ಘಟನೆ ನಡೆದ ಸ್ಥಳದ ಸುತ್ತುಮುತ್ತ ಸಿಸಿಟಿವಿ ಪರಿಶೀಲನೆ
ಅಪರಿಚಿತ ವಾಹನ ಬೇಕಂತಲೇ ಗುದ್ದಿಕೊಂಡು ಹೋಗಿದೆಯಾ?
ಎಎಸ್ಐ ಅಧಿಕಾರಿಯ ತಲೆ ಫುಲ್ ನಜ್ಜುಗುಜ್ಜಾಗಿದೆ
ಕೊಪ್ಪಳ: ಹೈವೇ ಪೆಟ್ರೋಲಿಂಗ್ ಬಂದೋ ಬಸ್ತ್ನಲ್ಲಿ ಇರುವಾಗ ಅಪರಿಚಿತ ವಾಹನವೊಂದು ಗುದ್ದಿಕೊಂಡು ಹೋದ ಪರಿಣಾಮ ಎಎಸ್ಐ ಅಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ವನಬಳ್ಳಾರಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಭಾರೀ ಮಳೆ-ಗಾಳಿ.. ಅಪಾಯದ ಮಟ್ಟ ಮೀರಿದ ಕಾವೇರಿ.. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಮುನಿರಾಬಾದ್ ಪೊಲೀಸ್ ಠಾಣೆಯ ಎಎಸ್ಐ ರಾಮಣ್ಣ (54) ಸಾವನ್ನಪ್ಪಿದವರು. ವನಬಳ್ಳಾರಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಎಸ್ಐ ಹೈವೇನಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನವೊಂದು ಅಧಿಕಾರಿಗೆ ಗುದ್ದಿಕೊಂಡು ಹೋಗಿದೆ. ಹೀಗಾಗಿ ಸ್ಥಳದಲ್ಲೇ ಅಧಿಕಾರಿ ಮೃತಪಟ್ಟಿದ್ದಾರೆ. ವಾಹನ ಗುದ್ದಿದ ರಭಸಕ್ಕೆ ಅಧಿಕಾರಿಯ ತಲೆ ನಜ್ಜುಗುಜ್ಜಾಗಿದ್ದು ಗುರುತು ಸಿಗಂತೆ ಆಗಿದೆ.
ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್.. ಬೆಳ್ಳಂಬೆಳಗ್ಗೆ ರಾಜ್ಯದ 54 ಕಡೆಗಳಲ್ಲಿ ರೇಡ್; ಎಲ್ಲೆಲ್ಲಿ?
ಇಂದು ಬೆಳಗ್ಗೆ ಸರಿ ಸುಮಾರು 3:00 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. ಘಟನಾ ಸ್ಥಳಕ್ಕೆ ಎಸ್ಪಿ ರಾಮ್.ಎಲ್ ಅರೆಸಿದ್ದಿ ಹಾಗೂ ಸಿಪಿಐ ಸುರೇಶ್ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳದ ಸುತ್ತುಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಘಟನೆ ನಡೆದ ಸ್ಥಳದ ಸುತ್ತುಮುತ್ತ ಸಿಸಿಟಿವಿ ಪರಿಶೀಲನೆ
ಅಪರಿಚಿತ ವಾಹನ ಬೇಕಂತಲೇ ಗುದ್ದಿಕೊಂಡು ಹೋಗಿದೆಯಾ?
ಎಎಸ್ಐ ಅಧಿಕಾರಿಯ ತಲೆ ಫುಲ್ ನಜ್ಜುಗುಜ್ಜಾಗಿದೆ
ಕೊಪ್ಪಳ: ಹೈವೇ ಪೆಟ್ರೋಲಿಂಗ್ ಬಂದೋ ಬಸ್ತ್ನಲ್ಲಿ ಇರುವಾಗ ಅಪರಿಚಿತ ವಾಹನವೊಂದು ಗುದ್ದಿಕೊಂಡು ಹೋದ ಪರಿಣಾಮ ಎಎಸ್ಐ ಅಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ವನಬಳ್ಳಾರಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಭಾರೀ ಮಳೆ-ಗಾಳಿ.. ಅಪಾಯದ ಮಟ್ಟ ಮೀರಿದ ಕಾವೇರಿ.. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಮುನಿರಾಬಾದ್ ಪೊಲೀಸ್ ಠಾಣೆಯ ಎಎಸ್ಐ ರಾಮಣ್ಣ (54) ಸಾವನ್ನಪ್ಪಿದವರು. ವನಬಳ್ಳಾರಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಎಸ್ಐ ಹೈವೇನಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನವೊಂದು ಅಧಿಕಾರಿಗೆ ಗುದ್ದಿಕೊಂಡು ಹೋಗಿದೆ. ಹೀಗಾಗಿ ಸ್ಥಳದಲ್ಲೇ ಅಧಿಕಾರಿ ಮೃತಪಟ್ಟಿದ್ದಾರೆ. ವಾಹನ ಗುದ್ದಿದ ರಭಸಕ್ಕೆ ಅಧಿಕಾರಿಯ ತಲೆ ನಜ್ಜುಗುಜ್ಜಾಗಿದ್ದು ಗುರುತು ಸಿಗಂತೆ ಆಗಿದೆ.
ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್.. ಬೆಳ್ಳಂಬೆಳಗ್ಗೆ ರಾಜ್ಯದ 54 ಕಡೆಗಳಲ್ಲಿ ರೇಡ್; ಎಲ್ಲೆಲ್ಲಿ?
ಇಂದು ಬೆಳಗ್ಗೆ ಸರಿ ಸುಮಾರು 3:00 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. ಘಟನಾ ಸ್ಥಳಕ್ಕೆ ಎಸ್ಪಿ ರಾಮ್.ಎಲ್ ಅರೆಸಿದ್ದಿ ಹಾಗೂ ಸಿಪಿಐ ಸುರೇಶ್ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳದ ಸುತ್ತುಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ