newsfirstkannada.com

ತಂಗಿಯ ಎಂಗೇಜ್ಮೆಂಟ್​ಗೆ ಬರಲಿಲ್ಲವೆಂದು ಪತ್ನಿಗೆ ಚೂರಿ ಇರಿತ; ಪತಿಯನ್ನು ಜೈಲಿಗೆ ಅಟ್ಟಿದ ಪೊಲೀಸರು

Share :

Published February 18, 2024 at 12:23pm

Update February 18, 2024 at 12:24pm

    2019ರಲ್ಲಿ ಪ್ರೀತಿಸಿ ಮದುವೆಯಾದ ಜೋಡಿ

    ಪತ್ನಿಯ ಮೇಲೆ ಪತಿಗೆ ವಿಪರೀತ ಅನುಮಾನ

    ಜಗಳ ವಿಕೋಪಕ್ಕೆ ತಿರುಗಿ ಚಾಕು ಇರಿದ ಪತಿ

ಬೆಂಗಳೂರು: ತಂಗಿಯ ಎಂಗೇಜ್ಮೆಂಟ್ ಗೆ ಬರಲಿಲ್ಲ ಎಂದು ಪತಿ ತನ್ನ ಪತ್ನಿಗೆ ಚಾಕು ಇರಿದ ಘಟನೆ ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ನಡೆದಿದೆ. ಪತಿ ಜಯಪ್ರಕಾಶ್ (32) ಎಂಬಾತ ಈ ಕೃತ್ಯವೆಸಗಿದ್ದಾನೆ.

ಫೆಬ್ರವರಿ 15ರ ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಪತ್ನಿ‌ ದಿವ್ಯಶ್ರೀ (26)ಗೆ ಪತಿ ಚಾಕು ಇರಿದಿದ್ದಾನೆ.

ಜಯಪ್ರಕಾಶ್ ಹಾಗೂ ದಿವ್ಯಶ್ರೀ ಪ್ರೀತಿಸಿ 2019ರಲ್ಲಿ ಮದುವೆಯಾದರು. ಪೋಷಕರ ವಿರೋಧ ಹಿನ್ನೆಲೆ, ಬೆಂಗಳೂರಲ್ಲಿ ವಾಸ ಮಾಡುತ್ತಿದ್ದರು. ಅನಾರೋಗ್ಯ ಹಿನ್ನೆಲೆ, ಮನೆಯ ಖರ್ಚೆಲ್ಲ ಪತ್ನಿಯೇ ನೋಡಿಕೊಳ್ಳುತ್ತಿದ್ದರು.

ಮೊದಲು ದಂಪತಿ ಮೂಡಲಪಾಳ್ಯದಲ್ಲಿ ಮನೆಮಾಡಿಕೊಂಡು ವಾಸವಿದ್ದರು. ಆದರೆ ಬರು ಬರುತ್ತಾ ನಿನಗೆ ಅಕ್ರಮ ಸಂಬಂಧ ಇದೆ ಎಂದು ಪತಿ ಜಯಪ್ರಕಾಶ್ ಪ್ರತಿದಿನ ಗಲಾಟೆ ಮಾಡುತ್ತಿದ್ದನು. ಫೋನ್ ನಲ್ಲಿ ಮಾತಾಡಿದ್ರೆ ಯಾರದ್ದೊ ಜೊತೆಗೆ ಮಾತನಾಡುತ್ತೀಯ ಎಂದು ಹಲ್ಲೆ ಮಾಡುತ್ತಿದ್ದನು. ಬಳಿಕ ದಂಪತಿ ಸುಂಕದಕಟ್ಟೆಗೆ ಶಿಫ್ಟ್ ಆದರು. ಅಲ್ಲಿಯೂ ಕೂಡ ಅನುಮಾನಗೊಂಡು ಹಲ್ಲೆ ಮಾಡುತ್ತಿದ್ದನು. ಹೀಗೆ ಜಗಳ ವಿಕೋಪಕ್ಕೆ ತಿರುಗಿ ಚಾಕು ತೆಗೆದುಕೊಂಡು ಜಯಪ್ರಕಾಶ್ ಪತ್ನಿ ಮೇಲೆ ಹಲ್ಲೆ ಮಾಡಿದ್ದಾನೆ.

ಹಲ್ಲೆಗೆ ಮುಂದಾದಾಗ ಚಾಕು ಕಾಲಿಗೆ ತಾಕಿ ದಿವ್ಯಶ್ರೀಗೆ ಗಾಯವಾಗಿದೆ. ಕಾಲಿಗೆ ಗಾಯ ಆಗಿದ್ದ ಪರಿಣಾಮ ಎಂಟು‌ ಹೊಲಿಗೆ ಹಾಕಿಸಿಕೊಂಡಿದ್ದಾರೆ. ಈ ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿ ಜಯಪ್ರಕಾಶ್​ನನ್ನು ಪೊಲಿಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತಂಗಿಯ ಎಂಗೇಜ್ಮೆಂಟ್​ಗೆ ಬರಲಿಲ್ಲವೆಂದು ಪತ್ನಿಗೆ ಚೂರಿ ಇರಿತ; ಪತಿಯನ್ನು ಜೈಲಿಗೆ ಅಟ್ಟಿದ ಪೊಲೀಸರು

https://newsfirstlive.com/wp-content/uploads/2024/02/jayaprakash.jpg

    2019ರಲ್ಲಿ ಪ್ರೀತಿಸಿ ಮದುವೆಯಾದ ಜೋಡಿ

    ಪತ್ನಿಯ ಮೇಲೆ ಪತಿಗೆ ವಿಪರೀತ ಅನುಮಾನ

    ಜಗಳ ವಿಕೋಪಕ್ಕೆ ತಿರುಗಿ ಚಾಕು ಇರಿದ ಪತಿ

ಬೆಂಗಳೂರು: ತಂಗಿಯ ಎಂಗೇಜ್ಮೆಂಟ್ ಗೆ ಬರಲಿಲ್ಲ ಎಂದು ಪತಿ ತನ್ನ ಪತ್ನಿಗೆ ಚಾಕು ಇರಿದ ಘಟನೆ ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ನಡೆದಿದೆ. ಪತಿ ಜಯಪ್ರಕಾಶ್ (32) ಎಂಬಾತ ಈ ಕೃತ್ಯವೆಸಗಿದ್ದಾನೆ.

ಫೆಬ್ರವರಿ 15ರ ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಪತ್ನಿ‌ ದಿವ್ಯಶ್ರೀ (26)ಗೆ ಪತಿ ಚಾಕು ಇರಿದಿದ್ದಾನೆ.

ಜಯಪ್ರಕಾಶ್ ಹಾಗೂ ದಿವ್ಯಶ್ರೀ ಪ್ರೀತಿಸಿ 2019ರಲ್ಲಿ ಮದುವೆಯಾದರು. ಪೋಷಕರ ವಿರೋಧ ಹಿನ್ನೆಲೆ, ಬೆಂಗಳೂರಲ್ಲಿ ವಾಸ ಮಾಡುತ್ತಿದ್ದರು. ಅನಾರೋಗ್ಯ ಹಿನ್ನೆಲೆ, ಮನೆಯ ಖರ್ಚೆಲ್ಲ ಪತ್ನಿಯೇ ನೋಡಿಕೊಳ್ಳುತ್ತಿದ್ದರು.

ಮೊದಲು ದಂಪತಿ ಮೂಡಲಪಾಳ್ಯದಲ್ಲಿ ಮನೆಮಾಡಿಕೊಂಡು ವಾಸವಿದ್ದರು. ಆದರೆ ಬರು ಬರುತ್ತಾ ನಿನಗೆ ಅಕ್ರಮ ಸಂಬಂಧ ಇದೆ ಎಂದು ಪತಿ ಜಯಪ್ರಕಾಶ್ ಪ್ರತಿದಿನ ಗಲಾಟೆ ಮಾಡುತ್ತಿದ್ದನು. ಫೋನ್ ನಲ್ಲಿ ಮಾತಾಡಿದ್ರೆ ಯಾರದ್ದೊ ಜೊತೆಗೆ ಮಾತನಾಡುತ್ತೀಯ ಎಂದು ಹಲ್ಲೆ ಮಾಡುತ್ತಿದ್ದನು. ಬಳಿಕ ದಂಪತಿ ಸುಂಕದಕಟ್ಟೆಗೆ ಶಿಫ್ಟ್ ಆದರು. ಅಲ್ಲಿಯೂ ಕೂಡ ಅನುಮಾನಗೊಂಡು ಹಲ್ಲೆ ಮಾಡುತ್ತಿದ್ದನು. ಹೀಗೆ ಜಗಳ ವಿಕೋಪಕ್ಕೆ ತಿರುಗಿ ಚಾಕು ತೆಗೆದುಕೊಂಡು ಜಯಪ್ರಕಾಶ್ ಪತ್ನಿ ಮೇಲೆ ಹಲ್ಲೆ ಮಾಡಿದ್ದಾನೆ.

ಹಲ್ಲೆಗೆ ಮುಂದಾದಾಗ ಚಾಕು ಕಾಲಿಗೆ ತಾಕಿ ದಿವ್ಯಶ್ರೀಗೆ ಗಾಯವಾಗಿದೆ. ಕಾಲಿಗೆ ಗಾಯ ಆಗಿದ್ದ ಪರಿಣಾಮ ಎಂಟು‌ ಹೊಲಿಗೆ ಹಾಕಿಸಿಕೊಂಡಿದ್ದಾರೆ. ಈ ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿ ಜಯಪ್ರಕಾಶ್​ನನ್ನು ಪೊಲಿಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More