newsfirstkannada.com

ಮಂಡ್ಯ ರೋಡ್‌ ಶೋನಲ್ಲಿ ತಪ್ಪಿದ ಅನಾಹುತ.. ಕೂದಲೆಳೆ ಅಂತರದಲ್ಲಿ ಪಾರಾದ ನಟ ದರ್ಶನ್‌; ಏನಾಯ್ತು?

Share :

Published April 19, 2024 at 10:01pm

    ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ನಟ ದರ್ಶನ್​

    ಮಂಡ್ಯ ಕಾಂಗ್ರೆಸ್​​ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಕ್ಯಾಂಪೇನ್ ವೇಳೆ ಘಟನೆ

    ವಿದ್ಯುತ್ ತಂತಿ ತುಂಡಾಗಿ ಬೀಳುತ್ತಿದ್ದಂತೆ ಆತಂಕಗೊಂಡ ಕಾರ್ಯಕರ್ತರು

ಮಂಡ್ಯ: ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ನಟ ದರ್ಶನ್ ಸಖತ್​ ಬ್ಯುಸಿಯಾಗಿದ್ದರು. ಆದರೆ ಇದೇ ವೇಳೆ ನಟ ದರ್ಶನ್ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಆದ್ರೆ ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.

 

ಇದನ್ನೂ ಓದಿ: 11 ಬಾರಿ ಚಾಕು ಇರಿದು ನೇಹಾ ಹಿರೇಮಠ್ ಕೊಲೆ; ಲವ್ ಜಿಹಾದ್ ಅನುಮಾನ, ತನಿಖೆಗೆ ಆಗ್ರಹ

ಹೌದು, ಮಂಡ್ಯದ ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಅವರು ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದರು. ಆದರೆ ಪ್ರಚಾರದ ವಾಹನದ ವೇಗವಾಗಿ ಮುಂದೆ ಸಾಗುತ್ತಿದ್ದಾಗ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರಬಾಚಹಳ್ಳಿ ಬಳಿ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ. ಆದರೆ ಅದೃಷ್ಟವಶಾತ್ ರೋಡ್ ಶೋ ವೇಳೆ ವಿದ್ಯುತ್ ವಯರ್ ತುಂಡಾಗಿ ಬಿದ್ದಿದ್ದರಿಂದ ಮುಂದಾಗಲಿದ್ದಂತ ಭಾರೀ ಅನಾಹುತವೊಂದು ತಪ್ಪಿದೆ.

ಸದ್ಯ ಈ ಘಟನೆಯಲ್ಲಿ ನಟ ದರ್ಶನ್ ಹಾಗೂ ಕಾಂಗ್ರೆಸ್​​ ಕಾರ್ಯಕರ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು, ಈ ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣವಿತ್ತು. ಘಟನೆಯ ಬಳಿಕ ನಟ ದರ್ಶನ್ ಲೋಕಸಭಾ ಚುನಾವಣಾ ಪ್ರಚಾರ ಮೊಟಕುಗೊಳಿಸಿ ಬೆಂಗಳೂರಿಗೆ ತೆರಳಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಡ್ಯ ರೋಡ್‌ ಶೋನಲ್ಲಿ ತಪ್ಪಿದ ಅನಾಹುತ.. ಕೂದಲೆಳೆ ಅಂತರದಲ್ಲಿ ಪಾರಾದ ನಟ ದರ್ಶನ್‌; ಏನಾಯ್ತು?

https://newsfirstlive.com/wp-content/uploads/2024/04/mnd2.jpg

    ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ನಟ ದರ್ಶನ್​

    ಮಂಡ್ಯ ಕಾಂಗ್ರೆಸ್​​ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಕ್ಯಾಂಪೇನ್ ವೇಳೆ ಘಟನೆ

    ವಿದ್ಯುತ್ ತಂತಿ ತುಂಡಾಗಿ ಬೀಳುತ್ತಿದ್ದಂತೆ ಆತಂಕಗೊಂಡ ಕಾರ್ಯಕರ್ತರು

ಮಂಡ್ಯ: ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ನಟ ದರ್ಶನ್ ಸಖತ್​ ಬ್ಯುಸಿಯಾಗಿದ್ದರು. ಆದರೆ ಇದೇ ವೇಳೆ ನಟ ದರ್ಶನ್ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಆದ್ರೆ ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.

 

ಇದನ್ನೂ ಓದಿ: 11 ಬಾರಿ ಚಾಕು ಇರಿದು ನೇಹಾ ಹಿರೇಮಠ್ ಕೊಲೆ; ಲವ್ ಜಿಹಾದ್ ಅನುಮಾನ, ತನಿಖೆಗೆ ಆಗ್ರಹ

ಹೌದು, ಮಂಡ್ಯದ ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಅವರು ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದರು. ಆದರೆ ಪ್ರಚಾರದ ವಾಹನದ ವೇಗವಾಗಿ ಮುಂದೆ ಸಾಗುತ್ತಿದ್ದಾಗ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರಬಾಚಹಳ್ಳಿ ಬಳಿ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ. ಆದರೆ ಅದೃಷ್ಟವಶಾತ್ ರೋಡ್ ಶೋ ವೇಳೆ ವಿದ್ಯುತ್ ವಯರ್ ತುಂಡಾಗಿ ಬಿದ್ದಿದ್ದರಿಂದ ಮುಂದಾಗಲಿದ್ದಂತ ಭಾರೀ ಅನಾಹುತವೊಂದು ತಪ್ಪಿದೆ.

ಸದ್ಯ ಈ ಘಟನೆಯಲ್ಲಿ ನಟ ದರ್ಶನ್ ಹಾಗೂ ಕಾಂಗ್ರೆಸ್​​ ಕಾರ್ಯಕರ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು, ಈ ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣವಿತ್ತು. ಘಟನೆಯ ಬಳಿಕ ನಟ ದರ್ಶನ್ ಲೋಕಸಭಾ ಚುನಾವಣಾ ಪ್ರಚಾರ ಮೊಟಕುಗೊಳಿಸಿ ಬೆಂಗಳೂರಿಗೆ ತೆರಳಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More