ಕರ್ತವ್ಯ ನಿರತ ASI ಅಧಿಕಾರಿಗೆ ಹೃದಯಾಘಾತ.. ಮೀರಾ ನಾಯಕ ನಿಧನ

author-image
Bheemappa
Updated On
ಕರ್ತವ್ಯ ನಿರತ ASI ಅಧಿಕಾರಿಗೆ ಹೃದಯಾಘಾತ.. ಮೀರಾ ನಾಯಕ ನಿಧನ
Advertisment
  • ಮಹಾಲಕ್ಷ್ಮಿದೇವಿ ಜಾತ್ರೆಯ ಭದ್ರತೆಗೆ ನಿಯೋಜನೆಗೊಂಡಿದ್ದ ASI
  • ಹೃದಯಾಘಾತದಿಂದ ಕರ್ತವ್ಯ ನಿರತ ಎಎಸ್‌ಐ ಅಧಿಕಾರಿ ಇನ್ನಿಲ್ಲ
  • ನಗರದಲ್ಲಿರುವ ಬಾಲಕರ ವಸತಿ ನಿಲಯದಲ್ಲಿ ವಾಸ್ತವ್ಯ ಹೂಡಿದ್ರು

ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಸನ, ಶಿವಮೊಗ್ಗ, ವಿಜಯಪುರದಲ್ಲಿ ಹಾರ್ಟ್​ ಅಟ್ಯಾಕ್ ಸಂಬಂಧಿಸಿದ ಘಟನೆಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಕರ್ತವ್ಯ ನಿರತ ಎಎಸ್ಐ ಅಧಿಕಾರಿ ಒಬ್ಬರು ಹೃದಯಾಘಾತದಿಂದ ಪ್ರಾಣ ಬಿಟ್ಟಿದ್ದಾರೆ.

ಹುಬ್ಬಳ್ಳಿಯ ಎಪಿಎಂಸಿ ಪೊಲೀಸ್ ಠಾಣೆ ಎಎಸ್ಐ ಮೀರಾ ನಾಯಕ ಹಾರ್ಟ್​ ಅಟ್ಯಾಕ್​ನಿಂದ ನಿಧನ ಹೊಂದಿದ್ದಾರೆ. ಗೋಕಾಕ ಮಹಾಲಕ್ಷ್ಮಿದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಮೀರಾ ನಾಯಕರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು. ಹೀಗಾಗಿ ನಗರದ ಎಸ್‌ಸಿ- ಎಸ್‌ಟಿ ಬಾಲಕರ ವಸತಿ ನಿಲಯದಲ್ಲಿ ವಾಸ್ತವ್ಯ ಹೂಡಿದ್ದರು.

ಇದನ್ನೂ ಓದಿ: ರಾಮಾಯಣದಲ್ಲಿ ಯಶ್​ ರಾವಣ ಆದ್ರೆ.. ಹನುಮಾನ್, ಲಕ್ಷ್ಮಣ, ಸೂರ್ಪನಕಿ ಪಾತ್ರ ಮಾಡ್ತಿರೋದು ಯಾರು?

ಆದರೆ ಇಂದು ಬೆಳಗ್ಗೆ 6 ಗಂಟೆಗೆ ಮೀರಾ ನಾಯಕರಿಗೆ ಎದೆ ನೋವು ಕಾಣಿಸಿದೆ. ಕೂಡಲೇ ತೀವ್ರ ಹೃದಯಾಘಾತದಿಂದ ಜೀವ ಬಿಟ್ಟಿದ್ದಾರೆ. ಸದ್ಯ ಎಎಸ್‌ಐ ಮೀರಾ ನಾಯಕ ಮೃತದೇಹವನ್ನು ಗೋಕಾಕ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment