ಹೊಸ ಕ್ಯಾಪ್ಟನ್ ಹೇಗೆ ನಿಭಾಯಿಸುತ್ತಾರೆ ಎಂಬುದೇ ಕುತೂಹಲ
ಈ ರೀತಿ ನಿರ್ಧಾರದಿಂದ T20 ತಂಡದ ಮೇಲೆ ಹೆಚ್ಚು ಒತ್ತಡ..!
ಕೆರಿಬಿಯನ್ ಸರಣಿ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಸವಾಲ್
ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಪಂದ್ಯ, 5 ಟಿ20 ಸರಣಿ ಬೆನ್ನಲ್ಲೇ ಆಗಸ್ಟ್ 18 ರಿಂದ ಐರ್ಲೆಂಡ್ ಜೊತೆಗೆ 3 ಪಂದ್ಯಗಳ ಟಿ20 ಸರಣಿ ಆಡಲಿದೆ. ಹೀಗಾಗಿ ಟಿ20 ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯಗೆ ರೆಸ್ಟ್ ನೀಡುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಟಿ20 ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ 360 ಖ್ಯಾತಿಯ ಸೂರ್ಯಕುಮಾರ್ ಯಾದವ್ ಟಿ20 ತಂಡದ ಸಾರಥ್ಯ ವಹಿಸಲಿದ್ದಾರೆ ಎಂದು ಹೇಳಲಾಗ್ತಿದೆ. ಪಾಂಡ್ಯ ಅವರಿಗೆ ಐರ್ಲೆಂಡ್ ಸರಣಿಯಿಂದ ವಿಶ್ರಾಂತಿ ನೀಡಲು ಬಿಸಿಸಿಐ ಬಯಸಿದೆ. ಹೀಗಾಗಿ ಉಪನಾಯಕ ಸೂರ್ಯ ಕುಮಾರ್ಗೆ ಕ್ಯಾಪ್ಟನ್ಸಿ ಕಟ್ಟಲು ಮುಂದಾಗಿದೆ. ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಬಿಸಿಸಿಐ ಹೇಳಿದೆ.
ಇದೇ ವರ್ಷದಲ್ಲಿ ವಿಶ್ವಕಪ್ ಹಾಗೂ ಏಷ್ಯ ಕಪ್ ಪಂದ್ಯಗಳು ನಡೆಯುವುದರಿಂದ ಆಟಗಾರರಿಗೆ ಬಿಡುವಿಲ್ಲದ ಶೆಡ್ಯೂಲ್ಡ್ ಇರಲಿದೆ. ಇದರಿಂದ ಹಾರ್ದಿಕ್ ಪಾಂಡ್ಯ ಜೊತೆಗೆ ಶುಭ್ಮನ್ ಗಿಲ್ಗೂ ವಿಶ್ರಾಂತಿ ನೀಡಬಹುದು ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಹೊಸ ಕ್ಯಾಪ್ಟನ್ ಹೇಗೆ ನಿಭಾಯಿಸುತ್ತಾರೆ ಎಂಬುದೇ ಕುತೂಹಲ
ಈ ರೀತಿ ನಿರ್ಧಾರದಿಂದ T20 ತಂಡದ ಮೇಲೆ ಹೆಚ್ಚು ಒತ್ತಡ..!
ಕೆರಿಬಿಯನ್ ಸರಣಿ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಸವಾಲ್
ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಪಂದ್ಯ, 5 ಟಿ20 ಸರಣಿ ಬೆನ್ನಲ್ಲೇ ಆಗಸ್ಟ್ 18 ರಿಂದ ಐರ್ಲೆಂಡ್ ಜೊತೆಗೆ 3 ಪಂದ್ಯಗಳ ಟಿ20 ಸರಣಿ ಆಡಲಿದೆ. ಹೀಗಾಗಿ ಟಿ20 ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯಗೆ ರೆಸ್ಟ್ ನೀಡುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಟಿ20 ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ 360 ಖ್ಯಾತಿಯ ಸೂರ್ಯಕುಮಾರ್ ಯಾದವ್ ಟಿ20 ತಂಡದ ಸಾರಥ್ಯ ವಹಿಸಲಿದ್ದಾರೆ ಎಂದು ಹೇಳಲಾಗ್ತಿದೆ. ಪಾಂಡ್ಯ ಅವರಿಗೆ ಐರ್ಲೆಂಡ್ ಸರಣಿಯಿಂದ ವಿಶ್ರಾಂತಿ ನೀಡಲು ಬಿಸಿಸಿಐ ಬಯಸಿದೆ. ಹೀಗಾಗಿ ಉಪನಾಯಕ ಸೂರ್ಯ ಕುಮಾರ್ಗೆ ಕ್ಯಾಪ್ಟನ್ಸಿ ಕಟ್ಟಲು ಮುಂದಾಗಿದೆ. ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಬಿಸಿಸಿಐ ಹೇಳಿದೆ.
ಇದೇ ವರ್ಷದಲ್ಲಿ ವಿಶ್ವಕಪ್ ಹಾಗೂ ಏಷ್ಯ ಕಪ್ ಪಂದ್ಯಗಳು ನಡೆಯುವುದರಿಂದ ಆಟಗಾರರಿಗೆ ಬಿಡುವಿಲ್ಲದ ಶೆಡ್ಯೂಲ್ಡ್ ಇರಲಿದೆ. ಇದರಿಂದ ಹಾರ್ದಿಕ್ ಪಾಂಡ್ಯ ಜೊತೆಗೆ ಶುಭ್ಮನ್ ಗಿಲ್ಗೂ ವಿಶ್ರಾಂತಿ ನೀಡಬಹುದು ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ