/newsfirstlive-kannada/media/post_attachments/wp-content/uploads/2024/07/SCHOOL-RAIN-2.jpg)
ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ಮತ್ತೆ ವ್ಯಾಪಕ ಮಳೆ ಶುರುವಾಗಿದ್ದು, ಐದು ತಾಲೂಕುಗಳ ಶಾಲಾ-ಕಾಲೇಜಿಗೆ ರಜೆ ಘೋಷಣೆಯಾಗಿದೆ.
ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಈ ಆದೇಶ ನೀಡಿದ್ದಾರೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಕಳೆದ ಐದಾರು ದಿನಗಳಿಂದ ಕೊಂಚ ಬ್ರೇಕ್ ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ.
ಇದನ್ನೂ ಓದಿ:Landslide: 5 ವರ್ಷದ ಹಿಂದೆ ಕೇರಳ ಪುತ್ತುಮಲೆ ದುರಂತ.. ಅದೇ ಜಾಗದಿಂದ 2 ಕಿಮೀ ದೂರದಲ್ಲಿ ಪರ್ವತ ಪ್ರವಾಹ..!
ಮಳೆಯಿಂದಾಗಿ ಭಾರೀ ಅನಾಹುತ ಆಗುವ ಸೂಚನೆ ಹಿನ್ನೆಲೆಯಲ್ಲಿ, ಮುಂಜಾಗೃತ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನು ಘಟ್ಟದ ಮೇಲಿನ ತಾಲೂಕುಗಳಿಗೆ ರಜೆ ಇಲ್ಲ. ಎಂದಿನಂತೆ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸಲಿವೆ.
ಇದನ್ನೂ ಓದಿ:ಕೇರಳ ಗುಡ್ಡ ಕುಸಿತದಲ್ಲಿ ಕರ್ನಾಟಕದ ಅಜ್ಜಿ, ಮೊಮ್ಮಗ ನಾಪತ್ತೆ.. ಇದೇ ಕುಟುಂಬದ ಮೂವರ ರೋಚಕ ರಕ್ಷಣೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us