ಗೃಹಪ್ರವೇಶದ ಊಟದ ಬಳಿಕ ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮೈಸೂರಲ್ಲಿ ಗೃಹ ಪ್ರವೇಶದ ಆಹಾರ ಸೇವಿಸಿ ಪ್ರಾಣ ಬಿಟ್ಟ ಮಹಿಳೆ
ಗ್ರಾಮದ ಹಲವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಆಸ್ಪತ್ರೆಯಲ್ಲಿ ಚಿಕಿತ್ಸೆ
ಮೈಸೂರು: ಗೃಹಪ್ರವೇಶದ ಸಮಾರಂಭವದಲ್ಲಿ ಊಟ ಸೇವಿಸಿದ್ದ ಗ್ರಾಮದ ಜನ ಅಸ್ವಸ್ಥರಾಗಿರುವ ಘಟನೆ ಮೈಸೂರು ತಾಲೂಕು ಮಾರ್ಬಳ್ಳಿಯಲ್ಲಿ ನಡೆದಿದೆ. ಗೃಹಪ್ರವೇಶ ಕಾರ್ಯದಲ್ಲಿ ಊಟ ಸೇವಿಸಿದ ಬಳಿಕ ಗ್ರಾಮದ ಜನರಿಗೆ ವಾಂತಿ, ಭೇದಿ ಶುರುವಾಗಿದೆ. ಪುರುಷರು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ನಿನ್ನೆ ಮಾರ್ಬಳ್ಳಿಯಲ್ಲಿ ಮನೆಯೊಂದರ ಗೃಹ ಪ್ರವೇಶ ಕಾರ್ಯ ನಡೆದಿತ್ತು. ಈ ವೇಳೆ ಗೃಹ ಪ್ರವೇಶದ ಆಹಾರ ಸೇವಿಸಿ 65 ವರ್ಷದ ಶಿವಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: VIDEO: ಕ್ರಿಕೆಟ್ ಆಡುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತ.. ನೆಲಕ್ಕೆ ಬಿದ್ದಂತೆ ಉಸಿರು ನಿಲ್ಲಿಸಿದ ಬಾಟ್ಸ್ಮನ್
ಮಾರ್ಬಳ್ಳಿಯ ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಹಲವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಗೃಹಪ್ರವೇಶದ ಊಟದ ಬಳಿಕ ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮೈಸೂರಲ್ಲಿ ಗೃಹ ಪ್ರವೇಶದ ಆಹಾರ ಸೇವಿಸಿ ಪ್ರಾಣ ಬಿಟ್ಟ ಮಹಿಳೆ
ಗ್ರಾಮದ ಹಲವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಆಸ್ಪತ್ರೆಯಲ್ಲಿ ಚಿಕಿತ್ಸೆ
ಮೈಸೂರು: ಗೃಹಪ್ರವೇಶದ ಸಮಾರಂಭವದಲ್ಲಿ ಊಟ ಸೇವಿಸಿದ್ದ ಗ್ರಾಮದ ಜನ ಅಸ್ವಸ್ಥರಾಗಿರುವ ಘಟನೆ ಮೈಸೂರು ತಾಲೂಕು ಮಾರ್ಬಳ್ಳಿಯಲ್ಲಿ ನಡೆದಿದೆ. ಗೃಹಪ್ರವೇಶ ಕಾರ್ಯದಲ್ಲಿ ಊಟ ಸೇವಿಸಿದ ಬಳಿಕ ಗ್ರಾಮದ ಜನರಿಗೆ ವಾಂತಿ, ಭೇದಿ ಶುರುವಾಗಿದೆ. ಪುರುಷರು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ನಿನ್ನೆ ಮಾರ್ಬಳ್ಳಿಯಲ್ಲಿ ಮನೆಯೊಂದರ ಗೃಹ ಪ್ರವೇಶ ಕಾರ್ಯ ನಡೆದಿತ್ತು. ಈ ವೇಳೆ ಗೃಹ ಪ್ರವೇಶದ ಆಹಾರ ಸೇವಿಸಿ 65 ವರ್ಷದ ಶಿವಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: VIDEO: ಕ್ರಿಕೆಟ್ ಆಡುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತ.. ನೆಲಕ್ಕೆ ಬಿದ್ದಂತೆ ಉಸಿರು ನಿಲ್ಲಿಸಿದ ಬಾಟ್ಸ್ಮನ್
ಮಾರ್ಬಳ್ಳಿಯ ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಹಲವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ