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟ ಮಾಡಲಿದ್ದಾನೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಈ ಬೆನ್ನಲ್ಲೇ ಸಂಜೆಯಾಗುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ಜೋರಾಗಿದೆ.
ಇದನ್ನೂ ಓದಿ: ಇಂದಿನಿಂದ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ
ಸದ್ಯ ಮಾಗಡಿ ರಸ್ತೆ, ಹೇರೋಹಳ್ಳಿ, ಮೆಜೆಸ್ಟಿಕ್, ಟೌನ್ ಹಾಲ್, ಕೆ.ಆರ್ ಮಾರ್ಕೆಟ್, ಲಾಲ್ ಬಾಗ್, ವಿಜಯನಗರ, ರಾಜಾಜಿನಗರ, ಜಯನಗರ, ಕಾರ್ಪೋರೇಷನ್, ಎಲಚೇನಹಳ್ಳಿ, ಕೋನನಕುಂಟೆ, ಬನಶಂಕರಿ, ಕುಮಾರಸ್ವಾಮಿ ಲೇಔಟ್ ಸೇರಿ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಮಳೆ ಇನ್ನೆರಡು ಗಂಟೆಗಳ ಕಾಲ ಮುಂದುವರಿಯಲಿದೆ ಎಂದು ತಿಳಿದು ಬಂದಿದೆ.
ಇನ್ನು, ದಿಢೀರ್ ಮಳೆಯಿಂದ ನಗರದ ಬೀದಿ ಬದಿ ವ್ಯಾಪಾರಸ್ಥರು ಹಾಗೂ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಏಕಾಏಕಿಯಾಗಿ ಧಾರಾಕಾರ ಮಳೆಯಾಗಿದ್ದರಿಂದ ಬೈಕ್ ಸವಾರರು ಮಳೆಯಿಂದ ತಪ್ಪಿಸಿಕೊಳ್ಳಲು ಫ್ಲೈಓವರ್ ಕೆಳಗೆ ನಿಂತುಕೊಂಡು ಹರಸಾಹಸ ಪಡುವಂತಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೊನ್ನೆ ಸುರಿದ ಭಾರೀ ಮಳೆಗೆ ಹೈರಾಣಾದ ಸಿಲಿಕಾನ್ ಸಿಟಿ ಜನರು
ಈಗಾಗಲೇ ಕೆಲವು ಕಡೆ ಮಳೆಯಿಂದ ತೊಂದರೆ ಅನುಭವಿಸಿರುವ ಜನ
ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟ ಮಾಡಲಿದ್ದಾನೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಈ ಬೆನ್ನಲ್ಲೇ ಸಂಜೆಯಾಗುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ಜೋರಾಗಿದೆ.
ಇದನ್ನೂ ಓದಿ: ಇಂದಿನಿಂದ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ
ಸದ್ಯ ಮಾಗಡಿ ರಸ್ತೆ, ಹೇರೋಹಳ್ಳಿ, ಮೆಜೆಸ್ಟಿಕ್, ಟೌನ್ ಹಾಲ್, ಕೆ.ಆರ್ ಮಾರ್ಕೆಟ್, ಲಾಲ್ ಬಾಗ್, ವಿಜಯನಗರ, ರಾಜಾಜಿನಗರ, ಜಯನಗರ, ಕಾರ್ಪೋರೇಷನ್, ಎಲಚೇನಹಳ್ಳಿ, ಕೋನನಕುಂಟೆ, ಬನಶಂಕರಿ, ಕುಮಾರಸ್ವಾಮಿ ಲೇಔಟ್ ಸೇರಿ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಮಳೆ ಇನ್ನೆರಡು ಗಂಟೆಗಳ ಕಾಲ ಮುಂದುವರಿಯಲಿದೆ ಎಂದು ತಿಳಿದು ಬಂದಿದೆ.
ಇನ್ನು, ದಿಢೀರ್ ಮಳೆಯಿಂದ ನಗರದ ಬೀದಿ ಬದಿ ವ್ಯಾಪಾರಸ್ಥರು ಹಾಗೂ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಏಕಾಏಕಿಯಾಗಿ ಧಾರಾಕಾರ ಮಳೆಯಾಗಿದ್ದರಿಂದ ಬೈಕ್ ಸವಾರರು ಮಳೆಯಿಂದ ತಪ್ಪಿಸಿಕೊಳ್ಳಲು ಫ್ಲೈಓವರ್ ಕೆಳಗೆ ನಿಂತುಕೊಂಡು ಹರಸಾಹಸ ಪಡುವಂತಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ