/newsfirstlive-kannada/media/post_attachments/wp-content/uploads/2025/07/BGM_ASI_HEART_ATTACK.jpg)
ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಸನ, ಶಿವಮೊಗ್ಗ, ವಿಜಯಪುರದಲ್ಲಿ ಹಾರ್ಟ್​ ಅಟ್ಯಾಕ್ ಸಂಬಂಧಿಸಿದ ಘಟನೆಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಕರ್ತವ್ಯ ನಿರತ ಎಎಸ್ಐ ಅಧಿಕಾರಿ ಒಬ್ಬರು ಹೃದಯಾಘಾತದಿಂದ ಪ್ರಾಣ ಬಿಟ್ಟಿದ್ದಾರೆ.
ಹುಬ್ಬಳ್ಳಿಯ ಎಪಿಎಂಸಿ ಪೊಲೀಸ್ ಠಾಣೆ ಎಎಸ್ಐ ಮೀರಾ ನಾಯಕ ಹಾರ್ಟ್​ ಅಟ್ಯಾಕ್​ನಿಂದ ನಿಧನ ಹೊಂದಿದ್ದಾರೆ. ಗೋಕಾಕ ಮಹಾಲಕ್ಷ್ಮಿದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಮೀರಾ ನಾಯಕರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು. ಹೀಗಾಗಿ ನಗರದ ಎಸ್ಸಿ- ಎಸ್ಟಿ ಬಾಲಕರ ವಸತಿ ನಿಲಯದಲ್ಲಿ ವಾಸ್ತವ್ಯ ಹೂಡಿದ್ದರು.
ಇದನ್ನೂ ಓದಿ: ರಾಮಾಯಣದಲ್ಲಿ ಯಶ್​ ರಾವಣ ಆದ್ರೆ.. ಹನುಮಾನ್, ಲಕ್ಷ್ಮಣ, ಸೂರ್ಪನಕಿ ಪಾತ್ರ ಮಾಡ್ತಿರೋದು ಯಾರು?
ಆದರೆ ಇಂದು ಬೆಳಗ್ಗೆ 6 ಗಂಟೆಗೆ ಮೀರಾ ನಾಯಕರಿಗೆ ಎದೆ ನೋವು ಕಾಣಿಸಿದೆ. ಕೂಡಲೇ ತೀವ್ರ ಹೃದಯಾಘಾತದಿಂದ ಜೀವ ಬಿಟ್ಟಿದ್ದಾರೆ. ಸದ್ಯ ಎಎಸ್ಐ ಮೀರಾ ನಾಯಕ ಮೃತದೇಹವನ್ನು ಗೋಕಾಕ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us