/newsfirstlive-kannada/media/post_attachments/wp-content/uploads/2024/06/darshan36.jpg)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 17 ಮಂದಿಯನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ತನಿಖೆ ನಡೆಸಿದ ಪೊಲೀಸರು 17 ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.
ಇಷ್ಟು ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನಡೆಸುತ್ತಿದ್ದ ದರ್ಶನ್​ ಅವರನ್ನು ಮೊನ್ನೆಯಷ್ಟೇ ಬಳ್ಳಾರಿ ಸೆಂಟ್ರಲ್ ಜೈಲಿಗೆ ಹಾಕಿದ್ದಾರೆ. ಉಳಿದ ಆರೋಪಿಗಳನ್ನು ಬೇರೆ ಬೇರೆ ಜಿಲ್ಲೆಯ ಜೈಲಿಗಟ್ಟಿದ್ದಾರೆ. ಈವರೆಗೆ ರೇಣುಕಾಸ್ವಾಮಿ ಕೊಲೆ ಕೇಸ್​ ಬಗ್ಗೆ ಪೊಲೀಸರು ತನಿಖೆ ವೇಳೆ ಖರ್ಚು ಮಾಡಿದ್ದು 5 ಲಕ್ಷ ರೂಪಾಯಿ ಆಗಿದೆ.
/newsfirstlive-kannada/media/post_attachments/wp-content/uploads/2024/08/Darshan-in-Bellary-Jail.jpg)
ಪೊಲೀಸ್ ಅಧಿಕಾರಿಗಳು ತಮ್ಮ ಸ್ವಂತ ಹಣದಿಂದ ಕೊಲೆ ಕೇಸ್​ ಬಗ್ಗೆ ತನಿಖೆ ನಡೆಸಿದ್ದರು. ಹೀಗಾಗಿ ಪೊಲೀಸ್ ಇಲಾಖೆ ಪೊಲೀಸರಿಗೆ ಹಣ ವಾಪಸ್ ನೀಡಿದೆ. ಪೊಲೀಸ್ ಇಲಾಖೆ ಒಟ್ಟು 5 ಲಕ್ಷ ಹಣ ಬಿಡುಗಡೆ ಮಾಡಿದೆ. ಈ ಹಿಂದೆ ತಮ್ಮ ಸ್ವಂತ ಖರ್ಚಿನಲ್ಲಿ ಪೊಲೀಸರು ತನಿಖೆ ಮಾಡ್ತಿದ್ದಾರೆ. ಸರ್ಕಾರ ಹಣ ಕೊಟ್ಟಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. /newsfirstlive-kannada/media/post_attachments/wp-content/uploads/2024/08/DARSHAN-10.jpg)
ಸಿಎಫ್ಎಸ್ಎಲ್ ಹಣ ಪಾವತಿ ಬಾಕಿ ಉಳಿದಿದೆ. ಹೈದ್ರಾಬಾದ್​ನಿಂದ 8 ರಿಪೋರ್ಟ್ ತಲುಪಬೇಕಿದೆ. ಗೃಹ ಇಲಾಖೆ ಈ ರಿಪೋರ್ಟ್​ಗಳಿಗೆ ಹಣ ಪಾವತಿ ಮಾಡಬೇಕಿದೆ. ಪೊಲೀಸರು ಹೈದ್ರಾಬಾದ್ ಸಿಎಫ್​ಎಸ್​ಎಲ್​ಗೆ ನೀಡಬೇಕಿರುವ ಹಣದ ಡಿಟೈಲ್ಸ್ ಕೊಟ್ಟಿದ್ದಾರೆ. ಸಾಮಾನ್ಯವಾಗಿ ಕೊಲೆ ಪ್ರಕರಣ ತನಿಖೆ ಖರ್ಚಾಗುವುದು ಕೇವಲ 1 ರಿಂದ 2 ಲಕ್ಷ ಮಾತ್ರ. ಹೈ-ಪ್ರೋಫೈಲ್ ಕೇಸ್ ಆಗಿದ್ದರಿಂದ ಪೊಲೀಸರು ಕುಲಂಕುಷವಾಗಿ ತನಿಖೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us