ಮುಡಾ ಕೇಸ್​​; ಹೈಕೋರ್ಟ್​ನಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​

author-image
Ganesh Nachikethu
Updated On
ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸರ್ಕಾರದಿಂದ ಶುಭ ಸುದ್ದಿ; ಏನದು?
Advertisment
  • ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್ ಕೇಸ್
  • ಸಿಬಿಐ ತನಿಖೆಗೆ ನೀಡಿ ಎಂದು ಸ್ನೇಹಮಯಿ ಕೃಷ್ಣ ಅರ್ಜಿ
  • ಅರ್ಜಿ ವಿಚಾರಣೆ ಜನವರಿ 27ಕ್ಕೆ ಮುಂದೂಡಿದ ಕೋರ್ಟ್​​

ಧಾರವಾಡ: ಇಂದು ಧಾರವಾಡ ಹೈಕೋರ್ಟ್​ನಲ್ಲಿ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ​ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್​ ಅರ್ಜಿ ವಿಚಾರಣೆಯನ್ನ ಜನವರಿ 27ಕ್ಕೆ ಮುಂದೂಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್​ ನೀಡಿದೆ.

ಸಿಎಂ ಪರ ವಕೀಲ ಕಪಿಲ್ ಸಿಬಲ್ ಮನವಿ ಮೇರೆಗೆ ಅರ್ಜಿ ವಿಚಾರಣೆಯನ್ನ​ ಮುಂದೂಡಲಾಗಿದೆ. ಇನ್ನು ಅರ್ಜಿ ವಿಚಾರಣೆಗೂ ಮುನ್ನ ಮಾತನಾಡಿದ ಸ್ನೇಹಮಯಿ ಕೃಷ್ಣ, ಇವತ್ತೇ ತೀರ್ಪು ಪ್ರಕಟ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ಆದ್ರೀಗ ಸ್ನೇಹಮಯಿ ಕೃಷ್ಣ ನಿರೀಕ್ಷೆ ಹುಸಿಯಾಗಿದ್ದು, ಇದು ಸಿಎಂಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment