ಹುಬ್ಬಳ್ಳಿ ಘೋರ ದುರಂತ.. ಇಂದು ಉಸಿರು ನಿಲ್ಲಿಸಿದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ

author-image
Gopal Kulkarni
Updated On
ಹುಬ್ಬಳ್ಳಿ ಘೋರ ದುರಂತ.. ಇಂದು ಉಸಿರು ನಿಲ್ಲಿಸಿದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ
Advertisment
  • ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ಪ್ರಕರಣದಲ್ಲಿ ಮತ್ತೊಂದು ಜೀವ ಬಲಿ
  • 19 ವರ್ಷದ ಲಿಂಗರಾಜ ಬೀರನೂರ ಚಿಕಿತ್ಸೆ ಫಲಿಸದೆ ಕೊನೆಯುಸಿರು
  • ಭಾನುವಾರ ರಾತ್ರಿ ಸಾಯಿನಗರದಲ್ಲಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್ ಪ್ರಕರಣ

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ಪ್ರಕರಣದಲ್ಲಿ ಮತ್ತೊರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾನೆ. ಪ್ರಕರಣದಲ್ಲಿ ಸಾವಿನ ಸಂಖ್ಯೆ ಈಗ ನಾಲ್ಕಕ್ಕೆ ಏರಿಕೆಯಾಗಿದೆ. ಲಿಂಗರಾಜು ಬೀರನೂರ ಎಂಬ 19 ವರ್ಷದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಭಾನುವಾರ ರಾತ್ರಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್​ ಪ್ರಕರಣದಲ್ಲಿ ಈಗ ಮತ್ತೊಬ್ಬ ದುರ್ದೈವಿ ಪ್ರಾಣ ಕಳೆದುಕೊಂಡಿದ್ದಾನೆ. ಹುಬ್ಬಳ್ಳಿಯ ಸಾಯಿನಗರದಲ್ಲಿ ಈ ದುರ್ಘಟನೆ ನಡೆದಿತ್ತು. ಅಯ್ಯಪ್ಪ ಸನ್ನಿಧಿಯಲ್ಲಿ ಗ್ಯಾಸ್​ ಸೋರಿಕೆಯಾಗಿ ಸಿಲಿಂಡರ್ ಬ್ಲಾಸ್ಟ್ ಆಗಿತ್ತು.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ದಾರುಣ ಘಟನೆ.. ಉಸಿರು ನಿಲ್ಲಿಸಿದ ಅಯ್ಯಪ್ಪನ ಇಬ್ಬರು ಮಾಲಾಧಾರಿಗಳು

ಅಯ್ಯಪ್ಪ ಸನ್ನಿಧಿಯಲ್ಲಿ ಹೊತ್ತಿಕೊಂಡಿದ್ದ ಬೆಂಕಿಯಿಂದ 9 ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡವರನ್ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದ್ದು, ಉಳಿದ ಗಾಯಾಳುಗಳಿಗೆ ಇನ್ನೂ ಚಿಕಿತ್ಸೆ ನಡೆಯುತ್ತಿದೆ.

publive-image

ಗಾಯಗೊಂಡವರಲ್ಲಿ ನಿನ್ನೆಯಷ್ಟೇ ಇಬ್ಬರು ಸಾವನ್ನಪ್ಪಿದ್ದರು. ನಿಜಲಿಂಗಪ್ಪ, ಸಂಜಯ್ ಸವದತ್ತಿ ಎಂಬುವವರು ನಿನ್ನೆಯಷ್ಟೇ ಉಸಿರು ನಿಲ್ಲಿಸಿದ್ದರು. ಸದ್ಯ ಐವರು ಗಾಯಾಳುಗಳಿಗೆ ಕಿಮ್ಸ್​ನಲ್ಲಿ ಚಿಕಿತ್ಸೆ ಮುಂದುವರಿದಿದೆ.

Advertisment