/newsfirstlive-kannada/media/post_attachments/wp-content/uploads/2024/07/rain-1.jpg)
ಕರಾವಳಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ವರುಣ ಕಾಡುತ್ತಿದ್ದಾನೆ. ಹೀಗಿರುವಾಗ ಇಂದಿನಿಂದ ಮತ್ತೆ ಮಳೆ ಆರ್ಭಟ ಮುಂದುವರಿಕೆ ಸಾಧ್ಯತೆಯಿದೆ.
ಮುಂದಿನ ನಾಲ್ಕೈದು ದಿನ ಕರಾವಳಿಗೆ ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದೆ. ಈಗಾಗಲೇ ಕಳೆದೊಂದು ವಾರದಿಂದ ಕರಾವಳಿಯಲ್ಲಿ ಮಳೆ ಸುರಿಯುತ್ತಿದೆ. ಅನೇಕ ಕಡೆ ಪ್ರವಾಹ ಅವಾಂತರ ಕೂಡ ಸೃಷ್ಟಿಯಾಗಿದೆ.ಈ ಮಧ್ಯ ಮತ್ತೆ ನಾಲ್ಕೈದು ದಿನ ಭಾರೀ ಮಳೆಯ ಅಲರ್ಟ್ ಹೊರಡಿಸಲಾಗಿದೆ.
/newsfirstlive-kannada/media/post_attachments/wp-content/uploads/2024/07/1.jpg)
ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಬಹುತೇಕ ಕಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಅಲರ್ಟ್ ಘೋಷಿಸಲಾಗಿದೆ. ಇಂದು ಆರೆಂಜ್, ನಾಳೆ ಯೆಲ್ಲೋ ಅಲರ್ಟ್, ಬಳಿಕ ಮತ್ತೆರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಒಳನಾಡು, ದಕ್ಷಿಣ ಒಳನಾಡಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣ ಮುಂದುವರಿದಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us