ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಹಾರಿ ಬಿದ್ದ ಭೀಕರ ಘಟನೆ
ಅತೀ ವೇಗವಾಗಿ ಕಾರು ಚಲಾಯಿಸಿದ್ದಕ್ಕೆ ನಡೆದ ಅಪಘಾತ
ಕಾರು ಚಾಲಕನಿಗೆ 3 ಸಾವಿರ ರೂ. ದಂಡ ವಿಧಿಸಿದ ಬಜ್ಪೆ ಪೊಲೀಸ್
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಹಾರಿ ಬಿದ್ದಿರೋ ಘಟನೆ ಮಂಗಳೂರು ನಗರ ಹೊರವಲಯದ ಗುರುಪುರ ಬಳಿ ನಡೆದಿದೆ. ಈ ಘಟನೆಯು ಅಕ್ಟೋಬರ್ 15ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳದ ಕೈಕಂಬ ಜೋಡುಮಾರ್ಗ ನಿವಾಸಿಯಾಗಿದ್ದ ಚಾಲಕ ಮಹಮ್ಮದ್ ತನ್ನ ಕಾರನ್ನು ಅತೀ ವೇಗವಾಗಿ ಚಲಾಯಿಸಿದ್ದಕ್ಕೆ ಈ ದುರ್ಘಟನೆ ಸಂಭವಿಸಿದೆ. ಅಪಘಾತಕ್ಕಿಡಾಗಿದ್ದ ಕಾರು ಹೊಂಡಕ್ಕಿಳಿದರೂ ಚಾಲಕ ಹಾಗೂ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇನ್ನೂ, ಅತೀ ವೇಗವಾಗಿ ಕಾರನ್ನು ಚಾಲನೆ ಮಾಡಿದ ತಪ್ಪಿಗೆ ಮಹಮ್ಮದ್ ಮೇಲೆ ಬಜ್ಪೆ ಪೊಲೀಸರು ಕೇಸ್ ದಾಖಲಿಸಿಕೊಂಡು ಮೂರು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಹಾರಿ ಬಿದ್ದ ಭೀಕರ ಘಟನೆ
ಅತೀ ವೇಗವಾಗಿ ಕಾರು ಚಲಾಯಿಸಿದ್ದಕ್ಕೆ ನಡೆದ ಅಪಘಾತ
ಕಾರು ಚಾಲಕನಿಗೆ 3 ಸಾವಿರ ರೂ. ದಂಡ ವಿಧಿಸಿದ ಬಜ್ಪೆ ಪೊಲೀಸ್
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಹಾರಿ ಬಿದ್ದಿರೋ ಘಟನೆ ಮಂಗಳೂರು ನಗರ ಹೊರವಲಯದ ಗುರುಪುರ ಬಳಿ ನಡೆದಿದೆ. ಈ ಘಟನೆಯು ಅಕ್ಟೋಬರ್ 15ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳದ ಕೈಕಂಬ ಜೋಡುಮಾರ್ಗ ನಿವಾಸಿಯಾಗಿದ್ದ ಚಾಲಕ ಮಹಮ್ಮದ್ ತನ್ನ ಕಾರನ್ನು ಅತೀ ವೇಗವಾಗಿ ಚಲಾಯಿಸಿದ್ದಕ್ಕೆ ಈ ದುರ್ಘಟನೆ ಸಂಭವಿಸಿದೆ. ಅಪಘಾತಕ್ಕಿಡಾಗಿದ್ದ ಕಾರು ಹೊಂಡಕ್ಕಿಳಿದರೂ ಚಾಲಕ ಹಾಗೂ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇನ್ನೂ, ಅತೀ ವೇಗವಾಗಿ ಕಾರನ್ನು ಚಾಲನೆ ಮಾಡಿದ ತಪ್ಪಿಗೆ ಮಹಮ್ಮದ್ ಮೇಲೆ ಬಜ್ಪೆ ಪೊಲೀಸರು ಕೇಸ್ ದಾಖಲಿಸಿಕೊಂಡು ಮೂರು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ