ರಾಜ್ಯಾದ್ಯಂತ ಮನೆ ಮಾಡಿದ ಸ್ವಾತಂತ್ರ್ಯೋತ್ಸವ ಸಂಭ್ರಮ
ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ ಮುಖ್ಯಮಂತ್ರಿ
77ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧ್ವಜಾರೋಹಣ ಮಾಡಿದ್ದಾರೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ತ್ರಿವರ್ಣ ಧ್ವಜವನ್ನು ಆರೋಹಣ ಮಾಡುವ ಮೂಲಕ ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ವಿಶೇಷವಾಗಿ ಸೇನೆ, ಪ್ಯಾರಾ ಮಿಲಿಟರಿ ಪಡೆಗಳು, ಅಗ್ನಿಶಾಮಕ ದಳ, ಸೇವಾ ದಳ, ರಾಜ್ಯ ಮೀಸಲು ಪೊಲೀಸ್ ಪಡೆಗಳು, ಎನ್ಸಿಸಿ, ಆರ್ಮಿ ಸ್ಕೂಲ್, ವಿದ್ಯಾರ್ಥಿಗಳು ಪರೇಡ್ ನಡೆಸಿದರು. ಶಾಲಾ ವಿದ್ಯಾರ್ಥಿಗಳು ವಿಧವಿಧವಾದ ನೃತ್ಯಗಳನ್ನು ಮಾಡಿ ನೋಡುಗರ ಕಣ್ಮನ ಸೆಳೆದರು.
ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಅನೇಕ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿದ್ಯಾರ್ಥಿಗಳ, ಪೊಲೀಸರ ಪರೇಡ್ ಎಲ್ಲರನ್ನು ಚಕಿತರನ್ನಾಗಿ ಮಾಡುವಂತೆ ಇತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಜ್ಯಾದ್ಯಂತ ಮನೆ ಮಾಡಿದ ಸ್ವಾತಂತ್ರ್ಯೋತ್ಸವ ಸಂಭ್ರಮ
ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ ಮುಖ್ಯಮಂತ್ರಿ
77ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧ್ವಜಾರೋಹಣ ಮಾಡಿದ್ದಾರೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ತ್ರಿವರ್ಣ ಧ್ವಜವನ್ನು ಆರೋಹಣ ಮಾಡುವ ಮೂಲಕ ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ವಿಶೇಷವಾಗಿ ಸೇನೆ, ಪ್ಯಾರಾ ಮಿಲಿಟರಿ ಪಡೆಗಳು, ಅಗ್ನಿಶಾಮಕ ದಳ, ಸೇವಾ ದಳ, ರಾಜ್ಯ ಮೀಸಲು ಪೊಲೀಸ್ ಪಡೆಗಳು, ಎನ್ಸಿಸಿ, ಆರ್ಮಿ ಸ್ಕೂಲ್, ವಿದ್ಯಾರ್ಥಿಗಳು ಪರೇಡ್ ನಡೆಸಿದರು. ಶಾಲಾ ವಿದ್ಯಾರ್ಥಿಗಳು ವಿಧವಿಧವಾದ ನೃತ್ಯಗಳನ್ನು ಮಾಡಿ ನೋಡುಗರ ಕಣ್ಮನ ಸೆಳೆದರು.
ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಅನೇಕ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿದ್ಯಾರ್ಥಿಗಳ, ಪೊಲೀಸರ ಪರೇಡ್ ಎಲ್ಲರನ್ನು ಚಕಿತರನ್ನಾಗಿ ಮಾಡುವಂತೆ ಇತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ