newsfirstkannada.com

BREAKING: ಕಾರ್ಪೊರೇಟರ್ ಮಗಳ ಭೀಕರ ಹತ್ಯೆ; ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಚಾಕು ಇರಿತ

Share :

Published April 18, 2024 at 6:19pm

Update April 18, 2024 at 6:27pm

    ಹಾಡಹಗಲೇ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಗೆ ಚಾಕು ಇರಿತ

    ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ

    ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ಬೆಚ್ಚಿ ಬೀಳಿಸಿದ ಬರ್ಬರ ಹತ್ಯೆ

ಹುಬ್ಬಳ್ಳಿ: ಹಾಡಹಗಲೇ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನೇಹಾ ಹಿರೇಮಠ್ ಮೃತ ದುರ್ದೈವಿ. ನೇಹಾ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ.

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ಈ ದಾರುಣ ಘಟನೆ ನಡೆದಿದೆ. ಶಾಂತವಾಗಿದ್ದ ಹುಬ್ಬಳ್ಳಿ ನಗರದಲ್ಲಿ ಮತ್ತೆ ಚಾಕು ಇರಿತದ ಕ್ರೌರ್ಯ ಸದ್ದು ಮಾಡಿದೆ. ನೇಹಾ ಹಿರೇಮಠ ಕುತ್ತಿಗೆಗೆ ಚಾಕು ಇರಿದ ಯುವಕ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ನೇಹಾನನ್ನು ಕಿಮ್ಸ್ ಆಸ್ಪತ್ರೆಗೆ ಕರೆತರುವ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಇಬ್ಬರು ಚಿಕ್ಕ ಮಕ್ಕಳು, ಹೆಂಡತಿಗೆ ವಿಷ ಹಾಕಿ ಕೊಂದ ಪಾಪಿ; ಕಿರಾತಕನ ಕೃತ್ಯಕ್ಕೆ ಬೆಚ್ಚಿ ಬಿದ್ದ ಮಂಡ್ಯ

ಘಟನಾ ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಿಗೆಗೆ ಚಾಕು ಇರಿತ ಮಾಡಿದ ಯುವಕನಿಗಾಗಿ ಪೊಲೀಸರು ಜಾಲ ಬೀಸಿದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಕಾರ್ಪೊರೇಟರ್ ಮಗಳ ಭೀಕರ ಹತ್ಯೆ; ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಚಾಕು ಇರಿತ

https://newsfirstlive.com/wp-content/uploads/2024/04/Hubbali-Murder.jpg

    ಹಾಡಹಗಲೇ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಗೆ ಚಾಕು ಇರಿತ

    ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ

    ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ಬೆಚ್ಚಿ ಬೀಳಿಸಿದ ಬರ್ಬರ ಹತ್ಯೆ

ಹುಬ್ಬಳ್ಳಿ: ಹಾಡಹಗಲೇ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನೇಹಾ ಹಿರೇಮಠ್ ಮೃತ ದುರ್ದೈವಿ. ನೇಹಾ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ.

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ಈ ದಾರುಣ ಘಟನೆ ನಡೆದಿದೆ. ಶಾಂತವಾಗಿದ್ದ ಹುಬ್ಬಳ್ಳಿ ನಗರದಲ್ಲಿ ಮತ್ತೆ ಚಾಕು ಇರಿತದ ಕ್ರೌರ್ಯ ಸದ್ದು ಮಾಡಿದೆ. ನೇಹಾ ಹಿರೇಮಠ ಕುತ್ತಿಗೆಗೆ ಚಾಕು ಇರಿದ ಯುವಕ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ನೇಹಾನನ್ನು ಕಿಮ್ಸ್ ಆಸ್ಪತ್ರೆಗೆ ಕರೆತರುವ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಇಬ್ಬರು ಚಿಕ್ಕ ಮಕ್ಕಳು, ಹೆಂಡತಿಗೆ ವಿಷ ಹಾಕಿ ಕೊಂದ ಪಾಪಿ; ಕಿರಾತಕನ ಕೃತ್ಯಕ್ಕೆ ಬೆಚ್ಚಿ ಬಿದ್ದ ಮಂಡ್ಯ

ಘಟನಾ ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಿಗೆಗೆ ಚಾಕು ಇರಿತ ಮಾಡಿದ ಯುವಕನಿಗಾಗಿ ಪೊಲೀಸರು ಜಾಲ ಬೀಸಿದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More