Advertisment

ದರ್ಶನ್, ಪವಿತ್ರಾ ಗೌಡ ಸೇರಿ ಹೈಕೋರ್ಟ್​​ನಿಂದ ಯಾರ್ ಯಾರಿಗೆ ಜಾಮೀನು ಸಿಕ್ಕಿದೆ?

author-image
Bheemappa
Updated On
ಎಣ್ಣೆ ಅಮಲಿನಲ್ಲಿ CCTV ಮರೆತ ಆರೋಪಿಗಳು; ಕ್ಯಾಮೆರಾದಲ್ಲಿ ದರ್ಶನ್‌ ಹಲ್ಲೆ ಮಾಡಿದ್ದ ದೃಶ್ಯ ಸೆರೆ?
Advertisment
  • ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲು ಪಾಲಾಗಿದ್ದ ದರ್ಶನ್ ಗ್ಯಾಂಗ್
  • ಕೇಸ್​ನಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡಗೆ ಜಾಮೀನು
  • ಈ ಮೊದಲು ಪವಿತ್ರಾಗೌಡ ಸಲ್ಲಿಸಿದ್ದ ಬೇಲ್ ಅರ್ಜಿ ತಿರಸ್ಕರಿಸಿತ್ತು

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎ1 ಆರೋಪಿ ಪವಿತ್ರಾಗೌಡ ಹಾಗೂ ಎ2 ಆರೋಪಿ ನಟ ದರ್ಶನ್ ಅವರಿಗೆ ಪೂರ್ಣಾವಧಿ ಜಾಮೀನು ಅನ್ನು ಹೈಕೋರ್ಟ್​ ಮಂಜೂರು ಮಾಡಿದೆ.

Advertisment

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್, ಪವಿತ್ರಾ ಗೌಡ ಸೇರಿ ಇನ್ನಿತರರ ಆರೋಪಿಗಳು ಜೈಲು ಪಾಲಾಗಿದ್ದರು. ಈ ಪ್ರಕರಣ ಭಾರೀ ಸದ್ದು ಮಾಡಿತ್ತು. ಕೇಸ್​ನಲ್ಲಿ ಪವಿತ್ರಾ ಗೌಡ ಎ1 ಆರೋಪಿ ಆಗಿದ್ರೆ ದರ್ಶನ್ ಎ2 ಆರೋಪಿ ಆಗಿದ್ದರು.

ಈ ಮೊದಲೇ ಪವಿತ್ರಾ ಗೌಡ ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿಯನ್ನು ಕೋರ್ಟ್​ ರದ್ದು ಮಾಡಿತ್ತು. ಆದರೆ ಈಗ ಅವರಿಗೂ ಜಾಮೀನು ಸಿಕ್ಕಿದೆ. ದರ್ಶನ್ ಅವರಿಗೆ ವೈದ್ಯಕೀಯ ಜಾಮೀನು ಸಿಕ್ಕಿತ್ತು. ಹೀಗಾಗಿ ಹೊರ ಬಂದು ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಇಬ್ಬರ ಜೊತೆ ಇನ್ನು ಐವರಿಗೆ ಬೇಲ್​ ಸಿಕ್ಕಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಅರೆಸ್ಟ್​; ಸಂಚಲನ ಮೂಡಿಸಿದ ಪೊಲೀಸ್ ಅಧಿಕಾರಿ ಹೇಳಿಕೆ

publive-image

ಎ1 ಪವಿತ್ರಾ ಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ12 ಲಕ್ಷ್ಮಣ್, ಎ11 ನಾಗರಾಜ್, ಎ14 ಪ್ರದೋಷ್​​ಗೆ ಜಾಮೀನು ಮಂಜೂರು ಮಾಡಲಾಗಿದೆ. ದರ್ಶನ್ ಅವರು ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಆದರೆ ಪರಪ್ಪನ ಜೈಲಿನಲ್ಲಿ ಕೆಲ ಸಂಗತಿಗಳು ನಡೆದಿದ್ದರಿಂದ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿತ್ತು. ಇದರ ಜೊತೆ ದರ್ಶನ್ ಗ್ಯಾಂಗ್​ನ ಇನ್ನಿತರ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿತ್ತು.

Advertisment

ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬೆಂಗಳೂರಿನ ಬಿಜಿಎಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರಿಗೆ ಪೂರ್ಣಾವಧಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment