ಕ್ಷುಲ್ಲಕ ಮಾತಿಗೆ ಗಂಡ ಹೆಂಡತಿ ನಡುವೆ ನಡೆದ ಜಗಳ
ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿದ ಪಾಪಿ ಪತಿರಾಯ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 32 ವರ್ಷದ ಪತ್ನಿ
ಚಿತ್ರದುರ್ಗ: ಕ್ಷುಲ್ಲಕ ಮಾತಿಗೆ ಗಂಡ ಹೆಂಡತಿ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಕೋಪಗೊಂಡ ಪತಿ ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿದ ಘಟನೆ ಚಿತ್ರದುರ್ಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸಮೀನಾ(32) ಪತಿಯಿಂದ ಹಲ್ಲೆಗೊಳಗಾದ ಮಹಿಳೆ.
ಪತಿ ದಾದಾಫೀರ್ ಪತ್ನಿ ಸುಮೀನಾಳ ಕತ್ತಿನ ಭಾಗಕ್ಕೆ ಮಚ್ಚು ಬೀಸಿದ್ದಾನೆ. ಈ ವೇಳೆ ಸುಮೀನಾಳ ಕತ್ತು ಸೀಳಿದೆ. ಅತ್ತ ಹಲ್ಲೆ ಮಾಡಿದ ಆರೋಪಿ ಪತಿ ದಾದಾಫೀರ್ ಪರಾರಿಯಾಗಿದ್ದಾನೆ.
ಗಾಯಾಳು ಸಮೀನಾಳನ್ನು ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.
ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಬಲೆಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕ್ಷುಲ್ಲಕ ಮಾತಿಗೆ ಗಂಡ ಹೆಂಡತಿ ನಡುವೆ ನಡೆದ ಜಗಳ
ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿದ ಪಾಪಿ ಪತಿರಾಯ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 32 ವರ್ಷದ ಪತ್ನಿ
ಚಿತ್ರದುರ್ಗ: ಕ್ಷುಲ್ಲಕ ಮಾತಿಗೆ ಗಂಡ ಹೆಂಡತಿ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಕೋಪಗೊಂಡ ಪತಿ ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿದ ಘಟನೆ ಚಿತ್ರದುರ್ಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸಮೀನಾ(32) ಪತಿಯಿಂದ ಹಲ್ಲೆಗೊಳಗಾದ ಮಹಿಳೆ.
ಪತಿ ದಾದಾಫೀರ್ ಪತ್ನಿ ಸುಮೀನಾಳ ಕತ್ತಿನ ಭಾಗಕ್ಕೆ ಮಚ್ಚು ಬೀಸಿದ್ದಾನೆ. ಈ ವೇಳೆ ಸುಮೀನಾಳ ಕತ್ತು ಸೀಳಿದೆ. ಅತ್ತ ಹಲ್ಲೆ ಮಾಡಿದ ಆರೋಪಿ ಪತಿ ದಾದಾಫೀರ್ ಪರಾರಿಯಾಗಿದ್ದಾನೆ.
ಗಾಯಾಳು ಸಮೀನಾಳನ್ನು ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.
ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಬಲೆಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ