ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗೇಟ್ ಬಳಿ ನಡೆದ ಘಟನೆ
ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದಕ್ಕೆ ಸ್ಥಳದಲ್ಲೇ ಮೃತಪಟ್ಟ ಮಹಿಳೆ
ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ
ರಾಮನಗರ: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗೇಟ್ ಬಳಿ ನಡೆದಿದೆ. ಮಂಜುಳಾ ಪತಿಯಿಂದಲೇ ಕೊಲೆಯಾದ ಮಹಿಳೆ.
ಇದನ್ನೂ ಓದಿ: ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿ ಪವಿತ್ರ ಜಯರಾಂ ದುರಂತ ಅಂತ್ಯ
ಮೃತ ಮಹಿಳೆಯು ಪಿಚ್ಚನಕೆರೆ ಗ್ರಾಮದ ನಿವಾಸಿ. ಪತಿ ರಾಜೇಶ್ ಎಂಬಾತ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಅಂತ ಆರೋಪ ಕೇಳಿ ಬಂದಿದೆ. ಈ ಹಿಂದೆ ಕೌಟುಂಬಿಕ ಕಲಹದಿಂದ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರಂತೆ. ಇದರ ನಡುವೆ ಪತಿ ರಾಜೇಶ್ ಆಗಾಗ ಪತ್ನಿ ಮಂಜುಳಾಗೆ ಕಿರುಕುಳ ನೀಡುತ್ತಿದ್ದನಂತೆ.
ಆದರೆ ಇಂದು ದೊಡ್ಡಮುದುವಾಡಿ ಗೇಟ್ ಬಸ್ ನಿಲ್ದಾಣದ ಬಳಿ ನಿಂತಿದ್ದಾಗ ಪತ್ನಿ ಮೇಲೆ ರಾಡ್ನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನಂತೆ. ರಾಡ್ನಿಂದ ತಲೆಗೆ ಪೆಟ್ಟು ಬಿದ್ದ ಕಾರಣ ತೀವ್ರ ರಕ್ತಸ್ರಾವದಿಂದ ಮಂಜುಳ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಜುಳಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಮಾಡಿ ಪರಾರಿಯಾದ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗೇಟ್ ಬಳಿ ನಡೆದ ಘಟನೆ
ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದಕ್ಕೆ ಸ್ಥಳದಲ್ಲೇ ಮೃತಪಟ್ಟ ಮಹಿಳೆ
ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ
ರಾಮನಗರ: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗೇಟ್ ಬಳಿ ನಡೆದಿದೆ. ಮಂಜುಳಾ ಪತಿಯಿಂದಲೇ ಕೊಲೆಯಾದ ಮಹಿಳೆ.
ಇದನ್ನೂ ಓದಿ: ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿ ಪವಿತ್ರ ಜಯರಾಂ ದುರಂತ ಅಂತ್ಯ
ಮೃತ ಮಹಿಳೆಯು ಪಿಚ್ಚನಕೆರೆ ಗ್ರಾಮದ ನಿವಾಸಿ. ಪತಿ ರಾಜೇಶ್ ಎಂಬಾತ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಅಂತ ಆರೋಪ ಕೇಳಿ ಬಂದಿದೆ. ಈ ಹಿಂದೆ ಕೌಟುಂಬಿಕ ಕಲಹದಿಂದ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರಂತೆ. ಇದರ ನಡುವೆ ಪತಿ ರಾಜೇಶ್ ಆಗಾಗ ಪತ್ನಿ ಮಂಜುಳಾಗೆ ಕಿರುಕುಳ ನೀಡುತ್ತಿದ್ದನಂತೆ.
ಆದರೆ ಇಂದು ದೊಡ್ಡಮುದುವಾಡಿ ಗೇಟ್ ಬಸ್ ನಿಲ್ದಾಣದ ಬಳಿ ನಿಂತಿದ್ದಾಗ ಪತ್ನಿ ಮೇಲೆ ರಾಡ್ನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನಂತೆ. ರಾಡ್ನಿಂದ ತಲೆಗೆ ಪೆಟ್ಟು ಬಿದ್ದ ಕಾರಣ ತೀವ್ರ ರಕ್ತಸ್ರಾವದಿಂದ ಮಂಜುಳ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಜುಳಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಮಾಡಿ ಪರಾರಿಯಾದ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ