newsfirstkannada.com

ಹೆಂಡತಿಗೆ ಮಚ್ಚು ಬೀಸಿ ಪತಿ ಪರಾರಿ.. ಕತ್ತು ಸೀಳಿದರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಪತ್ನಿ

Share :

Published January 30, 2024 at 9:00am

    ಕ್ಷುಲ್ಲಕ ಮಾತಿಗೆ ಗಂಡ ಹೆಂಡತಿ ನಡುವೆ ನಡೆದ ಜಗಳ

    ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿದ ಪಾಪಿ ಪತಿರಾಯ

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 32 ವರ್ಷದ ಪತ್ನಿ

ಚಿತ್ರದುರ್ಗ: ಕ್ಷುಲ್ಲಕ ಮಾತಿಗೆ ಗಂಡ ಹೆಂಡತಿ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಕೋಪಗೊಂಡ ಪತಿ ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿದ ಘಟನೆ ಚಿತ್ರದುರ್ಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸಮೀನಾ(32) ಪತಿಯಿಂದ ಹಲ್ಲೆಗೊಳಗಾದ ಮಹಿಳೆ.

ಪತಿ ದಾದಾಫೀರ್ ಪತ್ನಿ ಸುಮೀನಾಳ ಕತ್ತಿನ ಭಾಗಕ್ಕೆ ಮಚ್ಚು ಬೀಸಿದ್ದಾನೆ. ಈ ವೇಳೆ ಸುಮೀನಾಳ ಕತ್ತು ಸೀಳಿದೆ. ಅತ್ತ ಹಲ್ಲೆ ಮಾಡಿದ ಆರೋಪಿ ಪತಿ ದಾದಾಫೀರ್ ಪರಾರಿಯಾಗಿದ್ದಾನೆ.

ಗಾಯಾಳು ಸಮೀನಾಳನ್ನು ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.

ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಬಲೆ‌ಬೀಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೆಂಡತಿಗೆ ಮಚ್ಚು ಬೀಸಿ ಪತಿ ಪರಾರಿ.. ಕತ್ತು ಸೀಳಿದರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಪತ್ನಿ

https://newsfirstlive.com/wp-content/uploads/2024/01/Dafidar.jpg

    ಕ್ಷುಲ್ಲಕ ಮಾತಿಗೆ ಗಂಡ ಹೆಂಡತಿ ನಡುವೆ ನಡೆದ ಜಗಳ

    ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿದ ಪಾಪಿ ಪತಿರಾಯ

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 32 ವರ್ಷದ ಪತ್ನಿ

ಚಿತ್ರದುರ್ಗ: ಕ್ಷುಲ್ಲಕ ಮಾತಿಗೆ ಗಂಡ ಹೆಂಡತಿ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಕೋಪಗೊಂಡ ಪತಿ ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿದ ಘಟನೆ ಚಿತ್ರದುರ್ಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸಮೀನಾ(32) ಪತಿಯಿಂದ ಹಲ್ಲೆಗೊಳಗಾದ ಮಹಿಳೆ.

ಪತಿ ದಾದಾಫೀರ್ ಪತ್ನಿ ಸುಮೀನಾಳ ಕತ್ತಿನ ಭಾಗಕ್ಕೆ ಮಚ್ಚು ಬೀಸಿದ್ದಾನೆ. ಈ ವೇಳೆ ಸುಮೀನಾಳ ಕತ್ತು ಸೀಳಿದೆ. ಅತ್ತ ಹಲ್ಲೆ ಮಾಡಿದ ಆರೋಪಿ ಪತಿ ದಾದಾಫೀರ್ ಪರಾರಿಯಾಗಿದ್ದಾನೆ.

ಗಾಯಾಳು ಸಮೀನಾಳನ್ನು ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.

ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಬಲೆ‌ಬೀಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More