ಭಾರೀ ಮಳೆಗೆ ನೆನೆದು ನಿಂತಿತ್ತು ಮನೆಯ ಗೋಡೆ
ಗೋಡೆ ಬಿದ್ದ ಹೊಡೆತಕ್ಕೆ ಆಟೋ ಸಂಪೂರ್ಣ ಜಖಂ
ದುರ್ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯ ಪರಿಣಾಮ ಮನೆಯ ಗೋಡೆ ಕುಸಿದು ಅನಾಹುತ ಸಂಭವಿಸಿರುವ ಘಟನೆ ತಾಲೂಕಿನ ಅಲ್ಲಂಪುರದಲ್ಲಿ ನಡೆದಿದೆ.
ಮನೆಯ ಗೋಡೆಯ ಹೊರ ಭಾಗಕ್ಕೆ ಬಿದ್ದ ಪರಿಣಾಮ ದುರಂತವೊಂದು ತಪ್ಪಿದೆ. ಮನೆಯ ಒಳಭಾಗದಲ್ಲಿ ಬಿದ್ದಿದ್ದರೆ ಮನೆಯಲ್ಲಿದ್ದವರ ಜೀವಕ್ಕೆ ಅಪಾಯ ಇತ್ತು. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಾಗೇಶ್ ಶೆಟ್ಟಿ ಎಂಬುವವರ ಮನೆಯ ಮುಂಭಾಗ ಸಂಪೂರ್ಣ ನಾಶವಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋ ಗೋಡೆ ಬಿದ್ದ ಪರಿಣಾ ಜಖಂಗೊಂಡಿದೆ. ಸ್ಥಳಕ್ಕೆ ಪಂಚಾಯಿತಿ ಅಧಿಕಾರಿಗಳು, ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ರಾಹುಲ್ ದ್ರಾವಿಡ್ IPLಗೆ ರಿಟರ್ನ್.. KKRಗೆ ಬಿಗ್ ಶಾಕ್.. ಈ ತಂಡದ ನೂತನ ಕೋಚ್..!
ಇದನ್ನೂ ಓದಿ:ಮದುವೆಯಾದ ಮೇಲೂ ಮಾಜಿ ಪ್ರೇಯಸಿ ಜೊತೆ ಸಂಬಂಧ.. ಪತ್ನಿ ವಿರೋಧಿಸಿದಾಗ ಈ ಹೆಜ್ಜೆ ಇಟ್ಟ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಭಾರೀ ಮಳೆಗೆ ನೆನೆದು ನಿಂತಿತ್ತು ಮನೆಯ ಗೋಡೆ
ಗೋಡೆ ಬಿದ್ದ ಹೊಡೆತಕ್ಕೆ ಆಟೋ ಸಂಪೂರ್ಣ ಜಖಂ
ದುರ್ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯ ಪರಿಣಾಮ ಮನೆಯ ಗೋಡೆ ಕುಸಿದು ಅನಾಹುತ ಸಂಭವಿಸಿರುವ ಘಟನೆ ತಾಲೂಕಿನ ಅಲ್ಲಂಪುರದಲ್ಲಿ ನಡೆದಿದೆ.
ಮನೆಯ ಗೋಡೆಯ ಹೊರ ಭಾಗಕ್ಕೆ ಬಿದ್ದ ಪರಿಣಾಮ ದುರಂತವೊಂದು ತಪ್ಪಿದೆ. ಮನೆಯ ಒಳಭಾಗದಲ್ಲಿ ಬಿದ್ದಿದ್ದರೆ ಮನೆಯಲ್ಲಿದ್ದವರ ಜೀವಕ್ಕೆ ಅಪಾಯ ಇತ್ತು. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಾಗೇಶ್ ಶೆಟ್ಟಿ ಎಂಬುವವರ ಮನೆಯ ಮುಂಭಾಗ ಸಂಪೂರ್ಣ ನಾಶವಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋ ಗೋಡೆ ಬಿದ್ದ ಪರಿಣಾ ಜಖಂಗೊಂಡಿದೆ. ಸ್ಥಳಕ್ಕೆ ಪಂಚಾಯಿತಿ ಅಧಿಕಾರಿಗಳು, ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ರಾಹುಲ್ ದ್ರಾವಿಡ್ IPLಗೆ ರಿಟರ್ನ್.. KKRಗೆ ಬಿಗ್ ಶಾಕ್.. ಈ ತಂಡದ ನೂತನ ಕೋಚ್..!
ಇದನ್ನೂ ಓದಿ:ಮದುವೆಯಾದ ಮೇಲೂ ಮಾಜಿ ಪ್ರೇಯಸಿ ಜೊತೆ ಸಂಬಂಧ.. ಪತ್ನಿ ವಿರೋಧಿಸಿದಾಗ ಈ ಹೆಜ್ಜೆ ಇಟ್ಟ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ