newsfirstkannada.com

ಹುಬ್ಬಳ್ಳಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಸದ್ದಾಂ ಕಾಲಿಗೆ ಗುಂಡೇಟು: ಪೊಲೀಸ್ ಆಯುಕ್ತೆ ಏನಂದ್ರು?

Share :

Published May 4, 2024 at 9:14am

    16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ್ದ ಸದ್ದಾಂ

    ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಅನ್ಯಕೋಮಿನ ಯುವಕ

    ಅರೆಸ್ಟ್​ ಮಾಡಿ ಆರೋಪಿಯನ್ನು ಸ್ಥಳಾಂತರಿಸುವ ವೇಳೆ ಎಸ್ಕೇಪ್​ ಆಗಲು ಯತ್ನ

ಹುಬ್ಬಳ್ಳಿ: 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ ಪ್ರಕರಣದ ಕುರಿತಂತೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ಆರೋಪಿ ಸದ್ದಾಂ ಅರೆಸ್ಟ್  ಮಾಡಿ ಸ್ಥಳಾಂತರಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ಮತ್ತು ತಪ್ಪಿಸಿಕೊಳ್ಳಲು ಯತ್ನಿಸಿದ ಬಗ್ಗೆ ವಿವರವಾಗಿ ಮಾಹಿತಿ ಬಿಚ್ಚಿಟ್ಟಿದ್ದಾರೆ.

ರೇಣುಕಾ ಸುಕುಮಾರ ಏನಂದ್ರು?

‘ಎಪಿಎಂಸಿ ಕೇಸ್ ಪತ್ತೆ ಹಚ್ಚಲು ಟೀಮ್ ಕಳುಹಿಸಿದ್ವಿ. ಅದರಲ್ಲಿ ಒಂದು ಟೀಮ್‌ಗೆ ಈತ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಐದಾರು ಕಿಮೀ ದೂರದಲ್ಲಿರೋದು ತಿಳಿಯುತ್ತೆ. ಆಗ ಆತನನ್ನು ಬಂಧಿಸಿ ಕರೆತರಲು ತೆರಳಿದ್ದರು. ಆ ವೇಳೆಯಲ್ಲಿ ವಿದ್ಯಾಗಿರಿ ಇನ್ಸ್ಪೆಕ್ಟರ್ ನೇತೃತ್ವದ ಟೀಮ್ ಹೋಗಿತ್ತು. ಮುಂದಿನ ತನಿಖೆಗೆ ಠಾಣೆಗೆ ಕರೆತರಲು ಮುಂದಾಗಿದ್ದರು ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ  ಹೇಳಿದ್ದಾರೆ.

ಇದನ್ನೂ ಓದಿ:ನೇಹಾ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಪ್ರಕರಣ.. ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ 

ಬಳಿಕ ‘ಆರೋಪಿಯನ್ನು ಬಂಧಿಸಿ ಜೀಪ್ ಹತ್ತಿಸುವಾಗ ಪೆನ್ ನೈಪ್ ‌ನಿಂದ ಎಡ ಭುಜಕ್ಕೆ ಚುಚ್ಚಿದ್ದಾನೆ. ಕಾನ್ಸ್​​ ಟೇಬಲ್ ಅರುಣಾ ಮೇಲೆ ಮೊದಲು ಹಲ್ಲೆ ಮಾಡುತ್ತಾನೆ. ಆಗ ಕಂಟ್ರೋಲ್ ಮಾಡಲು ಆತನನ್ನು ಕೆಳಗೆ ತಳ್ಳಿದ್ದರು. ಆಗ ಅದೇ ಚಾಕುವಿನಿಂದ ಇನ್ಸ್​ಪೆಕ್ಟರ್‌ ಮಂಡಿ ಮತ್ತು ಬೆನ್ನ ಮೇಲೆ ಹಲ್ಲೆ ಮಾಡುತ್ತಾನೆ. ಅವನನ್ನ ಕಂಟ್ರೋಲ್ ಮಾಡಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಆಗ ಎಡಗಾಲಿಗೆ ಫೈರ್ ಮಾಡಿದ್ದಾರೆ. ಆರೋಪಿ ಸೇರಿ ಮೂರು ಜನ ಚಿಕಿತ್ಸೆಗೆ ದಾಖಲಾಗಿದ್ದಾರೆ ’ಎಂದು ರೇಣುಕಾ ಸುಕುಮಾರ ಹೇಳಿದ್ದಾರೆ.

ಸಿಪಿಐ ಮತ್ತು ಕಾನ್ಸಟೇಬಲ್‌ಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ. ಹೀಗಾಗಿ ಅಡ್ಮಿಟ್ ಮಾಡಿಕೊಂಡಿದ್ದಾರೆ. ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು ಒಂದು ಕೇಸ್ ದಾಖಲಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

ಏನಿದು ಘಟನೆ?

ಹುಬ್ಬಳ್ಳಿ ನವನಗರದ ಎಪಿಎಂಸಿ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆ ಅನ್ಯಕೋಮಿನ ಯುವಕನೊಬ್ಬ ಅತ್ಯಾಚಾರ ನಡೆಸಿರೋ ಆರೋಪ ಕೇಳಿ ಬಂದಿದೆ. ಹೊಟ್ಟೆ ನೋವಿನಿಂದ ಬಳಲುತಿದ್ದ ಬಾಲಕಿಯನ್ನ ಪೋಷಕರು ಆಸ್ಪತ್ರೆಗೆ ಕರೆದೊಯ್ದಾಗ ಸತ್ಯ ಹೊರಬಿದ್ದಿದೆ. ಆಪ್ರಾಪ್ತೆ ಗರ್ಭಿಣಿಯಾಗಿದ್ದ ವಿಷಯ ತಿಳಿಯುತ್ತಿದ್ದಂತೆ ಆರೋಪಿ‌ ಸದ್ದಾಂ ಹುಸೇನ್‌ ಎಸ್ಕೇಪ್ ಆಗಿದ್ದ. ಸದ್ಯ ಆತನನ್ನು ಬಂಧಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹುಬ್ಬಳ್ಳಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಸದ್ದಾಂ ಕಾಲಿಗೆ ಗುಂಡೇಟು: ಪೊಲೀಸ್ ಆಯುಕ್ತೆ ಏನಂದ್ರು?

https://newsfirstlive.com/wp-content/uploads/2024/05/saddam-2.jpg

    16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ್ದ ಸದ್ದಾಂ

    ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಅನ್ಯಕೋಮಿನ ಯುವಕ

    ಅರೆಸ್ಟ್​ ಮಾಡಿ ಆರೋಪಿಯನ್ನು ಸ್ಥಳಾಂತರಿಸುವ ವೇಳೆ ಎಸ್ಕೇಪ್​ ಆಗಲು ಯತ್ನ

ಹುಬ್ಬಳ್ಳಿ: 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ ಪ್ರಕರಣದ ಕುರಿತಂತೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ಆರೋಪಿ ಸದ್ದಾಂ ಅರೆಸ್ಟ್  ಮಾಡಿ ಸ್ಥಳಾಂತರಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ಮತ್ತು ತಪ್ಪಿಸಿಕೊಳ್ಳಲು ಯತ್ನಿಸಿದ ಬಗ್ಗೆ ವಿವರವಾಗಿ ಮಾಹಿತಿ ಬಿಚ್ಚಿಟ್ಟಿದ್ದಾರೆ.

ರೇಣುಕಾ ಸುಕುಮಾರ ಏನಂದ್ರು?

‘ಎಪಿಎಂಸಿ ಕೇಸ್ ಪತ್ತೆ ಹಚ್ಚಲು ಟೀಮ್ ಕಳುಹಿಸಿದ್ವಿ. ಅದರಲ್ಲಿ ಒಂದು ಟೀಮ್‌ಗೆ ಈತ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಐದಾರು ಕಿಮೀ ದೂರದಲ್ಲಿರೋದು ತಿಳಿಯುತ್ತೆ. ಆಗ ಆತನನ್ನು ಬಂಧಿಸಿ ಕರೆತರಲು ತೆರಳಿದ್ದರು. ಆ ವೇಳೆಯಲ್ಲಿ ವಿದ್ಯಾಗಿರಿ ಇನ್ಸ್ಪೆಕ್ಟರ್ ನೇತೃತ್ವದ ಟೀಮ್ ಹೋಗಿತ್ತು. ಮುಂದಿನ ತನಿಖೆಗೆ ಠಾಣೆಗೆ ಕರೆತರಲು ಮುಂದಾಗಿದ್ದರು ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ  ಹೇಳಿದ್ದಾರೆ.

ಇದನ್ನೂ ಓದಿ:ನೇಹಾ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಪ್ರಕರಣ.. ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ 

ಬಳಿಕ ‘ಆರೋಪಿಯನ್ನು ಬಂಧಿಸಿ ಜೀಪ್ ಹತ್ತಿಸುವಾಗ ಪೆನ್ ನೈಪ್ ‌ನಿಂದ ಎಡ ಭುಜಕ್ಕೆ ಚುಚ್ಚಿದ್ದಾನೆ. ಕಾನ್ಸ್​​ ಟೇಬಲ್ ಅರುಣಾ ಮೇಲೆ ಮೊದಲು ಹಲ್ಲೆ ಮಾಡುತ್ತಾನೆ. ಆಗ ಕಂಟ್ರೋಲ್ ಮಾಡಲು ಆತನನ್ನು ಕೆಳಗೆ ತಳ್ಳಿದ್ದರು. ಆಗ ಅದೇ ಚಾಕುವಿನಿಂದ ಇನ್ಸ್​ಪೆಕ್ಟರ್‌ ಮಂಡಿ ಮತ್ತು ಬೆನ್ನ ಮೇಲೆ ಹಲ್ಲೆ ಮಾಡುತ್ತಾನೆ. ಅವನನ್ನ ಕಂಟ್ರೋಲ್ ಮಾಡಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಆಗ ಎಡಗಾಲಿಗೆ ಫೈರ್ ಮಾಡಿದ್ದಾರೆ. ಆರೋಪಿ ಸೇರಿ ಮೂರು ಜನ ಚಿಕಿತ್ಸೆಗೆ ದಾಖಲಾಗಿದ್ದಾರೆ ’ಎಂದು ರೇಣುಕಾ ಸುಕುಮಾರ ಹೇಳಿದ್ದಾರೆ.

ಸಿಪಿಐ ಮತ್ತು ಕಾನ್ಸಟೇಬಲ್‌ಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ. ಹೀಗಾಗಿ ಅಡ್ಮಿಟ್ ಮಾಡಿಕೊಂಡಿದ್ದಾರೆ. ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು ಒಂದು ಕೇಸ್ ದಾಖಲಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

ಏನಿದು ಘಟನೆ?

ಹುಬ್ಬಳ್ಳಿ ನವನಗರದ ಎಪಿಎಂಸಿ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆ ಅನ್ಯಕೋಮಿನ ಯುವಕನೊಬ್ಬ ಅತ್ಯಾಚಾರ ನಡೆಸಿರೋ ಆರೋಪ ಕೇಳಿ ಬಂದಿದೆ. ಹೊಟ್ಟೆ ನೋವಿನಿಂದ ಬಳಲುತಿದ್ದ ಬಾಲಕಿಯನ್ನ ಪೋಷಕರು ಆಸ್ಪತ್ರೆಗೆ ಕರೆದೊಯ್ದಾಗ ಸತ್ಯ ಹೊರಬಿದ್ದಿದೆ. ಆಪ್ರಾಪ್ತೆ ಗರ್ಭಿಣಿಯಾಗಿದ್ದ ವಿಷಯ ತಿಳಿಯುತ್ತಿದ್ದಂತೆ ಆರೋಪಿ‌ ಸದ್ದಾಂ ಹುಸೇನ್‌ ಎಸ್ಕೇಪ್ ಆಗಿದ್ದ. ಸದ್ಯ ಆತನನ್ನು ಬಂಧಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More