ಬಾಂಗ್ಲಾ ವಿರುದ್ಧ ಟಿ20 ಪಂದ್ಯ; ಟೀಮ್​ ಇಂಡಿಯಾದಿಂದ ಸ್ಟಾರ್​ ಆಟಗಾರರಿಗೆ ಕೊಕ್​​; ಯಾರಿಗೆ ಚಾನ್ಸ್?

author-image
Ganesh Nachikethu
Updated On
ಬಾಂಗ್ಲಾ ವಿರುದ್ಧ ಟಿ20 ಸರಣಿ; ಟೀಮ್​ ಇಂಡಿಯಾದಿಂದ ಧೋನಿ ಶಿಷ್ಯನಿಗೆ ಕೊಕ್​!
Advertisment
  • ಟೀಮ್​ ಇಂಡಿಯಾ, ಬಾಂಗ್ಲಾದೇಶದ ನಡುವಿನ ಟೆಸ್ಟ್​ ಸರಣಿ ಮುಕ್ತಾಯ
  • ಅಕ್ಟೋಬರ್​​ 6ನೇ ತಾರೀಕಿನಿಂದ ಬಾಂಗ್ಲಾ, ಭಾರತ ಮಧ್ಯೆ ಟಿ20 ಸರಣಿ!
  • ಮೊದಲ ಪಂದ್ಯಕ್ಕೆ ಟೀಮ್​ ಇಂಡಿಯಾ ಟಿ20 ತಂಡದಲ್ಲಿ ಯಾರಿಗೆ ಮಣೆ?

ಟೀಮ್​ ಇಂಡಿಯಾ, ಬಾಂಗ್ಲಾದೇಶದ ನಡುವಿನ 2 ಪಂದ್ಯಗಳ ಟೆಸ್ಟ್​ ಸರಣಿ ಮುಗಿದಿದೆ. ಬಾಂಗ್ಲಾ ವಿರುದ್ಧ ಟೀಮ್​ ಇಂಡಿಯಾ 2-0 ಅಂತರದಿಂದ ಟೆಸ್ಟ್​ ಸರಣಿಯನ್ನು ಕ್ಲೀನ್​ ಸ್ವೀಪ್​ ಮಾಡಿದೆ. ಈಗ ಎಲ್ಲರ ಕಣ್ಣು ಮುಂದೆ ನಡೆಯಲಿರೋ ಟಿ20 ಸರಣಿ ಮೇಲೆ ನೆಟ್ಟಿದೆ.

ಇದೇ ಭಾನುವಾರ ಅಕ್ಟೋಬರ್​​ 6ನೇ ತಾರೀಕು ಗ್ವಾಲಿಯರ್‌ ಇಂಟರ್​ ನ್ಯಾಷನಲ್​​ ಕ್ರಿಕೆಟ್​ ಸ್ಟೇಡಿಯಮ್​​ನಲ್ಲಿ ನಡೆಯಲಿರೋ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ಎದುರಿಸಲಿದೆ. ಈ ಪಂದ್ಯಕ್ಕೆ ಟೀಮ್​ ಇಂಡಿಯಾ ಪ್ಲೇಯಿಂಗ್​ ಎಲೆವೆನ್​ ಹೇಗಿರಲಿದೆ? ಅನ್ನೋ ಬಗ್ಗೆ ಜೋರು ಚರ್ಚೆ ನಡೆಯುತ್ತಿದೆ.

ಗಿಲ್​​, ಜೈಸ್ವಾಲ್​ ಬದಲಿಗೆ ಯಾರಿಗೆ ಚಾನ್ಸ್​​?

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಬಿಸಿಸಿಐ ಸೆಲೆಕ್ಷನ್​ ಕಮಿಟಿ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟಿಸಿದೆ. ಗಿಲ್​​, ಜೈಸ್ವಾಲ್​ಗೆ ರೆಸ್ಟ್​ ನೀಡಿದ್ದು, ಹೊಸಬರಿಗೆ ಅವಕಾಶ ನೀಡಲಾಗಿದೆ. ಇಂತಹ ಪರಿಸ್ಥಿತಿ ನಾಯಕ ಸೂರ್ಯಕುಮಾರ್ ಯಾದವ್​​ಗೆ ಪ್ಲೇಯಿಂಗ್​ ಎಲೆವೆನ್​​ ಆಯ್ಕೆಯದ್ದೇ ಯೋಚನೆ ಆಗಿದೆ. ಗಿಲ್​​, ಜೈಸ್ವಾಲ್​​​ ಅನುಪಸ್ಥಿತಿಯಲ್ಲಿ ಭಾರತಕ್ಕೆ ಇನ್ನಿಂಗ್ಸ್ ಆರಂಭಿಸುವ ಜವಾಬ್ದಾರಿ ಯಾರದ್ದು? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಸದ್ಯಕ್ಕೆ ಸಿಕ್ಕಿರೋ ಮಾಹಿತಿ ಪ್ರಕಾರ ಸಂಜು ಸ್ಯಾಮ್ಸನ್​​, ಅಭಿಷೇಕ್​ ಶರ್ಮಾ ಓಪನಿಂಗ್​ ಮಾಡಬಹುದು ಎಂಬುದು.

ಶ್ರೀಲಂಕಾ ವಿರುದ್ಧ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ರಿಯಾನ್ ಪರಾಗ್ ಮತ್ತು ವಾಷಿಂಗ್ಟನ್ ಸುಂದರ್ ಕೂಡ ಪ್ಲೇಯಿಂಗ್​ ಎಲೆವೆನ್​ನಲ್ಲಿ ಸ್ಥಾನ ಪಡೆದುಕೊಳ್ಳಲಿದ್ದಾರೆ. ಟಿ20 ವಿಶ್ವಕಪ್ ತಂಡದ ಭಾಗವಾಗಿದ್ದ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅರ್ಷದೀಪ್ ಸಿಂಗ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ರಿಂಕು ಸಿಂಗ್, ರವಿ ಬಿಷ್ಣೋಯ್, ಮಯಾಂಕ್ ಯಾದವ್​ಗೂ ಅವಕಾಶ ಸಿಗಲಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್-11

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಕೇಸ್​; ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್​ಗೆ ಸಮನ್ಸ್ ಜಾರಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment