ಭಾರತೀಯ ಕ್ರಿಕೆಟ್ ಅಭಿಮಾನಿ ಹೃದಯಾಘಾತಕ್ಕೆ ಬಲಿ
ರೋಹಿತ್ ಶರ್ಮಾ ಕಣ್ಣೀರು ಸುರಿಸಿದ್ದನ್ನು ಕಂಡಂತೆ ಹೃದಯಾಘಾತ
ಹಾರ್ಟ್ ಅಟ್ಯಾಕ್ಗೆ ತಿರುಪತಿಯ ಮೂಲದ ಹಾರ್ಡ್ ಕೋರ್ ಫ್ಯಾನ್ ಬಲಿ
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವು ಸೋತ ಬೆನ್ನಲ್ಲೇ ವ್ಯಕ್ತಿಯೊಬ್ಬ ಹೃದಯಾಘಾತಕ್ಕೆ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜ್ಯೋತಿ ಕುಮಾರ್ ಯಾದವ್ ಎಂಬ ಕ್ರಿಕೆಟ್ ಅಭಿಮಾನಿ ಸಾವನ್ನಪ್ಪಿರುವ ದುರ್ದೈವಿ.
ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸೋತಿದ್ದು, ಸೋತ ಬೆನ್ನಲ್ಲೇ ರೋಹಿತ್ ಶರ್ಮಾ ಕಣ್ಣೀರು ಹಾಕುತ್ತಾ ಮೈದಾನದಿಂದ ಹೊರಕ್ಕೆ ನಡೆದರು. ಈ ದೃಶ್ಯ ಕಂಡು ಜ್ಯೋತಿ ಕುಮಾರ್ಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರು, ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಇನ್ನು ಜ್ಯೋತಿ ಕುಮಾರ್ ತಿರುಪತಿಯ ದುರ್ಗಾಸಮುದ್ರದವರಾಗಿದ್ದು, ಟೀಂ ಇಂಡಿಯಾದ ಅಭಿಮಾನಿಯಾಗಿದ್ದರು. ಆದರೆ ನವೆಂಬರ್ 19 ರಂದು ನಡೆದ ವಿಶ್ವಕಪ್ ಫೈನಲ್ ಪಂದ್ಯವನ್ನು ನೋಡುತ್ತಿದ್ದ ಜ್ಯೋತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಭಾರತೀಯ ಕ್ರಿಕೆಟ್ ಅಭಿಮಾನಿ ಹೃದಯಾಘಾತಕ್ಕೆ ಬಲಿ
ರೋಹಿತ್ ಶರ್ಮಾ ಕಣ್ಣೀರು ಸುರಿಸಿದ್ದನ್ನು ಕಂಡಂತೆ ಹೃದಯಾಘಾತ
ಹಾರ್ಟ್ ಅಟ್ಯಾಕ್ಗೆ ತಿರುಪತಿಯ ಮೂಲದ ಹಾರ್ಡ್ ಕೋರ್ ಫ್ಯಾನ್ ಬಲಿ
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವು ಸೋತ ಬೆನ್ನಲ್ಲೇ ವ್ಯಕ್ತಿಯೊಬ್ಬ ಹೃದಯಾಘಾತಕ್ಕೆ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜ್ಯೋತಿ ಕುಮಾರ್ ಯಾದವ್ ಎಂಬ ಕ್ರಿಕೆಟ್ ಅಭಿಮಾನಿ ಸಾವನ್ನಪ್ಪಿರುವ ದುರ್ದೈವಿ.
ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸೋತಿದ್ದು, ಸೋತ ಬೆನ್ನಲ್ಲೇ ರೋಹಿತ್ ಶರ್ಮಾ ಕಣ್ಣೀರು ಹಾಕುತ್ತಾ ಮೈದಾನದಿಂದ ಹೊರಕ್ಕೆ ನಡೆದರು. ಈ ದೃಶ್ಯ ಕಂಡು ಜ್ಯೋತಿ ಕುಮಾರ್ಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರು, ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಇನ್ನು ಜ್ಯೋತಿ ಕುಮಾರ್ ತಿರುಪತಿಯ ದುರ್ಗಾಸಮುದ್ರದವರಾಗಿದ್ದು, ಟೀಂ ಇಂಡಿಯಾದ ಅಭಿಮಾನಿಯಾಗಿದ್ದರು. ಆದರೆ ನವೆಂಬರ್ 19 ರಂದು ನಡೆದ ವಿಶ್ವಕಪ್ ಫೈನಲ್ ಪಂದ್ಯವನ್ನು ನೋಡುತ್ತಿದ್ದ ಜ್ಯೋತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ