newsfirstkannada.com

ಅನೈತಿಕ ಸಂಬಂಧ ಹಿನ್ನೆಲೆ.. ಜಮೀನಿನಲ್ಲಿ ಇಬ್ಬರು ಒಟ್ಟಿಗೆ ಇದ್ದಾಗ ಕೊಲೆ

Share :

Published March 19, 2024 at 12:39pm

    35 ವರ್ಷದ ವ್ಯಕ್ತಿ ಜೊತೆ 38 ವರ್ಷದ ಮಹಿಳೆ ಅಕ್ರಮ ಸಂಬಂಧ

    ಕೊಲೆಯ ಬಳಿಕ ಶವದ ಮೇಲೆ ಮುಳ್ಳು‌ಕಂಟಿ ಹಾಕಿದ ಕೊಲೆಗಾರರು

    ಕೊಲೆಗಾರರ ಪತ್ತೆಗೆ ತನಿಖೆ ಮುಂದುವರೆಸಿದ ಪೊಲೀಸರು

ವಿಜಯಪುರ: ಅನೈತಿಕ ಸಂಬಂಧ ಹಿನ್ನೆಲೆ ಜೋಡಿ ಕೊಲೆಯೊಂದು ನಡೆದಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ಘಟನೆ ಬೆಳಕಿಗೆ ಬಂದಿದೆ.

ಕಲ್ಲಪ್ಪ ಕುಂಬಾರ (35) ಪಾವರ್ತಿ ತಳವಾರ (38) ಕೊಲೆಯಾದವರು ಎಂದು ಗುರುತಿಸಲಾಗಿದೆ. ಇಬ್ಬರು ನಿಡಗುಂದಿ ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾಗಿದ್ದು, ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು. ಮಾರಡಗಿ ತಾಂಡಾದ ಬಳಿ ಜಮೀನಿನಲ್ಲಿ ಇಬ್ಬರು ಒಟ್ಟಿಗೆ ಇದ್ದಾಗ ಕೊಲೆ ಮಾಡಲಾಗಿದೆ.

ಕೊಲೆಯ ಬಳಿಕ ಶವದ ಮೇಲೆ ಕೊಲೆಗಾರರು ಮುಳ್ಳು‌ಕಂಟಿ ಹಾಕಿದ್ದಾರೆ. ಪಾರ್ವತಿ ಮನೆಯ ಕಡೆಯವರು ‌ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ನಿಡಗುಂದಿ ಪೊಲೀಸ್ ಠಾಣೆಯ ಸಿಪಿಐ ಶರಣಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ಮುಂದುವರೆದಿದೆ.

ಸದ್ಯ ಕೊಲೆಗಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.  ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿ‌ಯಲ್ಲಿ ಪ್ರಕರಣ‌ ಬೆಳಕಿಗೆ ಬಂದಿದ್ದು, ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮನೆಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅನೈತಿಕ ಸಂಬಂಧ ಹಿನ್ನೆಲೆ.. ಜಮೀನಿನಲ್ಲಿ ಇಬ್ಬರು ಒಟ್ಟಿಗೆ ಇದ್ದಾಗ ಕೊಲೆ

https://newsfirstlive.com/wp-content/uploads/2023/06/Crime-News-3.jpg

    35 ವರ್ಷದ ವ್ಯಕ್ತಿ ಜೊತೆ 38 ವರ್ಷದ ಮಹಿಳೆ ಅಕ್ರಮ ಸಂಬಂಧ

    ಕೊಲೆಯ ಬಳಿಕ ಶವದ ಮೇಲೆ ಮುಳ್ಳು‌ಕಂಟಿ ಹಾಕಿದ ಕೊಲೆಗಾರರು

    ಕೊಲೆಗಾರರ ಪತ್ತೆಗೆ ತನಿಖೆ ಮುಂದುವರೆಸಿದ ಪೊಲೀಸರು

ವಿಜಯಪುರ: ಅನೈತಿಕ ಸಂಬಂಧ ಹಿನ್ನೆಲೆ ಜೋಡಿ ಕೊಲೆಯೊಂದು ನಡೆದಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ಘಟನೆ ಬೆಳಕಿಗೆ ಬಂದಿದೆ.

ಕಲ್ಲಪ್ಪ ಕುಂಬಾರ (35) ಪಾವರ್ತಿ ತಳವಾರ (38) ಕೊಲೆಯಾದವರು ಎಂದು ಗುರುತಿಸಲಾಗಿದೆ. ಇಬ್ಬರು ನಿಡಗುಂದಿ ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾಗಿದ್ದು, ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು. ಮಾರಡಗಿ ತಾಂಡಾದ ಬಳಿ ಜಮೀನಿನಲ್ಲಿ ಇಬ್ಬರು ಒಟ್ಟಿಗೆ ಇದ್ದಾಗ ಕೊಲೆ ಮಾಡಲಾಗಿದೆ.

ಕೊಲೆಯ ಬಳಿಕ ಶವದ ಮೇಲೆ ಕೊಲೆಗಾರರು ಮುಳ್ಳು‌ಕಂಟಿ ಹಾಕಿದ್ದಾರೆ. ಪಾರ್ವತಿ ಮನೆಯ ಕಡೆಯವರು ‌ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ನಿಡಗುಂದಿ ಪೊಲೀಸ್ ಠಾಣೆಯ ಸಿಪಿಐ ಶರಣಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ಮುಂದುವರೆದಿದೆ.

ಸದ್ಯ ಕೊಲೆಗಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.  ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿ‌ಯಲ್ಲಿ ಪ್ರಕರಣ‌ ಬೆಳಕಿಗೆ ಬಂದಿದ್ದು, ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮನೆಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More