ಮಳೆಯಿಂದ ಭಾರೀ ಅವಾಂತರ; ಕಾರಿನ ಮೇಲೆ ತೆಂಗಿನ ಮರ, ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಸಾವು

author-image
Veena Gangani
Updated On
ಮಳೆಯಿಂದ ಭಾರೀ ಅವಾಂತರ; ಕಾರಿನ ಮೇಲೆ ತೆಂಗಿನ ಮರ, ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಸಾವು
Advertisment
  • ಭಾರೀ ಮಳೆ ಪರಿಣಾಮ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಕಂಬ
  • ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದ ಮಳೆರಾಯ
  • ಕಾರಿನಲ್ಲಿದ್ದ 5 ಮಂದಿಯನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಆದರೆ ಭಾರೀ ಮಳೆ ಪರಿಣಾಮ ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ತೆಂಗಿನ ಮರ ಹಾಗೂ ವಿದ್ಯುತ್ ಕಂಬ ಬಿದ್ದಿದೆ. ಇದರಿಂದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದೇವರಾಜು (35) ಮೃತ ದುರ್ದೈವಿ.

publive-image

ಇದನ್ನೂ ಓದಿ:ಮಾಯವಾದ ಮಳೆರಾಯ.. ಬೆಂಗಳೂರಿಗರಿಗೆ ಮತ್ತೆ ಶಾಕಿಂಗ್ ನ್ಯೂಸ್‌; ಹವಮಾನ ಇಲಾಖೆ ಎಚ್ಚರಿಕೆ!

ಈ ಘಟನೆ ಲಿಂದದಹಳ್ಳಿ ಭಾಗದಲ್ಲಿ ನಡೆದಿದೆ. ಕಾರೊಂದು ಲಿಂಗದಹಳ್ಳಿ ಸಮೀಪದ ಕಲ್ಲತ್ತಗಿರಿಗೆ ಪೂಜೆಗೆಂದು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇನ್ನು, ಕಾರಿನಲ್ಲಿದ್ದ ಐವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಲಿಂಗದಳ್ಳಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment